Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಟ್ಯಾಕ್ಸಿ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಚಾಲಕ ಸಾವು- ಕಹಳೆ ನ್ಯೂಸ್

ಮಂಗಳೂರು : ಟ್ಯಾಕ್ಸಿ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾಲಕ ಮೊಹಮ್ಮದ್ ಶರೀಫ್ ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. Breaking News : ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಹಿತ್ಯ ಮಂಟಪ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ಸಾಹಿತ್ಯ ಮಂಟಪ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಕಾಲೇಜಿನಲ್ಲಿ ಸಿಗುವ ಸಮಯ, ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ ರೇಖಾ ಪಿ. ಎಂ. ಹೇಳಿದರು. ಅವರು ಕಾಲೇಜಿನ ತೃತೀಯ ಐಚ್ಚಿಕ ಕನ್ನಡ...
ದಕ್ಷಿಣ ಕನ್ನಡಸುದ್ದಿಸುಳ್ಯ

ನದಿ ನೀರಿನಲ್ಲಿ ಮುಳುಗಿ ಆರು ವರ್ಷದ ಬಾಲಕ ಸಾವು – ಕಹಳೆ ನ್ಯೂಸ್

ಸುಳ್ಯ: ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕು ಪೈಚಾರು ದೊಡ್ಡೇರಿ ಎಂಬಲ್ಲಿ ನಡೆದಿದೆ. ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದ, ಆಂಧ್ರ ಮೂಲದ ಕುಟುಂಬಸ್ಥರು ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದು, ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಪಕ್ಕದಲ್ಲಿ ಆತನ ಮೃತದೇಹ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು, ಪಂಜ, ಆರ್ಯಾಪು-ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು ಪಂಜ ಆರ್ಯಾಪು ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮದ 19ನೇ ವರ್ಷದ ಭಜನಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ವರ್ಷಂಪ್ರತಿ ಶ್ರೀ ದುರ್ಗಾ ಭಜನಾ ಮಂಡಳಿಯ ಆಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ. 12 ಮತ್ತು 13 ರಂದು ನಡೆಯಲಿರುವ ನರಿಮೊಗರು ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ಕ್ಷೇತ್ರದ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಫೆ. 12 ರಿಂದ 13 ರವರೆಗೆ ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ನರಿಮೊಗರಿನಲ್ಲಿ ವಾರ್ಷಿಕ ನೇಮೋತ್ಸವ ಹಾಗೂ ಶ್ರೀ ಕ್ಷೇತ್ರದ ದೈವಗಳಿಗೆ ಹಾಗು ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದೇರುಗಳಿಗೆ ಮುಂದಿನ ನೇಮೋತ್ಸವದ ಮೊದಲು ದೈವಗಳಿಗೆ ಭಕ್ತಾದಿಗಳೆಲ್ಲರೂ ಸಮರ್ಪಿಸುವುದೆಂದು ತೀರ್ಮಾನಿಸಿದ್ದ, ಬೆಳ್ಳಿಯ ತಲೆಮಣಿ, ತಲೆಪಟ್ಟಿ, ಅಪ್ಪರಕೊಂಬು, ಮುಂತಾದ ದೈವ ಆಭರಣಗಳ ಅಂದಾಜು 15 ಲಕ್ಷ ರೂಪಾಯಿ ವೆಚ್ಚವಿರುವ ಕ್ಷೇತ್ರದ ವಿಜ್ಞಾಪನ ಪತ್ರವನ್ನು ಬಿಡುಗಡೆ ಮಾಡಲಾಯಿತು. ಕೋಟಿ ಚೆನ್ನಯ ಗೆಳೆಯರ...
ದಕ್ಷಿಣ ಕನ್ನಡಸುದ್ದಿ

ಕುಂಜತ್ತಬೈಲ್ ಉತ್ತರ ವಾರ್ಡ್ 13 ರ ಕೆ.ಎಚ್.ಬಿ ಕಾಲೋನಿಯಲ್ಲಿ 20 ಲಕ್ಷ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರ ವಾರ್ಡ್ 13 ರ ಕೆ.ಎಚ್.ಬಿ ಕಾಲೋನಿಯಲ್ಲಿ 10 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ 10 ಲಕ್ಷ ರೂಪಾಯಿ ಅನುದಾನದಲ್ಲಿ ಚರಂಡಿ ರಚನೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶರತ್ ಕುಮಾರ್, ಉತ್ತರ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಅಧ್ಯಕ್ಷರಾದ ಶಹನಾಜ್, ಶಕ್ತಿಕೇಂದ್ರ ಪ್ರಮುಖರಾದ...
ದಕ್ಷಿಣ ಕನ್ನಡಸುದ್ದಿ

ಶಾಸಕರ 15 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಪಲ್ಲಮಜಲು-ಬರ್ಕಟ-ಅರಂತಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿಪೂಜೆ- ಕಹಳೆ ನ್ಯೂಸ್

ಮಂಗಳೂರು: ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬಿ.ಮೂಡ ಗ್ರಾಮಸ್ಥರಿಗೆ ದೇವಂದಬೆಟ್ಟು ಪ್ರದೇಶಕ್ಕೆ ತಲುಪಲು ಬಳಸುವ ಅತೀ ಮುಖ್ಯ ರಸ್ತೆ ಪಲ್ಲಮಜಲು-ಬರ್ಕಟ-ಅರಂತಡೆ-ಕಂಜತ್ತೂರು-ಮಾಡಂಗೆ ರಸ್ತೆಯನ್ನು ಅಭಿವೃದ್ಧಿಪಡಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಈ ಹಿಂದೆ 15 ಲಕ್ಷ ಅನುದಾನ ಒದಗಿಸಿದ್ದರು. ಅದರಲ್ಲಿ ಮಾಡಂಗೆ-ಕಂಜತ್ತೂರು ವರೆಗೆ ರಸ್ತೆ ಅಭಿವೃದ್ಧಿಗೊಂಡಿತ್ತು. ಬಾಕಿವುಳಿದ ರಸ್ತೆ ಅಭಿವೃದ್ಧಿಗಾಗಿ ಬಿ.ಮೂಡ ಗ್ರಾಮಸ್ಥರು ಹಾಗೂ ಕಳ್ಳಿಗೆ ಗ್ರಾಮಸ್ಥರ ಪರವಾಗಿ ಶಾಸಕರಿಗೆ ಮನವಿಯಲ್ಲಿ ತಿಳಿಸಲಾಗಿತ್ತು. ಇದೀಗ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳು ಪುನರರಾಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿಯನ್ನು ನೀಡಲಾಗಿದೆ. ಕೊರೊನಾ  ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಮೊದಲಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ...
1 637 638 639 640 641 725
Page 639 of 725