Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲಿ ಗಣಿತ ಸಂಘದಿಂದ ರಾಷ್ಟ್ರೀಯ ಗಣಿತ ದಿನಾಚರಣೆ –ಕಹಳೆ ನ್ಯೂಸ್

ದಿನಾಂಕ 22-12 - 2021 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿ ಗಣಿತ ಸಂಘದಿಂದ ಶ್ರೀನಿವಾಸ ರಾಮಾನುಜನ್‍ ಅವರ ಜನ್ಮದಿನವನ್ನು ರಾಷ್ಟ್ರೀಯ ಗಣಿತ ದಿನವಾಗಿ ಆಚರಿಸಲಾಯಿತು. "ವಿಶ್ವದಗಣಿತಕ್ಕೆ ಭಾರತದಕೊಡುಗೆಅಪಾರ. ಸೊನ್ನೆಯನ್ನು ಪ್ರಪಂಚಕ್ಕೆ ನೀಡಿದ ಭಾರತ, ಗಣಿತಕ್ಕೆ ಶ್ರೀನಿವಾಸ ರಾಮಾನುಜನ್‍ಅವರನ್ನು ನೀಡಿದೆ. ಕೇವಲ 32 ವರ್ಷಗಳ ಕಾಲ ಬದುಕಿದ್ದ ಶ್ರೀನಿವಾಸರ ಸಾಧನೆಜಗತ್ತಿನಲ್ಲಿ ಮನುಕುಲವಿರುವರೆಗೂ ಶಾಶ್ವತ. ಅನೇಕ ಗಣಿತದ ಸಮಸ್ಯೆಗಳನ್ನು ತಮಗೆತಾವೇ ಸೃಷ್ಟಿಸಿಕೊಂಡು ಪರಿಹರಿಸುತ್ತಿದ್ದರು. ಗಣಿತವನ್ನುಕಂಠಪಾಠ ಮಾಡದೆಅಭ್ಯಾಸ ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ‘ಪ್ರೇರಣಾ’-ಉದ್ಘಾಟನೆ -ಕಹಳೆ ನ್ಯೂಸ್

ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು ಎಂದು ರಾಮಕೃಷ್ಣ ಪ್ರೌಢಶಾಲೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಜಯಲಕ್ಷ್ಮಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಎರಡು ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ” ವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಪೀಳಿಗೆಗೆ ಮನಸ್ಸನ್ನು ದೃಢಗೊಳಿಸುವುದರ ಜೊತೆಗೆ ಸದೃಢ ಭವಿಷ್ಯದ ನಿರ್ಮಾಣಕ್ಕಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಆಗುವ ಅಯೋಗ್ಯ ಆಚರಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಗೆ ಮನವಿ- ಕಹಳೆ ನ್ಯೂಸ್

ಬಂಟ್ವಾಳ : ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31 ರ ರಾತ್ರಿ ನಡೆಯುವ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಬಂಟ್ವಾಳ ತಹಶೀಲ್ದಾರಾದ ರಶ್ಮಿ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು. ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿ0ದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31 ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ. ಮತ್ತು ಈ ರಾತ್ರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಗುರುವಂದನೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮಾನವ ಸಂಪನ್ಮೂಲಗಳನ್ನು ಬೆಳೆಸಿಕೊಳ್ಳಲು ಮತ್ತು ಸಮರ್ಥವಾಗಿ ಉಳಿಸಿಕೊಳ್ಳಲು ಅನೇಕ ಪರಂಪರೆಗಳಿವೆ. ಸಮಾಜವು ನಿಗದಿತ ಚೌಕಟ್ಟಿನಲ್ಲಿ ವರ್ತಿಸದೆ ಇದ್ದರೆ ಅಲ್ಲಿ ಶಾಸನಬದ್ಧ ಹಾಗೂ ಶಿಸ್ತು ಬದ್ಧ ಚೌಕಟ್ಟನ್ನು ನಿರ್ಮಿಸಲಾಗುತ್ತದೆ. ಅಂತೆಯೇ ಸಮಾಜದ ಬದಲಾವಣೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಭವಿಷ್ ಘಟಕ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಜಿಲ್ಲಾಮಟ್ಟದಲ್ಲಿ‌ ಸೇವಾಕ್ರಾಂತಿಗೆ ಮುನ್ನುಡಿಯಿಟ್ಟಿದೆ 2021 ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವಶಕ್ತಿ ತಂಡ-ಕಹಳೆ ನ್ಯೂಸ್

