ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ- ಕಹಳೆ ನ್ಯೂಸ್
ಪುತ್ತೂರು: ಪ್ರಥಮ ಚಿಕಿತ್ಸೆ ಎಂಬ ಕೌಶಲವು ಯಾರಿಗಾದರೂ, ಎಲ್ಲಿಯಾದರೂ ಅಗತ್ಯ ಬೀಳಬಹುದು. ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಇದರಿಂದ ಮನುಷ್ಯ ಜೀವವನ್ನು ರಕ್ಷಿಸಬಹುದು. ಹಾಗಾಗಿ, ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸಾ ತರಬೇತಿಯನ್ನು ಪಡೆಯಬೇಕು ಎಂದು ಜೋಸೆಫ್ ಆಸ್ಪತ್ರೆ ಕಕ್ಕಿಂಜೆ ಇಲ್ಲಿನ ಸಮುದಾಯ ಆರೋಗ್ಯ ತಜ್ಞೆ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಡಾ. ಅನನ್ಯ ಲಕ್ಷ್ಮಿ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಐದನೇ ದಿನದ ಕಾರ್ಯಕ್ರಮದಲ್ಲಿ...







