Monday, September 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕ ; ಪೈ ಟ್ರೇಡರ್ಸ್ ನ ಮಾಲಕ ಹರೀಶ್ ಪೈ ನಿಧನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರ ಪ್ರಮುಖ್ ಆಗಿ ಚಿರಪರಿಚಿತಗೊಂಡಿರುವ ಇಲ್ಲಿನ ಸಿಪಿಸಿ ಪ್ಲಾಝಾದಲ್ಲಿರುವ ಪೈ ಟ್ರೇಡರ್‍ಸ್‌ನ ಮಾಲಕ ಹರೀಶ್ ಪೈ(52ವ)ರವರು ಜು.14ರ ನಸುಕಿನ ಜಾವ ಮೃತಪಟ್ಟಿದ್ದಾರೆ. ಜು.೧೨ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರೊಂದಿಗೆ ಆದಿತ್ಯವಾರದ ಸ್ವಚ್ಛತಾ ಕಾರ್ಯವನ್ನು ಮುಗಿಸಿ ಮಧ್ಯಾಹ್ನ ದೇವಳದ ಹೊರಾಂಗಣದ ಗೋಪುರದಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ; ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಜಿಲ್ಲೆಯನ್ನು ಲಾಕ್ ಡೌನ್ ಮಾಡುಲು ನಿರ್ಧಾರ ಕೈಗೊಳಲಾಗಿದೆ. ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ಆರಂಭವಾಗಲಿದ್ದು, ಗುರುವಾರ ದಿಂದ ಒಂದು ವಾರಗಳ ಕಾಲ ಲಾಲ್ ಡೌನ್ ಇವರಲಿದೆ. ಗುರುವಾರ 16 ರಿಂದ 22 ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಇರಲಿದೆ. ಬುಧವಾರ ತನಕ ಜನರು ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಜ್ಯದ ನ್ಯೂಸ್ ವಾಹಿನಿಯ ಪತ್ರಕರ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ರಾಜ್ಯದ ಪ್ರಮುಖ ನ್ಯೂಸ್ ವಾಹಿನಿಗಳ ಮಂಗಳೂರಿನ ಕ್ಯಾಮರಾ ಮ್ಯಾನ್ ಗಳಿಗೆ ಕೊರೊನಾ ಸೋಂಕು‌ ದೃಢ ಪಟ್ಟಿದೆ. ಖಾಸಗೀ ವಾಹಿನಿಗೆ ಸೇರಿದ ಇಬ್ಬರಿಗೆ ಮಂದಿ ಪತ್ರಕರ್ತರಿಗೆ ಸೋಂಕು ತಗುಲಿದ ಬಗ್ಗೆ ಮಾಹಿತಿ ಲಭಿಸಿದೆ....
ದಕ್ಷಿಣ ಕನ್ನಡಪುತ್ತೂರು

Breaking News : ಶಾಂತಿಗೋಡಿನ 15 ವರ್ಷದ ಬಾಲಕಿ, ಬಲ್ಯದ ನರ್ಸ್‌ ಸಹಿತ ಪುತ್ತೂರು ತಾಲೂಕಿನಲ್ಲಿ 4 ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಇಂದು ಪುತ್ತೂರು ತಾಲೂಕಿನಲ್ಲಿ 4 ಕೊರೋನಾ ದೃಢಪಟ್ಟ ಕುರಿತು ವರದಿಯಾಗಿದೆ. ವಿದೇಶದಿಂದ ಬಂದು ಮಂಗಳೂರು ಖಾಸಗಿ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್ ಆಗಿರುವ ಇಚಿಲಂಪಾಡಿಯ ಸುಮಾರು 27 ವರ್ಷದ ಯುವಕ, ಮರೀಲ್ ಕ್ಯಾಂಪ್ಕೋ ವಸತಿ ಗೃಹದ ನಿವಾಸಿ 35 ವರ್ಷದ ಗೃಹಿಣಿ, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿರುವ ಬಲ್ಯ ಹೊಸ್ಮಠದ 22 ವರ್ಷದ ಯುವತಿ ಮತ್ತು ಶಾಂತಿಗೋಡು ನಿವಾಸಿ 15...
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿಯಲ್ಲಿ ಕೊರೊನಾಗೆ ಇಂದು ವೃದ್ಧ ಬಲಿ ; ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಕೊರೊನ ಸೋಂಕಿತ ವೃದ್ಧ ಮನೆಯಲ್ಲೇ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಸದ್ಯಕ್ಕಂತೂ ಹೆಮ್ಮಾರಿ ಕೊರೊನ ತನ್ನ ರುದ್ರನರ್ತನವನ್ನು ನಿಲ್ಲಿಸುವಂತೆ ಕಾಣುತ್ತಿಲ್ಲ. ಕೊರೊನ ಸೋಂಕಿನ ಕಾರಣದಿಂದ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60 ವರ್ಷ ಪ್ರಾಯದ ವೃಧ್ದ ಇಂದು ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ,ಅದರ ವರದಿ ಇದೀಗ ಕೈ ಸೇರಿದ್ದು ಸೋಂಕು ದೃಢ ಪಟ್ಟಿದೆ. ಮೃತ ದೇಹ ಮನೆಯಲಿದ್ದು...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಾಡ್ನೂರು ಗ್ರಾಮದ 50 ವರ್ಷದ ಸೋಂಕಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು : ನ್ಯುಮೋನಿಯಾದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಡ್ನೂರು ಗ್ರಾಮದ ಮೂಲಡ್ಕ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಜು.12ರಂದು ಅವರು ಮೃತಪಟ್ಟಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು...
ದಕ್ಷಿಣ ಕನ್ನಡಸುದ್ದಿ

Breaking News : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನ ಆರ್ಭಟ ಮುಂದುವರಿದಿದೆ. ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ. ಮನಪಾ ಆಯುಕ್ತರಿಗೆ ಎರಡು ದಿನಗಳ ಹಿಂದೆ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ. ಸದ್ಯ ಮನಪಾ ಆಯುಕ್ತರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬ್ಯೂಟಿ ಪಾರ್ಲರ್ ಬಂದ್ – ಅಸೋಸಿಯೇಷನ್ ನ ಅಧ್ಯಕ್ಷೆ ಬಬಿತಾ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯೂಟಿಪಾರ್ಲರ್ ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ. ದ.ಕ ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಸಭೆ ನಡೆಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲಾದ್ಯಂತ ದಿನೇ ದಿನೇ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿದ್ದು, ಗ್ರಾಹಕರು ಹಾಗೂ ಸೌಂದರ್ಯ ತಜ್ಞೆಯರ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಬ್ಯೂಟಿ ಪಾರ್ಲರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿ ಬ್ಯೂಟಿ ಪಾರ್ಲರ್...
1 742 743 744 745 746 753
Page 744 of 753