Thursday, July 23, 2026

ಕಾಸರಗೋಡು

ಕಾಸರಗೋಡು

ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಬಿಜೆಪಿ ನಾಯಕರ ಮೇಲೆ ಸಿಪಿಎಂ ಮುಖಂಡರ ನಿರ್ದೇಶನದಂತೆ ಸುಳ್ಳು ಮೊಕದ್ದಮೆ ; ಕಾಸರಗೋಡಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಆಕ್ರೋಶ – ಕಹಳೆ ನ್ಯೂಸ್

ಕಾಸರಗೋಡು, ಜು14 : ಬಿಜೆಪಿ ರಾಜ್ಯಾಧ್ಯಕ್ಷ ಕೆ. ಕೆ. ಸುರೇಂದ್ರನ್ ಹಾಗೂ ಬಿಜೆಪಿ ನಾಯಕರ ಮೇಲೆ ಸುಳ್ಳು ಮೊಕದ್ದಮೆ ಗಳನ್ನು ಹೂಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ಜಾಥಾ ನಡೆಸಲಾಯಿತು. ಪ್ರತಿಭಟನೆಯನ್ನು ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಉದ್ಘಾಟಿಸಿದರು. ಸಿಪಿಎಂ ಪಕ್ಷದ ನಾಯಕರ ನಿರ್ದೇಶನದಂತೆ ಬಿಜೆಪಿ ನಾಯಕರ ವಿರುದ್ಧ ಮೊಕದ್ದಮೆಗಳನ್ನು ಹೂಡಲಾಗುತ್ತಿದ್ದು , ಮಂಜೇಶ್ವರ ದ ಬಿ ಎಸ್ಪಿ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ಝಿಕಾ ವೈರಸ್ ಆತಂಕ | ಕೇರಳ ಗಡಿಭಾಗದಲ್ಲಿ ಭಾರೀ ಕಟ್ಟೆಚ್ಚರ ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಕೊರೊನಾ ಮಹಾಮಾರಿಯ ನಡುವೆ ಇದೀಗ ಝಿಕಾ ವೈರಸ್ ಆತಂಕ ಶುರುವಾಗಿದೆ. ಕೇರಳದಲ್ಲಿ ಈ ವೈರಸ್‌ನ ಅಟ್ಟಹಾಸ ಶುರುವಾಗಿರುವುದರಿಂದ ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೊರೊನಾ ಮಹಾಮಾರಿ ಸ್ವಲ್ಪ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಇದೀಗ ಕೇರಳದಲ್ಲಿ ಝಿಕಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸದ್ಯ ಕೇರಳದಲ್ಲಿ ಝಿಕಾ ವೈರಸ್...
ಕಾಸರಗೋಡುಕ್ರೈಮ್ಸುದ್ದಿ

ಕಾಸರಗೋಡು ಉಳಿಯತ್ತಡ್ಕ ಪರಿಸರದ 14ರ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ; ಮುಹಮ್ಮದ್ ಹನೀಫ್ ಸಹಿತ ನಾಲ್ವರು ಕಾಮುಕರ ಬಂಧನ – ಕಹಳೆ ನ್ಯೂಸ್

ಕಾಸರಗೋಡು, ಜು 05 : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.   ಉಳಿಯತ್ತಡ್ಕದ ಎ.ಕೆ ಮುಹಮ್ಮದ್ ಹನೀಫ್ (58), ಮಧೂರು ಚೇನೆಕ್ಕೋಡ್‌ನ ಸಿ. ಎ ಅಬ್ಬಾಸ್ (49), ಉಸ್ಮಾನ್ (55) ಮತ್ತು ಉಳಿಯತ್ತಡ್ಕ ಎಸ್. ಪಿ ನಗರದ ಸಿ. ಅಬ್ಬಾಸ್ (55) ಬಂಧಿತರು. ಉಳಿಯತ್ತಡ್ಕ ಪರಿಸರದ 14 ರ ಹರೆಯದ ಬಾಲಕಿಗೆ ಆಮಿಷ ತೋರಿಸಿ ಕರೆದೊಯ್ದು ಕೃತ್ಯ ನಡೆಸಲಾಗಿತ್ತು. ಜೂನ್ 26...
ಕಾಸರಗೋಡುಸುದ್ದಿ

ಕಾಸರಗೋಡು ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಬಿದ್ದು ಮೂವರು ಮೀನುಗಾರರು ನಾಪತ್ತೆ – ಕಹಳೆ ನ್ಯೂಸ್

ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೀನುಗಾರರು ನಾಪತ್ತೆಯಾದ ಘಟನೆ ರವಿವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್ (33), ರತೀಶ್ (30) ಮತ್ತು ಕಾರ್ತಿಕ್ (29) ನಾಪತ್ತೆಯಾದವರು. ರವಿ (40), ಶಿಬಿನ್ (30), ಮನಿಕುಟ್ಟನ್ (35) ಈಜಿ ದಡಸೇರಿದ್ದಾರೆ. ಇವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆ ಆದ ಕಾರ್ಮಿಕರು ಸಂದೀಪ್ ಕಾರ್ತಿಕ್...
ಕಾಸರಗೋಡುಕ್ರೈಮ್ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಕೇರಳದ ಟಿಕ್ ಟಾಕ್ ಸ್ಟಾರ್ ಬಂಧನ – ಕಹಳೆ ನ್ಯೂಸ್

