Saturday, May 2, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆ ಆಗ್ರಹಿಸಿ ವಿ.ಹಿಂ.ಪ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿದ್ದ ಮನವಿಗೆ ಸ್ಪಂದನೆ : ಸೂಕ್ತ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಸಚಿವರಿಂದ ಮನವಿ- ಕಹಳೆ ನ್ಯೂಸ್

ವಿಟ್ಲ: ಇತ್ತೀಚಿಗೆ ಕನ್ಯಾನದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಲವ್ ಜಿಹಾದ್‍ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹಿತ್ತು. ಈ ಬಗ್ಗೆ ಕರ್ನಾಟಕ ಸರಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ ಸುನಿಲ್ ಕುಮಾರ್‍ರನ್ನು ಭೇಟಿ ಮಾಡಿದ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಭೇಟಿ – ಕಹಳೆ ನ್ಯೂಸ್

ಮಂಗಳೂರು ನಗರದ ಅಳಕೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಗೆ ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿದ್ದಾರೆ. ಅಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವರು ಅತೀ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಉದ್ಯಮಶೀಲತೆಯನ್ನು ಬೆಳೆಸಲು ತರುಣರು ಮುಂದಾಗಬೇಕು ಎಂದು ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಕುದ್ರು...
ದಕ್ಷಿಣ ಕನ್ನಡಸುದ್ದಿ

ಪಣಂಬೂರ್ ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು- ಕಹಳೆ ನ್ಯೂಸ್

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ನಡೆದಿದೆ. ಮೈಸೂರಿನ ಮೂವರು ಸ್ನೇಹಿತರು ಮಂಗಳೂರಿನಲ್ಲಿ ನಡೆಯುತ್ತಿದ್ದ ಹಲಸಿನ ಮೇಳಕ್ಕೆ ಬಂದಿದ್ದು, ಇಂದು ಬೆಳಗ್ಗೆ 7:30 ರ ವೇಳೆಗೆ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ಬಂದಿದ್ದಾರೆ. ಈ ವೇಳೆ ಬೀಚ್ ನಲ್ಲಿ ಈಜಲು ಇಳಿದ ನಾಲ್ವರಲ್ಲಿ ದಿವಾಕರ್ ಆರಾಧ್ಯ (45), ನಿಂಗಪ್ಪ (60) ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಬಗ್ಗೆ ಅವಿನಾಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

‘ರಜೆಯ ವಿಹಾರ – ಚಿಣ್ಣರ ವಿಚಾರ’ : ಮುಳಿಯ ಜ್ಯುವೆಲ್ಸ್ ನಿಂದ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ- ಕಹಳೆ ನ್ಯೂಸ್

ಪುತ್ತೂರು : ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಪುತ್ತೂರಿನ ಖ್ಯಾತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ 10 ರಿಂದ 15 ವರ್ಷದೊಳಗಿನ ಮಕ್ಕಳಿಗಾಗಿ ‘ರಜೆಯ ವಿಹಾರ – ಚಿಣ್ಣರ ವಿಚಾರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ತಮ್ಮ ಬೇಸಿಗೆ ರಜೆಯನ್ನು ಹೇಗೆ ಕಳೆದರು ಎಂಬುದರ ಬಗ್ಗೆ ಕನ್ನಡದಲ್ಲಿ ಪ್ರಬಂಧಗಳನ್ನು ಬರೆದು 9353030916 ಗೆ ಮೇ 31 ರ ಒಳಗೆ ಕಳುಹಿಸಿಕೊಡಬೇಕು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರು ಆಕರ್ಷಕ ಬಹುಮಾನಗಳನ್ನೂ...
ದಕ್ಷಿಣ ಕನ್ನಡಸುದ್ದಿ

ಪರಾತ್ಪರ ಗುರು ಡಾ. ಜಯಂತ ಆಠವಲೆಯವರ ಜನ್ಮ ದಿನದ ನಿಮಿತ್ತ ಮಂಗಳೂರಿನಲ್ಲಿ ಹಿಂದೂ ಐಕ್ಯತಾ ಮೆರವಣಿಗೆ ! – ಕಹಳೆ ನ್ಯೂಸ್

