ವಿಟ್ಲ ಸಮೀಪ ಬಸ್ ನಿಲ್ದಾಣದಲ್ಲಿ ಪತ್ತೆಯಾದ ರಕ್ತದ ಕುರುಹು; ಸಾರ್ವಜನಿಕರ ಆತಂಕಕ್ಕೆ ತೆರೆ; ಕುಡಿದ ಅಮಲಿನಲ್ಲಿ ವ್ಯಕ್ತಿಯ ಎಡವಟ್ಟು- ಕಹಳೆ ನ್ಯೂಸ್
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ ಪುತ್ತೂರು ಬದನಾಜೆ ರಸ್ತೆಯ ಸಾರ್ವಜನಿಕರ ಬಸ್ಸುತಂಗುದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ ಘಟನೆ ಎಂದು ತಿಳಿದು ಬಂದಿದೆ. ಬದನಾಜೆ ಬಸ್ಸುತಂಗುದಾಣದ ಪಕ್ಕದ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ ಬಂದವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿತ್ತು. ಮಾತ್ರವಲ್ಲದೆ ಪ್ರಕರಣ ಹಲವಾರು ಊಹಾಪೋಹಕ್ಕೆ ಕಾರಣವಾಗಿತ್ತು. ಸ್ಥಳಕ್ಕಾಗಮಿಸಿದ ವಿಟ್ಲ ನಡೆಸಿ...







