ವಿವೇಕಾನಂದ ಕಾಲೇಜಿನಲ್ಲಿ 2022ರ ಬಜೆಟ್ ಬಗೆಗೆ ವಿದ್ಯಾರ್ಥಿಗಳ ವಿಚಾರ ಮಂಡನೆ ಮತ್ತು ಅವಲೋಕನ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು : ಸ್ವಾತಂತ್ರ್ಯಾ ನಂತರದಿಂದಲೂ ರಾಷ್ಟ್ರ ಅಭಿವೃದ್ಧಿ ಪಥದಲ್ಲೇ ಇದೆ. ಭಾರತ ಸರ್ವತೋಮುಖ ಅಭಿವೃದ್ಧಿ ಹೊಂದಲು ನಮ್ಮ ಹಣಕಾಸಿನ ಯೋಜನೆಗಳನ್ನು ಬದಲಾಯಿಸಬೇಕು. ಪ್ರಸ್ತುತ ದೇಶದ ಸುಸ್ಥಿರ ಅಭಿವೃದ್ದಿಯತ್ತ ಗಮನ ಹರಿಸುವ ಅಗತ್ಯತೆ ಇದೆ ಎಂದು ಇಲ್ಲಿನ ಸರಕಾರಿ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಸುಕೇಶ್ ಪಿ ಹೇಳಿದರು. ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ಬಜೆಟ್ 2022ರ ಬಗೆಗೆ ವಿದ್ಯಾರ್ಥಿಗಳ ವಿಚಾರ ಮಂಡನೆ...







