Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದ 60 ಕೆ.ಜಿ. ತೂಕದ ಮಡಲು ಮೀನು – ಕಹಳೆ ನ್ಯೂಸ್

ಮಲ್ಪೆ: ಬಂದರಿನ ಸನ್ಮಯ ಬೋಟಿನ ಬಲೆಗೆ 60 ಕೆ.ಜಿ. ತೂಕದ ಮಡಲು ಮೀನು ಬಿದ್ದಿದ್ದು, ಈ ಮೀನನ್ನು ನೋಡಲು ಜನ ಜಮಾಯಿಸಿದರು. ಈ ಮೀನು ಗಂಟೆಗೆ 110 ಕಿ.ಮೀ. ನಂತೆ ಜಗತ್ತಿನಾದ್ಯಂತ ಇತರ ಮೀನುಗಳಿಗಿಂತ ವೇಗವಾಗಿ ಚಲಿಸುತ್ತದೆ. ಅಲ್ಲದೆ ಇದು ಬಂಗುಡೆ, ಬೂತಾಯಿ, ಅಕ್ಟೋಪಸ್ ಇನ್ನಿತರ ಮೀನಗಳನ್ನು ತಿನ್ನುತ್ತದೆ. ಇದರಲ್ಲಿ ಮರ್ಲಿನ್ ಎಂಬ ಜಾತಿಯ ಮೀನೂ ಇದ್ದು, ಇದರ ಮಾಂಸ ರುಚಿಕರವಾಗಿರುತ್ತದೆ ಎಂದು ಕಡಲಜೀವಿ ಶಾಸ್ತ್ರದ ಸಂಶೋಧಕ ಕಾರವಾರದ ಡಾ|...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡ್ ಹಾಗೂ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ವತಿಯಿಂದ ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ – ಕಹಳೆ ನ್ಯೂಸ್

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡ್ ಹಾಗೂ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ವತಿಯಿಂದ ಬಲ್ನಾಡು ಹಾಗೂ ಕುರುಡಕಟ್ಟೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪಾದರಕ್ಷೆ ವಿತರಣೆ ಮಾಡಲಾಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಕಾಲೇಜಿನ ವಾಣಿಜ್ಯ ವಿಭಾಗದಿಂದ ಬ್ಯಾಂಕಿಂಗ್ ಜ್ಞಾನದ ಬಗೆಗೆ ಉಪನ್ಯಾಸ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಪೌಂಢೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ ಬ್ಯಾಂಕ್ ವಹಿವಾಟಿನ ಮೂಲಭೂತ ಜ್ಞಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಕರ್ನಾಟಕ ಬ್ಯಾಂಕ್‍ನ ಮ್ಯಾನೇಜರ್ ಶೈಲೇಶ್ ಎಂ.ಎಲ್. ರವರು ಮಾತನಾಡುತ್ತಾ, ಎಟಿಎಮ್ ಕಾರ್ಡ್, ವೀಸಾ ಕಾರ್ಡ್, ಪಾನ್ ಕಾರ್ಡ್ ಮುಂತಾದವುಗಳನ್ನು ಬಳಸುವಾಗ ಗ್ರಾಹಕರು ಜಾಗ್ರತೆ ವಹಿಸಬೇಕು. ಇಲ್ಲದಿದ್ದಲ್ಲಿ ಅದರಿಂದಾಗಿ ಸಾಕಷ್ಟು ತೊಂದರೆಗೊಳಗಾಗುವ ಸಂದರ್ಭಗಳು ಎದುರಾಗುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಸ್ ಚಾಲಕ ಆರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದ್ದು, ಮಂಗಳೂರು ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿಯ...
ದಕ್ಷಿಣ ಕನ್ನಡಸುದ್ದಿ

ರಶ್ಮಿ ಸನಿಲ್‌ರವರಿಗೆ ” ಆದಿಗ್ರಾಮೋತ್ಸವ ಯುವಸಿರಿ ಗೌರವ” ಸನ್ಮಾನ – ಕಹಳೆ ನ್ಯೂಸ್

ಕಾರ್ಕಳ: ಕಳೆದ 23 ವರುಷಗಳಿಂದ ಅಜೆಕಾರ್ ನಲ್ಲಿ ಡಾ|| ಶೇಖರ್ ಅಜೆಕಾರ್ ಅವರು ನಡೆಸಿಕೊಂಡು ಬರುತ್ತಿರುವ ಆದಿ ಗ್ರಾಮೋತ್ಸವ ಎಂಬ ಕಾರ್ಯಕ್ರಮವು ಜ.25 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ, ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ವಿಶ್ವನಾಥ ಶೆಣೈ ಉಡುಪಿ ಇವರು ವಹಿಸಿದ್ದರು. ಇದೇ ಸಂದರ್ಭದಲ್ಲಿ ಇನ್ಫೋಸಿಸ್ ಉದ್ಯೋಗಿ ಮಂಗಳೂರಿನ ರಶ್ಮಿ ಸನಿಲ್ ಅವರಿಗೆ ಬಹುಮುಖ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕಾರು – ಕಂಟೈನರ್ ಮುಖಾಮುಖಿ ಡಿಕ್ಕಿ : ಮೂವರು ಆಸ್ಪತ್ರೆಗೆ ದಾಖಲು– ಕಹಳೆ ನ್ಯೂಸ್

ಪುತ್ತೂರು: ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರಿಗೆ ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಪೋಳ್ಯದ ಬಳಿ ನಡೆದಿದೆ. ಅಪಘಾತದಲ್ಲಿ ಕಂಟೈನರ್ ಲಾರಿಯು ರಸ್ತೆ ಕಡೆಗೆ ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾದ್ದು ಆಸ್ಪತ್ರಗೆ ದಾಖಲಿಸಲಾಗಿದೆ.  ...
ದಕ್ಷಿಣ ಕನ್ನಡಸುದ್ದಿ

ಕಂಕನಾಡಿ ಕುದ್ಕೋರಿ ಗುಡ್ಡೆ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಶಿವಭಾಗ್ ವಾರ್ಡಿನ ಕಂಕನಾಡಿ ಕುದ್ಕೋರಿ ಗುಡ್ಡೆಯಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ನಗರದ ವಿವಿಧ ಭಾಗಗಳಲ್ಲಿ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯ ಮೂಲಕ ಸಾಕಷ್ಟು ಅನುದಾನಗಳನ್ನು ಜೋಡಿಸಲಾಗಿದೆ. ಕಾಲುಸಂಕ ನಿರ್ಮಾಣ ಕಾಮಗಾರಿಗೆ ವಿವಿಧ ಕಡೆಗಳಲ್ಲಿ ಅನುದಾನ ಬಿಡುಗಡೆಗೊಳಿಸಿದ್ದು ಕುದ್ಕೋರಿ ಗುಡ್ಡೆಯಲ್ಲಿ ಕಾಲುಸಂಕ ನಿರ್ಮಾಣಕ್ಕಾಗಿ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್...
ದಕ್ಷಿಣ ಕನ್ನಡಸುದ್ದಿ

ಜೈನ ಮಹಾಮುನಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು : ಜೈನ ಮಹಾಮುನಿಗಳಾದ ಪರಮ ಪೂಜ್ಯ ಮುನಿಶ್ರೀ 108 ಅಮೋಘ ಕೀರ್ತಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ 108 ಅಮರ ಕೀರ್ತಿ ಮಹಾರಾಜರನ್ನು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಭೇಟಿ ಮಾಡಿ ಆಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಸುರೇಖಾ ಹೆಗ್ಡೆ ಹಾಗೂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು....
1 639 640 641 642 643 725
Page 641 of 725