ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ ” ದೈವ ಸಂಕಲ್ಪ” ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಅಗ್ರಹಿಸಿ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಬಂಟ್ವಾಳ ಶಾಸಕರ ಮನವಿ – ಕಹಳೆ ನ್ಯೂಸ್
ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲವನ್ನು ರಾಜ್ಯ ಸರಕಾರದ ನೂತನ " ದೈವ ಸಂಕಲ್ಪ" ಯೋಜನೆಯಡಿ ಸೇರಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಮುಜರಾಯಿ, ಹಜ್ ಮತ್ತು ವರ್ಕ್ಸ್ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಅವರು ಬೆಂಗಳೂರಿನಲ್ಲಿ ಇಂದು ಮನವಿ ನೀಡಿದರು. ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮದಲ್ಲಿ ಫಲ್ಗುಣಿ ನದಿ ತೀರದಲ್ಲಿರುವ ಮಾರ್ಕಾಂಡೇಯ ಪುರಾಣದಲ್ಲಿ ಉಲ್ಲೇಖವಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕರ್ನಾಟಕ ಸರಕಾರದ...







