Monday, April 27, 2026

ದಕ್ಷಿಣ ಕನ್ನಡ

ಕೊಡಗುದಕ್ಷಿಣ ಕನ್ನಡಮಡಿಕೇರಿರಾಜ್ಯಸುದ್ದಿಸುಳ್ಯ

ಹಿಂದೂ ಜಾಗರಣಾ ವೇದಿಕೆ ಪೊಲೀಸ್ ಇಲಾಖೆಗೆ ಮಾಹಿತಿ, ತಡರಾತ್ರಿ ಸಂಪಾಜೆ ಚೆಕ್‍ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ ; 24 ಗೋವುಗಳ ರಕ್ಷಣೆ – ಕಹಳೆ ನ್ಯೂಸ್

ಮಡಿಕೇರಿ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಲಾರಿಯನ್ನು ಪತ್ತೆ ಹಚ್ಚಿ 24 ಗೋವುಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಚೆಕ್‍ಪೊಸ್ಟ್ ಬಳಿ ನಡೆದಿದೆ. ಸಂಪಾಜೆ ಅರಣ್ಯ ತಪಾಸಣಾ ಗೇಟ್ ಬಳಿ ತಡರಾತ್ರಿ ಲಾರಿಯಲ್ಲಿ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ, ಲಾರಿ ಸಮೇತ 24 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ತಪಾಸಣೆಗೆ ಮುಂದಾಗುತ್ತಿದ್ದಂತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರೀ ಪ್ರಥಮ ದರ್ಜೆ ಕಾಲೇಜು, ತೆಂಕ ನಿಡಿಯೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಪುರುಷರ ದೇಹ ದಾರ್ಢ್ಯ ಸ್ಪರ್ಧೆಯಲ್ಲಿ ಸಂತಫಿಲೋಮಿನಾ ಕಾಲೇಜಿಗೆ ದ್ವೀತಿಯ ಸ್ಥಾನ – ಕಹಳೆ ನ್ಯೂಸ್

ಪುತ್ತೂರು : ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರೀ ಪ್ರಥಮ ದರ್ಜೆ ಕಾಲೇಜು, ತೆಂಕ ನಿಡಿಯೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಪುರುಷರ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸಂತಫಿಲೋಮಿನಾ ಕಾಲೇಜಿನ ತೃತೀಯ ಬಿಬಿಎ ವಿಭಾಗದ ಅಮೃತ್ ಎಸ್ ರೈ ಇವರು 65 ಕೆಜಿ ವಿಭಾಗದಲ್ಲಿ ಮಂಗಳೂರು ವಿವಿ ಮಟ್ಟದಲ್ಲಿ ದ್ವೀತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರು ವಿವಿಗೆ ಆಧೀನವಾಗಿರುವ ಹೆಚ್ಚಿನ ಎಲ್ಲಾ ಕಾಲೇಜುಗಳಿಂದ ಕ್ರೀಡಾಳುಗಳು ಭಾಗವಹಿಸಿದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ವಿಜೇತರಾದ ಅಮೃತ್ ಎಸ್ ರೈ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಏ.27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಏಪ್ರಿಲ್ 27ರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ನಡೆಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಅನೇಕ ಧಾರ್ಮಿಕ ಕ್ಷೇತ್ರದ ಹೊಣೆ ಹೊತ್ತು ಶ್ರಮಿಸಿದ, ಬ್ರಹ್ಮಕಲಶೋತ್ಸವದ ಅನ್ಯಾನ್ಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿ ನೇಮಕ – ಕಹಳೆ ನ್ಯೂಸ್

ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆ ಅವರು ನೇಮಕಗೊಂಡಿದ್ದಾರೆ. ಸಮುದಾಯಕ್ಕೆ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಮಹೇಶ್ ಕಜೆಯವರನ್ನು 2022-23ರ ಅವಧಿಗೆ ಉಪಾಧ್ಯಕ್ಷರನ್ನಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹಾಸಭಾಧ್ಯಕ್ಷ ಅಶೋಕ ಹಾರನಕಳ್ಳಿ ನೇಮಕಗೊಳಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ‘ಕೇದಾರ’ ನಿವಾಸಿಯಾಗಿರುವ ಮಹೇಶ್ ಕಜೆಯವರು ಬೊಳುವಾರು ಕಜೆ ಲಾ ಛೇಂಬರ್ಸ್ನ ಮುಖ್ಯಸ್ಥರಾಗಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಜಿ ಸದಸ್ಯರೂ, ಪುತ್ತೂರು...
ದಕ್ಷಿಣ ಕನ್ನಡಸುದ್ದಿ

