ಅಂಬಿಕಾ ವಿದ್ಯಾಲಯ (ಸಿ.ಬಿ.ಎಸ್.ಇ.) ದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ –ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಅಂಬಿಕಾ ಸಿಬಿಎಸ್ಇ ವಿದ್ಯಾಲಯಲ್ಲಿ ಶಾಲಾ ಮಟ್ಟದಲ್ಲಿ ನಡೆದ ಚುನಾವಣೆಯ ಅಂಗವಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಉಪನ್ಯಾಸಕ ಹಾಗೂ ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕ ಐತಪ್ಪ ನಾಯ್ಕ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಶಾಲಾ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಐತಪ್ಪ ನಾಯ್ಕ ಅವರು ಮಾತನಾಡಿ ಬೆಳೆಯುವ...







