ಕನಪಾಡಿ – ದೇವಂದಬೆಟ್ಟು ರಸ್ತೆ ಡಾಮರೀಕರಣಕ್ಕೆ ಗುದ್ದಲಿಪೂಜೆ- ಕಹಳೆ ನ್ಯೂಸ್
ಬಂಟ್ವಾಳ : ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ದೇವಸ್ಥಾನದ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳ ಬೇಡಿಕೆಯನ್ನು ಒಳಗೊಂಡ ಮನವಿಯನ್ನು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲಿಸಲಾಗಿತ್ತು. ಅದರಲ್ಲಿ ಬ್ರಹ್ಮಕಲಶ ಸಂದರ್ಭ ವಾಹನಗಳಿಗೆ ಏಕಮುಖ ಸಂಚಾರ ಕಲ್ಪಿಸುವ ಸಲುವಾಗಿ ದೇವಂದಬೆಟ್ಟು-ಕನಪಾಡಿ-ಮಾಡಂಗೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕಾಗಿ ವಿನಂತಿಸಲಾಗಿತ್ತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು 15 ಲಕ್ಷ ರೂ ಅನುದಾನ...







