ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು:- ಶಾಸಕ ವೇದವ್ಯಾಸ್ ಕಾಮತ್ -ಕಹಳೆ ನ್ಯೂಸ್
ಮಂಗಳೂರು :ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ. ಆರಂಭದಿಂದಲೂ ರಾಜಕೀಯ ರಹಿತವಾಗಿ ನಡೆದುಕೊಂಡು ಬಂದ ಈ ಹೋರಾಟದ ಪ್ರತೀ ಹೆಜ್ಜೆಯಲ್ಲೂ ವಕೀಲರ ಸಂಘದ ಜೊತೆ ನಿಂತು...







