Tuesday, April 28, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ನಡೆಯುವ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರವನ್ನು ಮಾ.21ರಂದು ದೇವಳದ ಹೊರಾಂಗಣದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿದರು. ದೇವಳದ ಪ್ರಧಾನ ಅರ್ಚಕರಾದ ವಸಂತ ಕೆದಿಲಾಯ ಅವರು ಮುದ್ರಿತ ಆಮಂತ್ರಣ ಪತ್ರಿಕೆಯನ್ನು ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಆಮಂತ್ರಣ ಪತ್ರಕ್ಕೆ ಗಂಧ ಪ್ರಸಾದ ಲೇಪಿಸಿ ಪವಿತ್ರಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಮಂಗಳೂರು ಕೆ.ಎಂ.ಎಫ್. ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು,ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ.ಜಯರಾಮ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಕದ್ರಿ ದೇವಳದ ಹುಂಡಿ ಹಣಕ್ಕೆ ಕನ್ನ ಹಾಕಿದ ಮಹಿಳಾ ಟ್ರಸ್ಟಿ : ಸಿಸಿಟಿವಿಯಲ್ಲಿ ದೃಶ್ಯ ಸೆರೆ- ಕಹಳೆ ನ್ಯೂಸ್

ಮಂಗಳೂರು : ಕದ್ರಿ ಮಂಜುನಾಥ ಕ್ಷೇತ್ರದ ಕಾಣಿಗೆ ಹುಂಡಿಗೆ ಸರಕಾರದಿಂದ ನೇಮಕವಾದ ಟ್ರಸ್ಟಿಯೇ ಕನ್ನ ಹಾಕಿರುವ ಘಟನೆ ನಡೆದಿದ್ದು, ಈ ಕೃತ್ಯದ ವಿಡಿಯೋ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಫೆ 24ರಂದು ದೇವಾಸ್ಥಾನದ ಕಾಣಿಕೆ ಡಬ್ಬಿ ಹಣದ ಲೆಕ್ಕಚಾರ ನಡೆಸಿದ್ದು, ಇದಾಗಿ ಎರಡು ದಿನಗಳ ಬಳಿಕ ಟ್ರಸ್ಟಿಯೊಬ್ಬರಿಗೆ ಅಪರಿಚಿತ ಮಹಿಳೆ ಕರೆ ಮಾಡಿ, 500 ರೂ. ನೋಟುಗಳನ್ನು ಮಹಿಳಾ ಟ್ರಸ್ಟಿ ತನ್ನ ಬ್ಲೌಸ್ ಒಳಗೆ ತುರುಕಿಸುತ್ತಿರುವುದನ್ನು ನಾನು ನೋಡಿದ್ದೇನೆ. ಬೇಕಾದರೆ ಸಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಜಲ ದಿನದ ಅಂಗವಾಗಿ “ಅಟಲ್ ಭೂಜಲ ಜಾಗೃತಿ ಸಪ್ತಾಹ” ಕಾರ್ಯಕ್ರಮ- ಕಹಳೆ ನ್ಯೂಸ್

ವಿಶ್ವ ಜಲ ದಿನದ ಅಂಗವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಅಗೋಚರ ಅಂತರ್ಜಲವನ್ನು ಗೋಚರಿಸುವಂತೆ ಮಾಡುವುದು ಎನ್ನುವ ಘೋಷಣೆಯೊಂದಿಗೆ “ಅಟಲ್ ಭೂಜಲ ಜಾಗೃತಿ ಸಪ್ತಾಹ”ಕ್ಕೆ ಚಾಲನೆಯನ್ನು ನೀಡಲಾಯಿತು. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ಸುಮಂತ್ ಆಳ್ವ ಎಮ್, ‘ಸುಸ್ಥಿರ ಅಂತರ್ಜಲ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ’ ಎನ್ನುವ ವಿಷಯವನ್ನು ಮಂಡಿಸುತ್ತಾ “ನೀರಿನ ಸಂರಕ್ಷಣೆ, ಶುದ್ಧನೀರಿನ ಸಾರ್ವತ್ರಿಕ ಲಭ್ಯತೆಗೆ ವಿದ್ಯಾರ್ಥಿ ದೆಸೆಯಿಂದಲೇ ಭಗೀರಥ ಪ್ರಯತ್ನ ಆಗಬೇಕು. ನೀರಿನ ಕೊರತೆಯನ್ನು...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕೋರ್ದಬ್ಬು ದೈವಸ್ಥಾನ ಅಪವಿತ್ರಗೊಳಿಸಿದ್ದ ಮುಸ್ಲಿಂ ಯುವಕ ಸಾಹುಲ್ ಹಮೀದ್ ಸೆರೆ – ಕಹಳೆ ನ್ಯೂಸ್

