Sunday, September 6, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ; ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ನಗರದ ಮಹಿಳೆಗೆ ಕೊರೋನಾ ಸೊಂಕು ದೃಢ – ಕಹಳೆ ನ್ಯೂಸ್

ಪುತ್ತೂರು: ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ದೃಢಗೊಳ್ಳುವ ಮೂಲಕ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಜೂ.28ರಂದು ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದೆ.  ಮನೆ ಮನೆ ತೆರಳಿ ಆರೋಗ್ಯ ವಿಚಾರಣೆ ನಡೆಸುತ್ತಿದ್ದ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಕೃಷ್ಣನಗರ ನಿವಾಸಿ ಮಹಿಳೆಯೊಬ್ಬರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೋನಾ ದೃಢಗೊಂಡಿದೆ ಎಂಬ ಮಾಹಿತಿ ತಿಳಿದು ಬಂದೆ....
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ ; ಸುರತ್ಕಲ್ ನ 51 ವರ್ಷದ ಮಹಿಳೆ ಮೃತ – ಇಂದು ಒಂದೇ ದಿನ ಜಿಲ್ಲೆಯಲ್ಲಿ 3 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು, ಜೂನ್ 28 : ಮಂಗಳೂರಿನಲ್ಲಿ ಕೊರೋನಾ ಅಟ್ಟಹಾಸಕ್ಕೆ ಇಂದು ಮೂರನೇ ಬಲಿ ಪಡೆದಿದೆ. ಸುರತ್ಕಲ್ ನ ಜೋಕಟ್ಟೆಯ ಸಮೀಪ 51 ವರ್ಷದ ಮಹಿಳೆ ಮಾರಕ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಜೋಕಟ್ಟೆಯ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಬಳಿಕ ಗಂಟಲ ದ್ರವ ಪಡೆದು ಕೊರೋನಾ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಟಿಬಿಯಿಂದ ಬಳಲುತ್ತಿದ್ದ ಮಹಿಳೆಯು ಜೂ.26 ರಂದು ಸುರತ್ಕಲ್ ಆಸ್ಪತ್ರೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿ : ಸುರತ್ಕಲ್ ನ 31 ವರ್ಷದ ಯುವಕ, ಬಂಟ್ವಾಳದ 57 ವರ್ಷದ ವೃದ್ದೆ ಸಾವು – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಬಂಟ್ವಾಳದಲ್ಲಿ ಇದೀಗ ಮತ್ತೊಂದು ಬಲಿಯಾಗಿದೆ. 57 ವರ್ಷದ ಬಂಟ್ವಾಳದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಲಿವರ್ ಹಾಗೂ ಹೃದಯ ರೋಗದ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

Breaking News : ರಾಜ್ಯಕ್ಕೆ ಇಂದು ಕೊರೊನಾ ಬಿಗ್ ಶಾಕ್ : ಬೆಂಗಳೂರಲ್ಲಿ 596, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49 ಮಂದಿಗೆ ಸೋಂಕು ದೃಢ ; ಇಂದು ಒಂದೇ ದಿನ ರಾಜ್ಯದಲ್ಲಿ 918 ಮಂದಿಗೆ ಕೊರೊನಾ ಪಾಸಿಟಿವ್ – ನಾಳೆಯಿಂದ ರಾಜ್ಯಕ್ಕೆ ಕಾದಿದೆಯಾ ಗ್ರಹಚಾರ..? – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಪೋಟವಾಗಿದೆ. ಸಿಲಿಕಾನ್ ಸಿಟಿ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 918 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದು ಬರೋಬ್ಬರಿ 11 ಮಂದಿ ಮೃತಪಟ್ಟಿದ್ದಾರೆ‌. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಮಹಾಮಾರಿಯ...
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ; ಪ್ರದೇಶ ಸೀಲ್ಡೌನ್ – ಜನತೆಯಲ್ಲಿ ಮನೆಮಾಡಿದೆ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ : ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು....
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತ್ಯು – ಕಹಳೆ ನ್ಯೂಸ್

ಜೂ 27: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಬೆಳ್ತಂಗಡಿ ಮೆಸ್ಕಾಂ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಬಿಜಾಪುರ ಮೂಲದ, ಬಸವರಾಜ್ ಎಂಬವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಪ್ಪೇಟಿಯಲ್ಲಿ ವಿದ್ಯುತ್ ಟ್ರಾನ್ಸಫಾರ್ಮರ್ ಬಳಿ ಅರ್ತ್ ಫಾಲ್ಟ್ ನ್ನು ದುರಸ್ತಿಗೊಳಿಸುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಳೆದ ವರ್ಷ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲೂ ಇದೇ ರೀತಿಯ...
ದಕ್ಷಿಣ ಕನ್ನಡಸುದ್ದಿ

Breaking News : ಮಂಗಳೂರಿನ ಮಾಜಿ ಶಾಸಕರ ಪುತ್ರನಿಗೆ ಕೊರೊನಾ ಸೋಂಕು ; ಶಾಸಕರ ಸುರತ್ಕಲ್ ಬೊಕ್ಕಬೆಟ್ಟಿನ ನಿವಾಸ ಸೀಲ್ ಡೌನ್ – ಕಹಳೆ ನ್ಯೂಸ್

ಮಂಗಳೂರು, ಜೂ 26 : ಮಾಜಿ ಶಾಸಕರೊಬ್ಬರ ಪುತ್ರನಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿರುವ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಅವರ ಪುತ್ರನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಆದರೆ, ಮಂಗಳೂರಿನಲ್ಲಿರುವ ಮಾಜಿ ಶಾಸಕ ಹಾಗೂ ಅವರ ಪತ್ನಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಒಸಲಾಗಿದ್ದು, ನೆಗೆಟಿವ್ ವರದಿ ಲಭ್ಯವಾಗಿದೆ. ಇಲ್ಲಿ ಯಾವುದೇ ಆತಂಕ ಇಲ್ಲ ಎಂದು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ತಿಳಿಸಿದೆ. ಈ ನಡುವೆ ಮುನ್ನೆಚ್ಚರಿಕಾ ಕ್ರಮವಾಗಿ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ ವರ್ಗಾವಣೆ ; ಹೊಸ ತಹಶೀಲ್ದಾರ್ ಆಗಿ ಮಹೇಶ್.ಜೆ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ: ತಹಶೀಲ್ದಾರ್ ಗಣಪತಿ ಶಾಸ್ತ್ರೀ ಯವರನ್ನು ಚಾಮರಾಜನಗರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹಾಗೆಯೆ ಬೆಳ್ತಂಗಡಿಗೆ ಹೊಸ ತಹಶೀಲ್ದಾರ್ ಆಗಿ ಚಾಮರಾಜನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್.ಜೆ ರನ್ನು ನೇಮಕ ಮಾಡಲಾಗಿದೆ....
Page 1009 of 1012