ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ -ಕಹಳೆ ನ್ಯೂಸ್
ಮಂಗಳೂರು : ಇತ್ತೀಚೆಗೆ ನಗರದ ಕೋಡಿಕಲ್ ಬಳಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸಚಿನ್ ಕೆ ಆರ್ (24 ವ) ಮತ್ತು ನೆಲ್ಯಾಡಿಯ ಚಂದನ್ (24 ವ) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಮೇ 24 ರಂದು ಮಧ್ಯರಾತ್ರಿ 02:10 ಗಂಟೆಯ ವೇಳೆಗೆ ಉರ್ವ ಪೊಲೀಸ್...







