Thursday, May 14, 2026

ಜಿಲ್ಲೆ

ಉಡುಪಿಜಿಲ್ಲೆಸುದ್ದಿ

ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಮೇಳಕ್ಕೆ ಹತ್ತು ವರ್ಷ ಒಂದು ಮಹಾನ್ ಸಾಧನೆ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು -ಕಹಳೆ ನ್ಯೂಸ್

ಉಡುಪಿ : ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಆಚರಿಸುತ್ತಿರುವುದು ಮಹಾನ್ ಸಾಧನೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ದ್ಯುತಿಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಹಾಗೂ ನಮ್ಮ ಕಲಾಕೇಂದ್ರ ಕೋಟೇಶ್ವರ ಇವರ ಜಂಟಿ...
ಉಡುಪಿಜಿಲ್ಲೆಸುದ್ದಿ

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ -ಕಹಳೆ ನ್ಯೂಸ್

ಉಡುಪಿ : ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ...
ಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಗಳ ನೂತನ ಲಾಂಛನ ಬಿಡುಗಡೆ -ಕಹಳೆ ನ್ಯೂಸ್

ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಸಂಸ್ಥೆಗಳ ನೂತನ ಲಾಂಛನವನ್ನು ಮೂಡುಬಿದಿರೆ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಎಸ್ ಮುಂದಲಮನಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು ಎದುರಾಗುವ ಅನೀರೀಕ್ಷಿತ ಸಮಸ್ಯೆಗಳನ್ನು ಎದುರಿಸಲು ವಿದ್ಯೆ ಸಹಕಾರಿಯಾಗಬಲ್ಲದು ಆದ್ದರಿಂದ ಎಲ್ಲರೂ ವಿದ್ಯಾವಂತರಾಗಬೇಕು ಎಂದರು. ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ದೇಹಕ್ಕೆ ಶಿರ ಪ್ರಧಾನವೆಂಬತೆ, ಸಂಸ್ಥೆಯ ಉದ್ದೇಶ, ಸಂಕಲ್ಪ, ಬದ್ಧತೆಗಳ ಸಂದೇಶವನ್ನು ಹೊಂದಿದ ಲಾಂಛನ ಸಂಸ್ಥೆಗೆ ಶಿರೋಭೂಷಣವಿದ್ದಂತೆ, ಬೆಳಕಿನ ಪ್ರತೀಕ ಎಕ್ಸಲೆಂಟಿನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಹುಲಿವೇಷವು ನಾಡಿನ ಹೆಮ್ಮೆಯ ನೃತ್ಯದ ಆಯಾಮವಾಗಿದೆ;ಸ್ಯಾಂಡಲ್ ವುಡ್ ನಟ ಶರಣ್ -ಕಹಳೆ ನ್ಯೂಸ್

ಮಂಗಳೂರು : ನಾಡಿನ ಬಹಳ ಹೆಮ್ಮೆಯ ನೃತ್ಯದ ಆಯಾಮವಾದ ಹುಲಿವೇಷದ ಊದು ಪೂಜೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿರುವುದು ನಿಜಕ್ಕೂ ಸಂತೋಷವಾಗಿದೆ.ಇಲ್ಲಿಗೆ ನಾನು ಬರೀ ಕಲಾವಿದನಲ್ಲದೆ ಕನ್ನಡಿಗನಾಗಿ ಬಂದಿದ್ದೇನೆ.ನಮ್ಮ ನಾಡಿನಲ್ಲಿ ವಿಭಿನ್ನತೆಯಲ್ಲಿ ಏಕತೆಯನ್ನ ಕಾಣಲು ಮಂಗಳೂರೆ ಸ್ಪಷ್ಟ ನಿದರ್ಶನವಾಗಿದೆಯೆಂದು ಸ್ಯಾಂಡಲ್ ವುಡ್ನ ಖ್ಯಾತ ನಾಯಕನಟ ಶರಣ್ ಅಭಿಪ್ರಾಯಪಟ್ಟರು. ಬೆಂಗಳೂರಿನ ಉದ್ಯಮಿ ಪ್ರಕಾಶ್ ಕುಂಪಲ ನೇತೃತ್ವದಲ್ಲಿ ಕುಂಪಲ ಆದಿಶಕ್ತಿ ಕ್ರಿಕೆಟರ್ಸ್ ವತಿಯಿಂದ ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಶುಕ್ರವಾರದಂದು ಕುಂಪಲದ ಆದಿಶಕ್ತಿ...
ಆರೋಗ್ಯಉಡುಪಿಜಿಲ್ಲೆಸುದ್ದಿ

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಖ್ಯಾತ ಹೃದ್ರೋಗ ತಜ್ಞ ಡಾ. ರಂಜನ್ ಶೆಟ್ಟಿ ನೇತೃತ್ವದಲ್ಲಿ ಉಡುಪಿಯಲ್ಲಿ ವಿಶೇಷ ತಪಾಸಣಾ ಶಿಬಿರ -ಕಹಳೆ ನ್ಯೂಸ್

