ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರಿದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರಿದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ತಮ್ಮ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಶಾಲೆಯ ಸ್ಥಾಪನೆ, ಬೆಳವಣಿಗೆಯ ಬಗ್ಗೆ ತಿಳಿಸುತ್ತಾ, “42 ವರ್ಷಗಳ ಹಿಂದೆ ಬಿತ್ತಿದ ಶಿಕ್ಷಣದ ಬೀಜ ಇಂದು ಬೃಹದಾಕಾರವಾಗಿ ಬೆಳೆದು ನಿಂತ ಶ್ರೀರಾಮ ವಿದ್ಯಾಕೇಂದ್ರದಲ್ಲಿ 3500ಕ್ಕೂ ಹೆಚ್ಚು...