ತ್ರಿಶೂರ್, ಜೂ. 13 : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಪ್ರಚೋದನೆ ನೀಡಿದ ಆರೋಪದ ಮೇಲೆ ಟಿಕ್ ಟಾಕ್ ಸ್ಟಾರ್ ಒಬ್ಬನನ್ನು ಬಂಧಿಸಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅಂಬಿಲಿ ಅಕಾ ವಿಘ್ನೇಶ್ ಕೃಷ್ಣ(19) ಎಂದು ಗುರುತಿಸಲಾಗಿದೆ. ಬಂಧಿತನ ವಿರುದ್ದ ಪೊಲೀಸರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ವಿಘ್ನೇಶ್...
ಉಡುಪಿಕಾಸರಗೋಡುದಕ್ಷಿಣ ಕನ್ನಡ

ಮಂಗಳೂರು: ತೌಕ್ತೇ ಚಂಡಮಾರುತ ಎದುರಿಸಲು ದ.ಕ. ಜಿಲ್ಲಾಡಳಿತ ಸಿದ್ಧತೆ – ಮೀನುಗಾರರಿಗೆ ಎಚ್ಚರಿಕೆ- ಕಹಳೆ ನ್ಯೂಸ್

ಮಂಗಳೂರು:- ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, “ತೌಕ್ತೇ" ಚಂಡಮಾರುತ ಕಾಣಿಸಿಕೊಳ್ಳಲಿರುವ ಹಿನ್ನಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ. ಇದಕ್ಕಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆ ಗೃಹರಕ್ಷಕ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಸುಮಾರು20 ಸದಸ್ಯರ ಎಸ್ ಡಿ ಆರ್ ಎಫ್ ತಂಡವನ್ನು ಸಿದ್ಧಗೊಳಿಸಲಾಗಿದೆ. ಇದಲ್ಲದೆ ಸುಮಾರು ತುರ್ತು ಕಾರ್ಯಾಚರಣೆಗೆ 16 ದೋಣಿಗಳು ಸಿದ್ಧವಾಗಿದೆ. ಇನ್ನೊಂದೆಡೆ ಚಂಡಮಾರುತದ...
ಕಾಸರಗೋಡುಮಂಜೇಶ್ವರಸುದ್ದಿ

ನಾಳೆ ಹೊರಬೀಳಲಿದೆ ಕೇರಳ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಭವಿಷ್ಯ ; ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಮತ್ತು ಕಾಸರಗೋಡಿನಲ್ಲಿ ಕೆ. ಶ್ರೀಕಾಂತ್ ಗೆಲುವು ಬಹುತೇಕ ಖಚಿತ – ಕಹಳೆ ನ್ಯೂಸ್

ಕಾಸರಗೋಡು, ಮೇ 01  : ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಸಂಜೆಯೊಳಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ. ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ನಡೆಯಲಿದೆ.   ಮಂಜೇಶ್ವರ - ಕುಂಬಳೆ ಹಯರ್ ಸೆಕಂಡರಿ ಶಾಲೆ, ಕಾಸರಗೋಡು - ಕಾಸರಗೋಡು ಸರಕಾರಿ ಕಾಲೇಜು, ಉದುಮ - ಪೆರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕಾಞಂಗಾಡ್ - ನೆಹರೂ ಕಾಲೇಜು ಪಡನ್ನಕಾಡ್‌, ತೃಕ್ಕರಿಪುರ - ತೃಕ್ಕರಿಪುರ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ...
ಕಾಸರಗೋಡುಮಂಜೇಶ್ವರಸುದ್ದಿ

Shocking News : ಕಾಸರಗೋಡು ಜಿಲ್ಲೆಯಲ್ಲಿ ಇಂದು ( ಎಪ್ರಿಲ್ 26 ) ಒಂದೇ ದಿನ 1,086 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಎ.26 : ಜಿಲ್ಲೆಯಲ್ಲಿ ಸೋಮವಾರ 1,086 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ 44, 170 ಮಂದಿಗೆ ಸೋಂಕು ದೃಢಪಟ್ಟಿದೆ.   ಈ ನಡುವೆ ಸೋಮವಾರ 424 ಮಂದಿ ಗುಣಮುಖರಾಗಿದ್ದಾರೆ. 12 ಆರೋಗ್ಯ ಸಿಬ್ಬಂದಿಗಳಿಗೂ ಸೋಂಕು ಪತ್ತೆಯಾಗಿದ್ದು, 1,034 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಸದ್ಯ 8,608 ಮಂದಿ ಚಿಕಿತ್ಸೆಯಲ್ಲಿದ್ದಾರೆ. 35, 209 ಮಂದಿ ನಿಗಾದಲ್ಲಿದ್ದು, ಒಟ್ಟು 11, 321 ಮಂದಿ ನಿಗಾದಲ್ಲಿದ್ದಾರೆ....
1 13 14 15 16 17 20
Page 15 of 20