ಮಂಗಳೂರು : ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಜಯಂತ ಆಠವಲೆಯವರ ಜನ್ಮೋತ್ಸವದ ಅಂಗವಾಗಿ ದೇಶದಲ್ಲೆಡೆ ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಮಂಗಳೂರಿನಲ್ಲಿ ಗುರುವಾರ ಹಿಂದೂ ಐಕ್ಯತಾ ಮೆರವಣಿಗೆ ನಡೆಯಿತು. ಬಲ್ಮಠದಲ್ಲಿ ಕದ್ರಿ ಕಾರ್ಪೊರೇಟರ್ ಶ್ರೀ ಮನೋಹರ ಶೆಟ್ಟಿ, ಇವರು ಧ್ವಜ ಪೂಜೆಯ ಮೂಲಕ  ಐಕ್ಯತಾ ಮೆರವಣಿಗೆಗೆ ಚಾಲನೆ ನೀಡಿದರು. ಸನಾತನ ಸಂಸ್ಥೆಯ ಸಂತರಾದ ಪೂಜನೀಯ ರಮಾನಂದ,ಪೂಜ್ಯ ವಿನಾಯಕ ಕರ್ವೆ,ಪೂಜ್ಯ ರಾಧಾ ಪ್ರಭು ಇವರು ಮಂಗಳಾದೇವಿ ಮತ್ತು...
ದಕ್ಷಿಣ ಕನ್ನಡಸುದ್ದಿ

ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮಂಗಳೂರಿನ ಯುವತಿ – ಕಹಳೆ ನ್ಯೂಸ್

ಮಂಗಳೂರು: ಕಜಕಿಸ್ತಾನದಲ್ಲಿ ನಡೆದಿರುವ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮಂಗಳೂರಿನ ಯುವತಿಯೊಬ್ಬರು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರುವ ಏಳಿಂಜಿ ನಿವಾಸಿ ಸಿಯಾ ಶೆಟ್ಟಿಯವರು ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಸಿಯಾ ಶೆಟ್ಟಿಯವರು ಕಿನ್ನಿಗೋಳಿಯ ವೀರ ಮಾರುತಿ ವ್ಯಾಯಾಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿದ್ದಾರೆ. ಮಂಗಳೂರಿನ ಈಶ್ವರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪಿಯುಸಿ ನಂತರ ಮುಂದೇನು…..? ಗೊಂದಲದಲ್ಲಿರುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೊಂದು ಪುತ್ತೂರಿನಲ್ಲಿ ಸಂಪೂರ್ಣ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ 'ವಿದ್ಯಾಮಾತಾ ಅಕಾಡೆಮಿ' ಪುತ್ತೂರು ಇದರ ವತಿಯಿಂದ ಜೂ. 5 ರಂದು ಪಿಯುಸಿ ವಿದ್ಯಾಭ್ಯಾಸದ ನಂತರ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಯಾವ ರೀತಿಯ ಶಿಕ್ಷಣವನ್ನು ಪಡೆಯಬೇಕು ಮತ್ತು ಲಭ್ಯವಿರುವ ಉದ್ಯೋಗ ಅವಕಾಶಗಳು ಹಾಗೂ ವಿದ್ಯಾರ್ಥಿವೇತನಗಳ ಬಗ್ಗೆ ಸಂಪೂರ್ಣ ಮಾಹಿತಿ ಕಾರ್ಯಗಾರ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ 'ಶ್ರೀ ನವೀನ್ ಭಂಡಾರಿ' ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ 'ಡಾ.ಶರಣ್ ಕುಮಾರ್ ಶೆಟ್ಟಿ' ಮತ್ತು...
ಕಡಬದಕ್ಷಿಣ ಕನ್ನಡಸುದ್ದಿ

ನೆಲ್ಯಾಡಿ: ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ಟಿಪ್ಪರ್- ಕಾರು, ಮಧ್ಯೆ ನಡೆದ ಅಪಘಾತದಲ್ಲಿ ಓರ್ವ ಬಲಿ – ಕಹಳೆ ನ್ಯೂಸ್

ನೆಲ್ಯಾಡಿ: ಟಿಪ್ಪರ್, ಇಕೋ ಹಾಗೂ ಲಾರಿಯೊಂದರ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಈಕೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ. ನೆಲ್ಯಾಡಿಯಿಂದ ಶಿರಾಡಿಗೆ ಹೋಗುತ್ತಿದ್ದ ಈಕೋ ಕಾರು ಮಣ್ಣಗುಂಡಿಯಲ್ಲಿ ಕಲ್ಲಿದ್ದಲು ಸಾಗಾಟದ ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಶಿರಾಡಿ ಗ್ರಾಮದ ಶಿರ್ವತ್ತಡ್ಕ ನಿವಾಸಿ ನೆಲ್ಸನ್ (42) ಮೃತಪಟ್ಟಿದ್ದಾರೆ....
1 600 601 602 603 604 726
Page 602 of 726