ಮಂಗಳೂರು, ಮಾ 22 : ಕೈಕಂಬ ಸಮೀಪದ ಕಂದಾವರ ಗ್ರಾಮದ ಶ್ರೀ ಕೋರ್ದಬ್ಬು ದೈವಸ್ಥಾನವನ್ನು ಅಪವಿತ್ರಗೊಳಿಸಿದ ಯುವಕನನ್ನು ಮಾರ್ಚ್ 21ರಂದು ಬಜ್ಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಿನ್ನಿಕಂಬಳ ,ಕಂದಾವರ ಚರ್ಚ್ ರಸ್ತೆಯ ನಿವಾಸಿ ಸಾಹುಲ್ ಹಮೀದ್ (27) ಎಂದು ಗುರುತಿಸಲಾಗಿದೆ. ಮಾ.20ರಂದು ಈ ದೈವಸ್ಥಾನವನ್ನು ಮಲಿನಗೊಳಿಸಲಾಗಿತ್ತು. ಈ ಬಗ್ಗೆ ಸಿಸಿ ಕ್ಯಾಮರಾದ ದೃಶ್ಯಗಳ ಆಧಾರದ ಮೇಲೆ ದೂರು ದಾಖಲಿಸಿದ ಕೇವಲ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.23ರಂದು ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳ ವ್ಯವಹಾರದ ಅನುಭವಕ್ಕಾಗಿ ವಿದ್ಯಾರ್ಥಿಗಳಿಂದ ಸಂತೆ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳಿಗೆ ವ್ಯವಹಾರದ ಪ್ರತ್ಯಕ್ಷ ಅನುಭವಕ್ಕಾಗಿ ಪುರುಷರಕಟ್ಟೆಯ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಮಾ.23ರಂದು ವಿದ್ಯಾರ್ಥಿಗಳ ಸಂತೆ ನಡೆಯಲಿದೆ. ವಿದ್ಯಾರ್ಥಿಗಳು ನಡೆಸುತ್ತಿರುವ ಈ ಸಂತೆಯಲ್ಲಿ ತರಕಾರಿ, ಲೇಖನ ಸಾಮಾಗ್ರಿ, ಆಭರಣ, ಕೃಷಿ ಉತ್ಪನ್ನಗಳು, ಪಾನೀಯಗಳು, ಉಪ್ಪಿನಕಾಯಿ, ಕಷಾಯ ಪುಡಿ, ಸಾಂಬಾರ ಪದಾರ್ಥಗಳು ಹಾಗೂ ಇತ್ಯಾದಿ ತಿಂಡಿ- ತಿನಿಸುಗಳು ಲಭ್ಯವಿರುತ್ತದೆ. ನೀವು ಬನ್ನಿ ವಿದ್ಯಾರ್ಥಿಗಳ ಸಂತೆಯಲ್ಲಿ ಭಾಗವಹಿಸಿ, ಅಗತ್ಯ ವಸ್ತುಗಳನ್ನು ಖರೀದಿಸಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸೋಣ.....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಜಾತ್ರೋತ್ಸವದ ಪ್ರಯುಕ್ತ ಏಪ್ರಿಲ್ 10 ರಿಂದ 25ರ ವರೆಗೆ ಪುತ್ತೂರು ವ್ಯವಹಾರ ಮೇಳ-ವ್ಯವಹಾರಕ್ಕೆ ಹಿಂದೂ ಬಾಂದವರಿಗೆ ಮಾತ್ರ ಅವಕಾಶ- ಕಹಳೆ ನ್ಯೂಸ್

ಪುತ್ತೂರು : ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಏಪ್ರಿಲ್ 10 ರಿಂದ 17ರ ವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಪುತ್ತೂರು ಜಾತ್ರೋತ್ಸವದ ಪ್ರಯುಕ್ತ, ಏಪ್ರಿಲ್ 10 ರಿಂದ 25ರ ವರೆಗೆ, ಪುತ್ತೂರು ವ್ಯವಹಾರ ಮೇಳ, ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು ವ್ಯವಹಾರ ಮೇಳದಲ್ಲಿ ವ್ಯಾಪಾರ ಹಾಗೂ ವ್ಯವಹಾರಕ್ಕೆ ಹಿಂದೂ ಬಾಂದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಾತ್ರೆಗದ್ದೆ ಸಂತೆ ಏಲಂ ಪ್ರಕಟಣೆ 1.ಶ್ರೀ ದೇವಳದ ಎದುರು ಭಾಗದ ಗದ್ದೆಯಲ್ಲಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ನಂದಿಗುಡ್ಡೆಯ ಫ್ಲಾಟ್‍ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣ : ಬಂಧಿತರ ಸಂಖ್ಯೆ 16ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು: ನಂದಿಗುಡ್ಡದಲ್ಲಿರುವ ಫ್ಲ್ಯಾಟ್‍ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‍ಮೇಲ್ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ, ಮಹಿಳೆ ಮತ್ತು ಯುವತಿಯರ ಮಾನವ ಕಳ್ಳ ಸಾಗಾಣಿಕೆ, ಪ್ರಕರಣ ಗಳಿಗೆ ಸಂಬಂಧಪಟ್ಟಂತೆ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಪ್ರಕರಣದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಪೆÇಲೀಸರು ಮಾ.18 ರಂದು ಉಳ್ಳಾಲದ ಅಬ್ದುಲ್ ರಾಝೀಕ್ ಉಳ್ಳಾಲ್ (44) ಅಲಿಯಾಸ್ ರಫೀಕ್ ಉಳ್ಳಾಲನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಇಬ್ಬರು ಅಪ್ರಾಪ್ತ...
1 619 620 621 622 623 725
Page 621 of 725