ರಾತ್ರೋರಾತ್ರಿ ಕೇರಳ ರಾಜಕೀಯದಲ್ಲಿ ಭಾರಿ ತಲ್ಲಣ ; ಪಿನರಾಯಿ ಬುಡ ಅಲುಗಾಡಿಸಿದ ಈ ಚೆಲುವೆ..! ಉರುಳುತ್ತಾ ಕೇರಳ ಸರ್ಕಾರ..? – ಕಹಳೆ ನ್ಯೂಸ್
ತಿರುವನಂತಪುರದಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ 30 ಕೆ.ಜಿ. ಚಿನ್ನ ನಿನ್ನೆ ಪತ್ತೆಯಾಗಿತ್ತು. ಇದರ ಹಿಂದೆ ಒಬ್ಬ ಪ್ರಭಾವಿ ಮಹಿಳೆಯ ಕೈವಾಡ ಇರುವುದು ಇದೀಗ ಬೆಳಕಿಗೆ ಬಂದಿದೆ. ರಾಜತಾಂತ್ರಿಕ ರಕ್ಷಣೆ ಹೊಂದಿದ್ದ ‘ಡಿಪ್ಲೊಮ್ಯಾಟಿಕ್ ಬ್ಯಾಗೇಜ್’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್...