Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಸಮೀಪದ ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆ ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ; ರಕ್ಷಾ ಬಂಧನ ಭಾವನೆಯನ್ನು ಬೆಸೆಯುವ ಹಬ್ಬ : ಗಣರಾಜ್ ಭಟ್ ಕೆದಿಲ -ಕಹಳೆ ನ್ಯೂಸ್

ಪುತ್ತೂರು : ನಮ್ಮದು ಸನಾತನ ಹಿಂದೂ ಧರ್ಮ. ಭಾರತೀಯರಾದ ನಾವು ಪ್ರತಿಯೊಂದರಲ್ಲಿಯೂ ದೇವರಿದ್ದಾರೆ ಎಂಬ ನಂಬಿಕೆಯುಳ್ಳವರು. ಆಚಾರ, ವಿಚಾರ ಸಂಸ್ಕೃತಿ, ಸಂಸ್ಕಾರದ ಮೇಲೆ ನಂಬಿಕೆಯಿರಿಸಿ ಆರಾಧಿಸುತ್ತಾ ಬಂದವರು. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ಹಿನ್ನೆಲೆಯಿದೆ. ರಕ್ಷಾ ಬಂಧನ ಎನ್ನುವುದು ಪವಿತ್ರವಾದ ಅಣ್ಣ ತಂಗಿಯರ ಸಂಬAಧದ ಭಾವನೆಯನ್ನು ಬೆಸೆಯುತ್ತದೆ ಎಂದು ವಾಗ್ಮಿ ಗಣರಾಜ ಭಟ್ ಕೆದಿಲ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ -ಕಹಳೆ ನ್ಯೂಸ್

ಬೆಳ್ತಂಗಡಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿ ಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲಾ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜ ನಿಷೇಧಿಸುವಂತೆ ಮನವಿ -ಕಹಳೆ ನ್ಯೂಸ್

ಕಲ್ಲಡ್ಕ : ಹಿಂದೂ ಜನ ಜಾಗೃತಿ ಸಮಿತಿ ವೀರಕಂಭ ವತಿಯಿಂದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಮುಖ್ಯ ಶಿಕ್ಷಕಿಗೆ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಇನ್ನಿತರ ಯಾವುದೇ ಕಾರ್ಯಕ್ರಮಗಳಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಉಪಯೋಗಿಸುವಾಗ ಪ್ಲಾಸ್ಟಿಕ್ ಧ್ವಜ ಉಪಯೋಗಿಸಬಾರದು ಹಾಗೂ ಈ ಬಗ್ಗೆ ಶಾಲಾ ಮಕ್ಕಳಿಗೂ ಮನವರಿಕೆ ಮಾಡಬೇಕೆಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಜೀವ ಮೂಲ್ಯ ಮಜಿ, ವೀರಪ್ಪ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ: ನಿರ್ವಹಣೆ ಇಲ್ಲದೆ ಕುಸಿಯುತ್ತಿದೆ ಗ್ರಾ.ಪಂ.ವಸತಿಗೃಹ -ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಆದರ್ಶ ನಗರದ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವಸತಿಗೃಹವು ನಿರ್ವಹಣೆ ಕೊರತೆಯಿಂದ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ಗ್ರಾಮ ಪಂಚಾಯಿತಿ ಆಡಳಿತದ ಇಚ್ಛಾಶಕ್ತಿಯ ಕೊರತೆಯಿಂದ ಸಾರ್ವಜನಿಕ ಆಸ್ತಿಯೊಂದು ಧರೆಗುರುಳುವ ದಿನಗಳನ್ನು ಎದುರು ನೋಡುತ್ತಿದೆ. ಸುಮಾರು 25 ವರ್ಷದ ಹಿಂದೆ ಗ್ರಾಮ ಪಂಚಾಯಿತಿಗೆ ಸಂಪನ್ಮೂಲ ಭರಿಸುವ ಉದ್ದೇಶದೊಂದಿಗೆ ಈ ವಸತಿ ಗೃಹ ನಿರ್ಮಿಸಲಾಗಿತ್ತು. ಒಂದೇ ಹಾಲ್‌ನಂತಿರುವ ಈ ಹೆಂಚಿನ ಕಟ್ಟಡದಲ್ಲಿ ವಸತಿಗೆ ಯೋಗ್ಯವಾದ ಐದು ಮನೆಗಳಿದ್ದವು. ಮೂಲ ಸೌಕರ್ಯ ಹೊಂದಿದ್ದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಆ.12. ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 1ರಿಂದ 7ನೇ ತರಗತಿಯ ಪೋಷಕರ ಸಭೆ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ “ನಮ್ಮ ಜೀವನದ ಶೈಲಿ ಚೆನ್ನಾಗಿರಬೇಕು. ಇಡೀ ರಾಜ್ಯದಲ್ಲಿ ಶ್ರೀರಾಮದ ಮಕ್ಕಳು ಎಂಬ ಹೆಮ್ಮೆಯಿದೆ. ಮಕ್ಕಳ ಹಿತ ದೃಷ್ಟಿಯಿಂದ ಮಕ್ಕಳ ದಿಕ್ಕಿನಲ್ಲಿ ಯೋಚನೆ ಮಾಡಿ. ಮಕ್ಕಳ ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ. ಪೋಷಕರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರ ಉಪಸ್ಥಿತಿಯಲ್ಲಿ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರಗಿತು. ಸಭೆಯಲ್ಲಿ ಆಗಸ್ಟ್ ತಿಂಗಳ 24 ನೇ ತಾರೀಕಿಗೆ ಧರ್ಮಸ್ಥಳದಲ್ಲಿ ನಡೆಯುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ ಸೂಕ್ತ ಮಾಹಿತಿಯನ್ನು ಜಿಲ್ಲಾ ನಿರ್ದೇಶಕರು ನೀಡಿದರು. ಹಾಗೂ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಆ.13ರಂದು ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಶುಭಾರಂಭ -ಕಹಳೆ ನ್ಯೂಸ್

ಪುತ್ತೂರು : ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಆ. 13 ರಂದು ಶುಭಾರಂಭಗೊಳ್ಳಲಿದೆ. ನವೀಕೃತ ಸಂಸ್ಥೆಯನ್ನು ಅಶ್ವಿನಿ ಹೋಟೆಲ್ ನ ಮಾಲಕರಾದ ಕರುಣಾಕರ್ ರೈ ದೇರ್ಲ ಮತ್ತು ಉದ್ಯಮಿ ಕೃಷ್ಣವೇಣಿ ಕೆ ರೈ ದೇರ್ಲ ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಪುತ್ತೂರಿನ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಎಚ್‌. ವಕೀಲರಾದ ಅಕ್ಷತಾ ಡಿ ಶೆಟ್ಟಿ ನೆರವೇರಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ಶ್ರುತಿ ಕೋಟ್ಯಾನ್‌...
1 88 89 90 91 92 726
Page 90 of 726