ಇತಿಹಾಸ ಪ್ರಸಿದ್ಧ ಕಾರಿಂಜ ಕ್ಷೇತ್ರದ ಆಸುಪಾಸು ಕಲ್ಲು ಗಣಿಗಾರಿಕೆ ಚಟುವಟಿಕೆ ಬ್ರೇಕ್ ; ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನದಲ್ಲಿ ಸಾಧು ಸಂತರ, ಹಿಂದೂ ಜಾಗರಣಾ ವೇದಿಕೆಯ ಬಹುದಿನಗಳ ಹೋರಾಟಕ್ಕೆ ವಿ. ಸುನೀಲ್ ಕುಮಾರ್ ಮನ್ನಣೆ – ಖಡಕ್ ಆದೇಶ – ಕಹಳೆ ನ್ಯೂಸ್
ಬಂಟ್ವಾಳ, ಫೆ 14 : ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್...







