Sunday, September 6, 2026

ಕಾಸರಗೋಡು

ಕಾಸರಗೋಡುಕೇರಳಕ್ರೈಮ್

ಕಿಡಿಗೇಡಿಗಳಿಂದ ಎಡನೀರು ಶ್ರೀಗಳ ಕಾರು ತಡೆದು ದಾಳಿ ; ವ್ಯಾಪಕ ಖಂಡನೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ...
ಉಡುಪಿಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಸಂತಾಪಸುದ್ದಿ

SAD NEWS : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನ – ಕಹಳೆ ನ್ಯೂಸ್

ಉಡುಪಿ : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನರಾಗಿದ್ದಾರೆ. ಉಡುಪಿಯ ಅವರ ಮಗ ಸುಬ್ರಹ್ಮಣ್ಯ ಅವರ ಮನೆಯಲ್ಲಿ ನಿಧನರಾಗಿದ್ದು, ನಾಳೆ ಬೆಳಗ್ಗೆ ಪಳ್ಳತ್ತಡ್ಕದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು‌ ತಿಳಸಿದ್ದಾರೆ....
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಮಂಜೇಶ್ವರದ ಉಪ್ಪಳ ಪತ್ವಾಡಿ ಪ್ರಕರಣ ತನಿಖೆಯಲ್ಲಿ ಬಯಲುಲಾದ ಸ್ಫೋಟಕ ಮಾಹಿತಿ ಬೆನ್ನಹತ್ತಿದ ಸಿಸಿಬಿ ಪೊಲೀಸರ ದಾಳಿ ; ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಮಂಜೇಶ್ವರದ ಹಸನ್ ಆಶೀರ್, ಕಾಸರಗೋಡು ವರ್ಕಾಡಿಯ ಮಹಮ್ಮದ್ ನೌಶಾದ್ ಸೇರಿದಂತೆ ಐವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ,ಮಂಜೇಶ್ವ ರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31); ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್...
ಕಾಸರಗೋಡುಸುದ್ದಿ

ಕಲಾಪೋಷಕ, ಸಂಘಟಕ ಕುರಿಯ ಗೋಪಾಲಕೃಷ್ಣ ಭಟ್‌ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಕುರಿಯ ಮನೆತನದ ಕುಡಿ, ಯಕ್ಷಗಾನ ಕಲಾ ಪೋಷಕರು ಹಾಗೂ ಸಂಘಟಕರು, ಖ್ಯಾತ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳ ಸಹೋದರ, ಗೋಪಾಲಪ್ಪಚ್ಚಿ ಎಂದೇ ಪ್ರಸಿದ್ಧಿ ಪಡೆದ ಕುರಿಯ ಗೋಪಾಲಕೃಷ್ಣ ಭಟ್‌ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ....
ಕಾಸರಗೋಡುಕೇರಳಸುದ್ದಿ

ಆಗಸ್ಟ್ 10 ರಂದು ವಯನಾಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ; ವೈಮಾನಿಕ ಸಮೀಕ್ಷೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಜುಲೈ 30 ರ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಜನರು ಇನ್ನೂ ಕಾಣೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಕಾಣೆಯಾದವರ ಪಟ್ಟಿ ಸಿದ್ಧ: ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರ ನಿಖರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಹೇಳಿದೆ. ಅವರಲ್ಲಿ...
ಕಾಸರಗೋಡುಸುದ್ದಿ

ಕೇರಳದ ವಯನಾಡ್ ಭೂಕುಸಿತ : ಮನೆ ಕೊಚ್ಚಿಕೊಂಡು ಹೋದರೂ ಪವಾಡ ಸದೃಶವಾಗಿ ಬದುಕುಳಿದ 40 ದಿನದ ಹೆಣ್ಣುಮಗು ಮತ್ತು ಆಕೆಯ ಆರು ವರ್ಷದ ಸಹೋದರ…!! – ಕಹಳೆ ನ್ಯೂಸ್

ವಯನಾಡ್ : ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಎರಡು ಗ್ರಾಮಗಳು ನಾಮಾವಶೇಷವಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಮನೆ ಕೊಚ್ಚಿಕೊಂಡು ಹೋದರೂ 40 ದಿನದ ಪುಟ್ಟ ಹೆಣ್ಣು ಮಗು ಮತ್ತು ಆಕೆಯ ಆರು ವರ್ಷದ ಸಹೋದರ ವಿಕೋಪದಲ್ಲಿ ಬದುಕಿ ಉಳಿದಿರುವ ಪವಾಡ ಸದೃಶ ಘಟನೆ ವರದಿಯಾಗಿದೆ. ಕುಟುಂಬದ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರೂ, ಅನಾರ ಮತ್ತು ಮುಹಮ್ಮದ್ ಹಯಾನ್ ಬದುಕಿ ಉಳಿದಿದ್ದಾರೆ....
ಕಾಸರಗೋಡುಯಕ್ಷಗಾನ / ಕಲೆಸುದ್ದಿ

ಆ.03ರಂದು ಶ್ರೀಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಇವರ ಸೇವಾರೂಪದಲ್ಲಿ ನಡೆಯಲಿರುವ ಶ್ರೀಮದ್ ದೇವೀ ಭಾಗವತ ನವಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಇವರ ಸೇವಾರೂಪದಲ್ಲಿ ಶ್ರೀಮದ್ ದೇವೀ ಭಾಗವತ ನವಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹದ ಉದ್ಘಾಟನಾ ಸಮಾರಂಭವು ಆ.03 ಎಡನೀರು ಮಠದಲ್ಲಿ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಾ. ಟಿ...
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
1 3 4 5 6 7 20
Page 5 of 20