ಮಂಗಳೂರು : ಮಂಗಳಾದೇವಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ರಸ್ತೆಯಲ್ಲಿ ಅಳವಡಿಸಲಾದ ತುಳು ಲಿಪಿಯ ನಾಮಫಲಕ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು : ಸುಪ್ರಸಿದ್ಧ ಮಂಗಳಾದೇವಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ರಸ್ತೆಯಲ್ಲಿ ತುಳು ಲಿಪಿಯ ನಾಮಫಲಕವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೆಲವು ಸಮಯದ ಹಿಂದೆ ತುಳು ಸಂಘಟನೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶಿಶ್ಮಿತ ಎನ್ಮುವ ಪುಟ್ಟ ಹುಡುಗಿ ಮಂಗಳದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಸುವಂತೆ ಸ್ವತಃ ತಾನೇ ತುಳು ಲಿಪಿಯಲ್ಲಿ ಮನವಿ ಬರೆದು ನೀಡಿದ್ದಳು. ಆಕೆಯ ಕೋರಿಕೆಯಂತೆ ಮಂಗಳಾದೇವಿ ದೇವಸ್ಥಾನ...