ಉಡುಪಿ : ಭಾರತದಲ್ಲಿ ಯುವಜನರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಮತ್ತು ಇತರ ಹೃದ್ರೋಗಗಳಿಗೆ ತುತ್ತಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಅಧಿಕ ಕೊಲೆಸ್ಟ್ರಾಲ್ ಮತ್ತು ರಕ್ತನಾಳಗಳಲ್ಲಿನ ಅಡಚಣೆಯಂತಹ ಸಮಸ್ಯೆಗಳು ಬಾಲ್ಯದಿಂದಲೇ ಆರಂಭವಾಗಬಹುದು ಎಂಬುದು ಈ ಬೆಳವಣಿಗೆಯಿಂದ ಸ್ಪಷ್ಟವಾಗಿದೆ. ಈ ಗಂಭೀರ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಸ್ಪರ್ಶ್ ಹಾಸ್ಪಿಟಲ್ಸ್ ಗ್ರೂಪ್‌ನ ವೈದ್ಯಕೀಯ ನಿರ್ದೇಶಕರು ಹಾಗೂ ಬೆಂಗಳೂರಿನ ಇನ್ನೆಂಟ್ರಿ ರಸ್ತೆಯಲ್ಲಿರುವ ಸ್ಪರ್ಶ್ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. (ಪ್ರೊ) ರಂಜನ್ ಶೆಟ್ಟಿ ಅವರು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಹುಲಿವೇಷದ ಸಾಂಪ್ರದಾಯಿಕ ಊದು ಪೂಜೆಯಲ್ಲಿ ಪಾಲ್ಗೊಂಡ ಚಿತ್ರನಟಿಯರಾದ ರಂಜನಿ, ಸಂಜನಾ,ರಮೋಲ -ಕಹಳೆ ನ್ಯೂಸ್

ಮಂಗಳೂರು: ಪ್ರಕಾಶ್ ಕುಂಪಲ ನೇತೃತ್ವದಲ್ಲಿ ಕುಂಪಲ ಆದಿಶಕ್ತಿ ಕ್ರಿಕೆಟರ್ಸ್ ವತಿಯಿಂದ ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಶುಕ್ರವಾರದಂದು ಕುಂಪಲದ ಆದಿಶಕ್ತಿ ಕ್ಷೇತ್ರದಲ್ಲಿ ನಡೆದ ದ್ವಿತೀಯ ವರ್ಷದ ಹುಲಿವೇಷದ ಸಾಂಪ್ರದಾಯಿಕ ಊದು ಪೂಜೆಯಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ಶರಣ್ ಸೇರಿದಂತೆ ನಟಿಮಣಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿನಟಿಯರಾದ ರಂಜನಿ ರಾಘವನ್,ಸಂಜನಾ ಆನಂದ್ ,ರಮೋಲಾ,ಝುಲ್ಫಿಕರ್ ಆಲಿ,ನ್ಯಾಯವಾದಿ ಆಸೀಫ್ ಬೈಕಾಡಿ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಚಿತ್ರ ನಟಿಯರಾದ ರಂಜನಿ, ಸಂಜನಾ,ರಮೋಲ, ಕುಂಪಲ ಆದಿಶಕ್ತಿ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಆಗಸ್ಟ್ 18ರಂದು ಚೀನಾದ ‘ವಿದೇಶಾಂಗ ಸಚಿವ ವಾಂಗ್ ಯಿ’ ಭಾರತಕ್ಕೆ ಆಗಮನ -ಕಹಳೆ ನ್ಯೂಸ್

ನವದೆಹಲಿ : ಹಿಮಾಲಯದಲ್ಲಿನ ವಿವಾದಿತ ಗಡಿ ಕುರಿತು ಮಾತುಕತೆ ನಡೆಸಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಆಗಸ್ಟ್ 18-20 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಆಗಸ್ಟ್ 16 ರಂದು ಹೇಳಿಕೆಯಲ್ಲಿ ತಿಳಿಸಿದೆ. ನವದೆಹಲಿಯ ಆಹ್ವಾನದ ಮೇರೆಗೆ ವಾಂಗ್ ಚೀನಾ ಮತ್ತು ಭಾರತದ ವಿಶೇಷ ಪ್ರತಿನಿಧಿಗಳ ನಡುವೆ ಗಡಿ ಪ್ರಶ್ನೆಯ ಕುರಿತು 24 ನೇ ಸುತ್ತಿನ ಮಾತುಕತೆ ನಡೆಸಲಿದ್ದಾರೆ. 2020 ರಲ್ಲಿ ಗಡಿಯಲ್ಲಿ ಭಾರತ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್‌ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ. "ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು,...
1 154 155 156 157 158 967
Page 156 of 967