Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಕಾರ್ಕಳ: ಕೊರೊನಾ ಸೋಂಕಿನ ಭೀತಿಯಿಂದ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ – ಕಹಳೆ ನ್ಯೂಸ್

ಕಾರ್ಕಳ : ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಕೊರೊನಾ ಸೋಂಕಿನ ಭಯದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ. ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀ ಅವರು ಕೊರೊನಾ ಸೋಂಕು ದೃಢಪಡದಿದ್ದರು, ಸೋಂಕು ತಗುಲುವ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದುಕೊಂಡು ಬೆಂಕಿಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೆÇಲೀಸ್ ಠಾಣೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ದೇಹದಾರ್ಢ್ಯ ಸ್ಪರ್ಧೆ: ವಿವೇಕಾನಂದ ಜಾಲೇಜಿನ ಕಾರ್ತಿಕ್ ರಾಜ್ ದ್ವಿತೀಯ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿಶ್ವ ವಿದ್ಯಾಲಯ ಆಯೋಜಿಸಿದ್ದ ಅಂತರ್ ಕಾಲೇಜು ಮಟ್ಟದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ರಾಜ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 70 ಕೆ.ಜಿ ವಿಭಾಗದ ಉತ್ತಮ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. Special Report: ಬಿಟ್ಟಿ ಮನರಂಜನೇ ನೀಡಿದ್ರೆ ಗತಿ ಗೋವಿಂದ...❗ - ಹಿಂದೂ ಭಾವನೆಗೆ ಧಕ್ಕೆ ತರೋ ಮುನ್ನ ನೂರು ಭಾರಿ ಯೋಚಿಸಿ...‼️ ಇವರಿಗೆ ವಿವೇಕಾನಂದ ಮಹಾವಿದ್ಯಾಲಯದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಮನೆಗೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಗಾಗಿ ಸಜೀಪಮುನ್ನೂರಿಗೆ ತೆರಳಿದ್ದ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಶಾಸಕರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ ಎ.ಸಿ.ಭಂಡಾರಿ ಅವರು, ನಂದಾವರ ದೇವಸ್ಥಾನದಲ್ಲಿ ತಾನು ಅಧ್ಯಕ್ಷನಾಗಿರುವ ವೇಳೆ ತಡೆಗೋಡೆ...
ದಕ್ಷಿಣ ಕನ್ನಡಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಉತ್ತರ ಮಹಾಶಕ್ತಿ ಕೇಂದ್ರದ ಮಾಸಿಕ ಸಭೆ – ಬೂತ್ ಮಟ್ಟದಲ್ಲಿ ಪಕ್ಷದ ಚಟುವಟಿಕೆ, ಸಮಿತಿ ರಚನೆ,ಮೈಕ್ರೋ ಡೊನೇಶ್ ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಮಾಹಿತಿ –ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಉತ್ತರ ಮಹಾಶಕ್ತಿ ಕೇಂದ್ರದ ಮಾಸಿಕ ಸಭೆಯು ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ ರವರ ಸೂಚನೆಯಂತೆ ಮಂಡಲ ಉಪಾಧ್ಯಕ್ಷರು ಹಾಗೂ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ ಅವರ ಅದ್ಯಕ್ಷತೆಯಲ್ಲಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ಜರುಗಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನದ ಮಹತ್ವ ಮತ್ತು ಅತಿಥಿ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ ಪ್ರಜಾಪ್ರಭುತ್ವ ಆಡಳಿತದಲ್ಲಿ ಭಾರತೀಯ ಸಂವಿಧಾನದ ಮಹತ್ವ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕ ಲಕ್ಷ್ಮಿಕಾಂತ್ ಎ ಅವರು ಭಾರತದಲ್ಲಿ ಪ್ರಜಾಸತ್ತಾತ್ಮಕ ಕಾಲ ಘಟ್ಟ ಹೇಗೆ ಕಾರ್ಯ ವಹಿಸುತ್ತಿದೆ? ಜನರಲ್ಲಿನ ಸ್ವಾರ್ಥ ಆಲೋಚನೆಗಳು ಕಡಿಮೆಯಾಗಬೇಕು ಅನ್ನುವ ಉದ್ದೇಶದಿಂದ ಸಂವಿಧಾನವು ಜನರಿಗಾಗಿ ಹುಟ್ಟಿಕೊಳ್ಳುತ್ತದೆ. ಪ್ರಸ್ತುತ ಕಾಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಬಾಳೆ ಎಲೆ ಊಟದ ಪ್ರಾತ್ಯಕ್ಷಿಕೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಎರಡನೇ ತರಗತಿ ವಿದ್ಯಾರ್ಥಿಗಳಿಂದ ಬಾಳೆ ಎಲೆ ಊಟದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಬಾಳೆ ಎಲೆ ಊಟದ ಮಹತ್ವವನ್ನು ತಿಳಿಸುತ್ತಾ ಮಾತನಾಡಿದ ಪ್ರಾಥಮಿಕ ಶಾಲೆಯ ಇಂಗ್ಲೀμï ಅಧ್ಯಾಪಕರಾದ ರಾಜೇಶ್ವರಿಯವರು "ಬಾಳೆಎಲೆ ದೈವಿಕ ಅಂಶ ಉಳ್ಳದ್ದು. ಬಿಸಿಯಾದ ಪದಾರ್ಥ ಎಲೆಯ ಮೇಲೆ ಬಿದ್ದಾಗ ಅದರಿಂದ ಉತ್ಪತ್ತಿಯಾಗುವ ಪಾಲಿಫಿನೋಲ್ ಅಂಶವು ನಮ್ಮ ದೇಹದ ಒಳಗೆ ಸೇರಿದಾಗ ನಮ್ಮಲ್ಲಿರುವ ರೋಗನಿರೋಧಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಿದ ಶಾಸಕ ಸಂಜೀವ ಮಠಂದೂರು- ಕಹಳೆ ನ್ಯೂಸ್

ಪುತ್ತೂರು: ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು ರೂ.91ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಬಿಜೆಪಿ ಬೂತ್ ಅಧ್ಯಕ್ಷರುಗಳು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಸುದ್ದಿ

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂದರು ಪೊಲೀಸರು- ಕಹಳೆ ನ್ಯೂಸ್

ಕಾರ್ಕಳ : ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂದು ಗುರುತಿಸಲಾಗಿದೆ. 2000ರಲ್ಲಿ ಈತನ ವಿರುದ್ಧ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ....
1 643 644 645 646 647 725
Page 645 of 725