Recent Posts

Saturday, May 9, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯ ಡಾಡ್ಜ್ ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ‘ಅಕ್ಷಯಾಭಿನಂದನಾ’ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯಾಭಿನಂದನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಸುದಾನ ವಸತಿ ಶಾಲೆಯ ಸಂಚಾಲಕರಾದ ವಿಜಯ್ ಹಾರ್ವಿನ್‍ರವರು ಉದ್ಘಾಟಿಸಿ, ಭಾರತದ ಮಾನವ ಸಂಪನ್ಮೂಲದ ವೃತ್ತಿಯಲ್ಲಿ ಮುಂದುವರಿಸಲು ಈ ಕಾಲೇಜಿನಲ್ಲಿರುವ ವೃತ್ತಿಪರ ಕೋರ್ಸ್‍ಗಳು ಮಹತ್ವದ ಪಾತ್ರವಹಿಸುತ್ತದೆ ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕ್ರೀಡಾಕ್ಷೇತ್ರದಲ್ಲಿ ಪುತ್ತೂರಿನ ಹಿರಿಮೆಯನ್ನು ಉತ್ತುಂಗಕ್ಕೇರಿಸಿದ ಡಾಡ್ಜ್ ಬಾಲ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಶ್ರೀ ಸುರೇಶ್ ಎನ್.ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜು.15ರಂದು ಮುಳಿಯ ಜ್ಯುವೆಲ್ಸ್ ಹಾಗೂ ಸಮುದಾಯ ಬಾನುಲಿ ರೇಡಿಯೋ ಪಾಂಚಜನ್ಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಭಕ್ತಿಗೀತೆ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು: ಸಮುದಾಯ ಬಾನುಲಿ ರೇಡಿಯೋ ಪಾಂಚಜನ್ಯ 90.8 ಎಫ್‍ಎಂ ಇನ್ನರ್ ವೀಲ್ ಮತ್ತು ಮುಳಿಯ ಜ್ಯುವೆಲ್ಸ್ ಸಹಯೋಗದಲ್ಲಿ ಜುಲೈ 15ರಂದು ಬೆಳಗ್ಗೆ 9 ಗಂಟೆಗೆ ನಾಗರ ಪಂಚಮಿ ಪ್ರಯುಕ್ತ ವಿಶೇಷ ಭಕ್ತಿಗೀತೆ ಸ್ಪರ್ಧೆಯನ್ನು ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಆಯೋಜಿಸಿದೆ. ಭಕ್ತಿಗೀತೆಯನ್ನು ಹಾಡುವ ಅವಧಿ 3+1 ನಿಮಿಷ ಆಗಿದ್ದು 1ರಿಂದ 4ನೇ ತರಗತಿ ಮತ್ತು 5ರಿಂದ 7ನೇ ತರಗತಯ ಮಕ್ಕಳಿಗೆ ಎರಡು ಪ್ರತ್ಯೇಕ ವಿಭಾಗಗಳಲ್ಲಿ ನಡೆಯಲಿದೆ. ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎನ್.ಡಿ.ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತಿಯಾನಂದ್ ಉತ್ತೀರ್ಣ – ಕಹಳೆ ನ್ಯೂಸ್

ಪುತ್ತೂರು: 2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ರವರು 237ನೇ ರ್ಯಾಂಕ್ ಗಳಿಸಿ ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSB) ನಡೆಸುವ ಮೌಖಿಕ ಸಂದರ್ಶನದಲ್ಲಿಯೂ ಉತ್ತೀರ್ಣರಾಗಿದ್ದಾರೆ. ಚಿನ್ನಾಲಪಟ್ಟಿಯ ಪಿ. ಮುರುಗನ್ ಮತ್ತು ರೇಣುಕಾ...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ – ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಜು 14: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನ ಮುಂದಿನ 48...
ದಕ್ಷಿಣ ಕನ್ನಡಸುದ್ದಿ

“ಕೆಂಜಾರ್-ಅದ್ಯಪಾಡಿ ರಸ್ತೆ ಸಂಚಾರಕ್ಕೆ ಮುಕ್ತಿ” – ಶಾಸಕ ಡಾ.ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಕೆಂಜಾರ್ ನಿಂದ ಅದ್ಯಪಾಡಿ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದ್ದಾರೆ.   ವಿಪರೀತ ಮಳೆಯಿಂದ 6 ದಿನಗಳ ಹಿಂದೆ ಕೆಲವು ಕಡೆ ರಸ್ತೆಯ ಕೆಳಗಿನ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗಿತ್ತು. ಇದರಿಂದ ರಸ್ತೆ ಸಾಕಷ್ಟು ಹಾನಿಗೊಳಗಾಗಿತ್ತು. ಅಪಾಯದ ಪರಿಸ್ಥಿತಿ ಇದ್ದ ಕಾರಣ ವಾಹನ ಸಂಚಾರವನ್ನು ನಿಬಂಧಿಸಲಾಗಿತ್ತು. ಕಂದಾಯ ಸಚಿವರಾದ ಮಾನ್ಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡ ಕಾರು : ತಪ್ಪಿದ ಅಪಾಯ – ಕಹಳೆ ನ್ಯೂಸ್

ಪುತ್ತೂರು: ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ. ಜು.13 ರಂದು ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಮುರಿದು ಬಿದ್ದಿದೆ. ಘಟನೆಯಿಂದಾಗಿ ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ದಂತ ವೈದ್ಯಕೀಯ ಕೇಂದ್ರ ಉದ್ಘಾಟಿಸಿದ ಶಾಸಕ ಡಾ.ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉತ್ತಮ ಗುಣಮಟ್ಟದ ದಂತ ಚಿಕಿತ್ಸೆ ತಜ್ಞ ವೈದ್ಯರಿಂದ ಉಚಿತವಾಗಿ ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದರು ಅವರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್ ನಲ್ಲಿ ಪ್ರಾರಂಭಿಸಲಾದ...
ದಕ್ಷಿಣ ಕನ್ನಡಸುದ್ದಿ

ಶಾರ್ಟ್ ಸರ್ಕ್ಯೂಟ್‌ನಿಂದ ಸಂಪೂರ್ಣ ಭಸ್ಮಗೊಂಡ ಅಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ಘಟನೆ – ಕಹಳೆ ನ್ಯೂಸ್

ವಿಟ್ಲ: ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ದುರ್ಘಟನೆ ಸಂಭವಿಸಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಂಪೂರ್ಣ ಹೊತ್ತಿ ನಾಶವಾಗಿದೆ....
1 582 583 584 585 586 728
Page 584 of 728