Saturday, June 13, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋವಂಶ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ -ಕಹಳೆ ನ್ಯೂಸ್

ಪುತ್ತೂರು : ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಇಂದು ಪುತ್ತೂರು ನಗರ...
ದಕ್ಷಿಣ ಕನ್ನಡಸುದ್ದಿ

ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ-ಕಹಳೆ ನ್ಯೂಸ್

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಸಾವಿಗೀಡಾಗಿದ್ದಾರೆ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ನಸುಕಿನ ಜಾವ ಮೇಲ್ಛಾವಣಿ ಕುಸಿದು ಜೀವಂತ ಸಮಾಧಿಯಾಗಿದ್ದಾರೆ. ಮನೆಯ ಹೊರಗೆ ಪತಿ ಶಿವಾನಂದ ಮಲಗಿದ್ದ ಕಾರಣ ಪ್ರಾಣಾಪಾಯದಿಂದ ಪರಾಗಿದ್ದಾನೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ  : 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಹೆಬ್ಬಾಳ ಪೊಲೀಸರು  ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ  ಬೆಂಗಳೂರಿಗೆ  ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ.20  ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ ಸಿ ಭಂಡಾರಿ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ರೊಟೇರಿಯನ್ ಪ್ರಕಾಶ್ ಕಾರಂತ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!-ಕಹಳೆ ನ್ಯೂಸ್

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಕೂಡಾ ಟಾಪ್ ಪಟ್ಟಿಗೆ ಸೇರಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ ಉದ್ಯಮದಲ್ಲಿ ಸಾಧಕರನ್ನು ಗುರುತಿಸುತ್ತದೆ. ಈ ಭಾರಿ ಟಾಪ್ 100 ಚಿನ್ನದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದರು. ಏಳು ಜನ ಸ್ನೇಹಿತರ ತಂಡ ನೇತ್ರಾವತಿ ನದಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈಜಾಡಲು ತೆರಳಿತ್ತು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ -ಕಹಳೆ ನ್ಯೂಸ್

ಪುತ್ತೂರು  : ದ್ವಾರಕಾ ಪ್ರತಿಷ್ಠಾನ (ರಿ.), ಪುತ್ತೂರು ಇದರ ವತಿಯಿಂದ 'ದ್ವಾರಕಾ - ಆರ್ತ ಸಹಾಯ ಯೋಜನೆ'ಯಡಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪುತ್ತೂರು ತಾಲೂಕು, ಪಂಚಾಯತ್ ಕಾರ್ಯಾಲಯ ಇವರ ಮುಖೇನ ಬಂದ ಮನವಿಯನ್ನು ಪರಿಗಣಿಸಿ, ಸ್ವಾವಲಂಬಿ ಜೀವನಕ್ಕಾಗಿ ಸಹಾಯ ರೂಪದಲ್ಲಿ ಹೊಲಿಗೆ ಯಂತ್ರವನ್ನು ಮರೀಲ್ ನ ಶ್ರೀ ನಾಗರಾಜ ಇವರಿಗೆ ದಿನಾಂಕ 18-05-2026ರಂದು ಹಸ್ತಾಂತರಿಸಲಾಯಿತು. ಫಲಾನುಭವಿಯು ತೀವ್ರತರವಾದ ದೈಹಿಕ ವಿಕಲಚೇತನರಾಗಿದ್ದು, ಆರ್ಥಿಕವಾಗಿ ಬಹಳ ಹಿಂದುಳಿದಿದ್ದಾರೆ. ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಿನಿಮಾಸುದ್ದಿ

ಮೇ.22ರಂದು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಗಜಾನನ ಕ್ರಿಕೆಟರ್ಸ್’-ಕಹಳೆ ನ್ಯೂಸ್

ಕರಾವಳಿಯ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಹುಚ್ಚು ಮತ್ತು ಭಾವನೆಗಳನ್ನು ಒಂದೇ ಕಥೆಯಲ್ಲಿ ಒಗ್ಗೂಡಿಸಿಕೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' (ಜಂತೊಟ್ಟು ಸಿನ್ಸ್ 1983) ಇದೇ ಮೇ 22ರಂದು ಕರಾವಳಿ ಜಿಲ್ಲೆಯಾದ್ಯಂತ ಭರ್ಜರಿಯಾಗಿ ತೆರೆಕಾಣುತ್ತಿದೆ. ಪ್ರಜ್ವಲ್ ಫಿಲ್ಡ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕೀರ್ತನ್ ಭಂಡಾರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈಗಾಗಲೇ ಟೀಸರ್, ಹಾಡುಗಳು ಹಾಗೂ ವಿವಿಧ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಿನಿಪ್ರೇಕ್ಷಕರಲ್ಲಿ ಭಾರೀ...
1 6 7 8 9 10 740
Page 8 of 740