ವಾಮಂಜೂರು ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣ: ನಿರಪರಾಧಿಗಳನ್ನು ಪೊಲೀಸ್ ಸ್ಟೇಷನ್ ನಿಂದ ಬಿಡಿಸಿ ಕರೆತಂದ ಶಾಸಕ ಭರತ್ ಶೆಟ್ಟಿ –ಕಹಳೆ ನ್ಯೂಸ್
ಮಂಗಳೂರು: ಇತ್ತೀಚೆಗೆ ವಾಮಂಜೂರು ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಕೇಸು ದಾಖಲಿಸಿಕೊಂಡ ಪೊಲೀಸರು ಅಪರಾಧಿಗಳನ್ನು ಹಾಗೂ ಹಲವು ನಿರಪರಾಧಿಗಳನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದರು. ಈ ಬಗ್ಗೆ ಮಾಹಿತಿಯನ್ನು ಪಡೆದಕೊಂಡ ಮಂಗಳೂರು ಉತ್ತರದ ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ “ಅಪರಾಧಿಗಳ ವಿಚಾರಣೆಗೆ ಯಾರು ಅಡ್ಡಿಪಡಿಸುವುದಿಲ್ಲ ಆದರೆ ವಿನಾಕಾರಣ ನಿರಪರಾಧಿಗಳಿಗೆ ಶಿಕ್ಷೆಯಾಗುವುದು ಸರಿಯಲ್ಲ” ಎಂದರಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗದ...