ರಾಷ್ಟ್ರ ಧ್ವಜದ ಅಪಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ- ಕಹಳೆ ನ್ಯೂಸ್ 

ಪುತ್ತೂರು : ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರ ಧ್ವಜದ ಮೇಲಾಗುವ ಅಪಮಾನವನ್ನು ತಡೆಯಲು ಮತ್ತು ಉಚ್ಚ ನ್ಯಾಯಾಲಯದ ಆದೇಶದಂತೆ ಕಾರ್ಯಚರಣೆ ಮಾಡಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಧ್ವಜದ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೆಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರಿನ ಉಪವಿಭಾಗಾಧಿಕಾರಿಗಳಾದ "ಶ್ರೀ ಯತೀಶ್ ಉಳ್ಳಾಲ್" ಇವರಿಗೆ ಮನವಿ ನೀಡಲಾಗಿದೆ. ಜೊತೆಗೆ ಮಂಗಳೂರಿನ ಚುನಾವಣಾ ತಹಸೀಲ್ದಾರ್ ಕೆ.ಯಸ್ ದಯಾನಂದ ಇವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಕಮಿಷನರ್ ಕಚೇರಿಯ ಪೊಲೀಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ವಿಕಾಸ ಸಪ್ತಾಹ ಸಮಾರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವಿವೇಕ ವಿಕಾಸ ಸಪ್ತಾಹ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮೀಜಿ ರಘುರಾಮನಂದಜಿ ವಿವೇಕಾನಂದರ ಹೆಸರು ಕೇಳಿದರಷ್ಟೇ ಸಾಕು ಎಲ್ಲರಲ್ಲೂ ಅಗಾಧವಾದ ಒಂದು ಶಕ್ತಿ ಜಾಗೃತವಾಗುವುದು. ಅಲ್ಲದೇ ನಾವು ಭಾರತದ ಬಗ್ಗೆ ತಿಳಿಯಬೇಕಾದರೆ ವಿವೇಕಾನಂದರ ಜೀವನವನ್ನು ತಿಳಿದರೆ ಸಾಕು ಎಂದು ಹೇಳಿದರು .   ನಾವು ವಿವೇಕಾನಂದರ ವ್ಯಕ್ತಿತ್ವವನ್ನು ಬೇರೆ ಬೇರೆ ರೀತಿಯಲ್ಲಿ ಕಾಣುತ್ತೇವೆ. ಅವರ ವ್ಯಕ್ತಿತ್ವ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ, ಮಗು ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್

ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ ಮತ್ತು ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ನಡೆದಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ವಿಟ್ಲ ಮೂಲದ ಸವಿತಾ (33) ಎಂಬವರು ತುಂಬು ಗರ್ಭಿಣಿಯಾಗಿದ್ದು , ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿದ್ದ ಮಗು ಮೃತ ಪಟ್ಟಿದೆ ಎಂದು ವೈದ್ಯರು ತಿಳಿಸಿದ್ದು, ಸಂಜೆಯವರೆಗೂ ಯಾವುದೇ ಅಗತ್ಯ ಕ್ರಮ ಕೈಗೊಳ್ಳದ ಆಸ್ಪತ್ರೆ ಸಿಬ್ಬಂದಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಇವರ ಸಹಯೋಗದೊಂದಿಗೆ, ಪೋಷನ್ ಅಭಿಯಾನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಇವರ ಸಹಯೋಗದೊಂದಿಗೆ, ಪೋಷನ್ ಅಭಿಯಾನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವು ಮಹಾಶಕ್ತಿ ಕೇಂದ್ರ 1ರ ಬೊಳುವಾರು ‘ನವನೀತಂ' ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮಿ ಗಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸದಾ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ನಾವು ಇಂತಹ...
1 642 643 644 645 646 725
Page 644 of 725