ಯುವಶಕ್ತಿ ರಕ್ತನಿಧಿ ,ಯುವಶಕ್ತಿ ಉದ್ಯೋಗನಿಮಿತ್ತಂ ಬಳಿಕ ಇದೀಗ ಅಶಕ್ತರ ಕಣ್ಣೀರು ಒರೆಸಿ ಸಹಾಯಹಸ್ತ ಚಾಚುವ ಸೇವಾಯೋಜನೆಗಳನ್ನು ಕೈಗೊಂಡು ಬಡವರ ಸೇವೆಗಾಗಿ ಯುವಶಕ್ತಿ ಸೇವಾಪಥ ಸಿದ್ದಗೊಂಡಿದೆ. "ಪರೋಪಕಾರಾರ್ಥಂ ಇದಂ ಶರೀರಂ" ಎಂಬ ಧ್ಯೇಯದೊಂದಿಗೆ 'ಯುವಶಕ್ತಿ ಸೇವಾಪಥ'ದ ನೂತನ ಲೋಗೋ ಶ್ರೀ ಕ್ಷೇತ್ರದ ಕಾರಿಂಜೇಶ್ವರನ ಸನ್ನಿಧಿಯಲ್ಲಿ ನಾಗಾಸಾಧು ಶ್ರೀ ಬಾಬಾವಿಠಲಗಿರಿ‌ ಮಹಾರಾಜರ ದಿವ್ಯಹಸ್ತದಿಂದ ಲೋಕಾರ್ಪಣೆಗೊಂಡಿದ್ದು ದೇವಸ್ಥಾನದ ಆಡಳಿತ ವರ್ಗ,ಅರ್ಚಕವೃಂದ,ಸಂಘಟನೆಗಳ ಪ್ರಮುಖರು,ಹಿರಿಯರು,ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದು ಶುಭಹಾರೈಸಿದರು.ಪ್ರತೀ ತಾಲೂಕಿನಲ್ಲಿ ಟೀಂ ಸೇವಾಪಥ ಕಾರ್ಯನಿರ್ವಹಿಸುವ ಜೊತೆಗೆ ಜಿಲ್ಲೆಯ...
ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ ಠಾಣೆಯ ಪೋಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಬಜರಂಗದಳ ಮನವಿ – ಕಹಳೆ ನ್ಯೂಸ್

ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ PFI - SDPIನ ಕಾರ್ಯಕರ್ತರು ಉಪ್ಪಿನಂಗಡಿ ಪೋಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು, ತಲವಾರು ಮಾರಕಾಸ್ತ್ರಗಳನ್ನು ಹಿಡಿದು ದಾಳಿಮಾಡಿ ಪೋಲೀಸರಿಗೆ ಹಲ್ಲೆನಡೆಸಿದ ಸಂಧರ್ಭದಲ್ಲಿ ಪೋಲೀಸರು ನಡೆಸಿದ ಲಾಠಿಚಾರ್ಜ್‍ನಲ್ಲಿ ಅಲ್ಪ ಸ್ವಲ್ಪ ಗಾಯಗೊಂಡ 25 ಕ್ಕೂ ಹೆಚ್ಚು PFI ಕಾರ್ಯಕರ್ತರು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದಾಖಲಾದ ಎಲ್ಲಾ ಜನರ ಮೇಲೆ ಉಪಿನಂಗಡಿ ಪೋಲೀಸ್ ಠಾಣೆಯ ಪ್ರಕರಣದಲ್ಲಿ ಕೇಸು ದಾಖಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಸಂಚಾರಿ ಮಾರಾಟ ಮಳಿಗೆ ವಾಹನ ಹಸ್ತಾಂತರ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯಿ0ದ ಈಗಾಗ್ಲೆ ಲಕ್ಷಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಇದಕ್ಕೆ ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕರು ಇನ್ನಷ್ಟು ಬಲ ತುಂಬಿದ್ದಾರೆ. ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ‘ಸಂಚಾರಿ ಮಾರಾಟ ಮಳಿಗೆ ವಾಹನ’ವನ್ನು ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕ ಅಜಯ ಕೆ.ಖುರಾನರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದ್ದಾರೆ . ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೋಮವಾರ ಕಾರ್ಯಕ್ರಮ ನಡೆದಿದ್ದು, ಬ್ಯಾಂಕ್ ಆಫ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 20ನೇ ವರ್ಷದ ನವದಂಪತಿ ಸಮಾವೇಶ – ಕಹಳೆ ನ್ಯೂಸ್

ಕಲ್ಲಡ್ಕ : ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ ದಂಪತಿಗಳಾಗಿ ಭಾಗವಹಿಸಿದ ಕೃಷ್ಣಪ್ಪ ಹಾಗೂ ರಾಮಕ್ಕ ಅವರು ನವದಂಪತಿ ಸಮಾವೇಶವನ್ನು ಉದ್ಘಾಟಿಸಿ, ತಾವು ವೈವಾಹಿಕ ಜೀವನದಲ್ಲಿ ನಡೆದು ಬಂದ ಜೀವನದ ಅನುಭವವನ್ನು ನವದಂಪತಿಗಳಲ್ಲಿ ಹಂಚಿಕೊಂಡರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತಾವಿಕ...
1 660 661 662 663 664 725
Page 662 of 725