ಮನೆಯವರಲ್ಲಿ ವಿದೇಶಕ್ಕೆ ಹೋಗುವುದಾಗಿ ಹೇಳಿ ಬಂದಿದ್ದ ವ್ಯಕ್ತಿ ಶವವಾಗಿ ಪತ್ತೆ – ಕಹಳೆ ನ್ಯೂಸ್
ಉಳ್ಳಾಲ : ವಿದೇಶಕ್ಕೆ ತೆರಳುತ್ತೇನೆ ಎಂದು ಮನೆಯವರಲ್ಲಿ ಮತ್ತು ಸ್ನೇಹಿತರಲ್ಲಿ ತಿಳಿಸಿದ್ದ ವ್ಯಕ್ತಿಯೋರ್ವ ತಡರಾತ್ರಿ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಗೈದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕುತ್ತಾರು ತೇವುಲ ನಿವಾಸಿಯಾಗಿರುವ ಸುರೇಶ್ ಸಾಲಿಯಾನ್ (48) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಹಲವು ವರ್ಷಗಳಿಂದ ತೊಕ್ಕೊಟ್ಟಿನಲ್ಲಿ ಪ್ಲ್ಯಾನಿಂಗ್ ಪ್ಯಾಲೇಸ್ ಮೂಲಕ ಆರ್ಕಿಟೆಕ್ಟ್, ಭೂ ವ್ಯವಹಾರ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಫೆ.08 ರಂದು ಮನೆಯಿಂದ ಬರುವಾಗ ತಾನು ವಿದೇಶಕ್ಕೆ ತೆರಳುತ್ತೇನೆ ಎಂದು...







