Thursday, May 14, 2026

ಜಿಲ್ಲೆ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಪ್ರಕರಣ: SIT ಶೀಘ್ರವಾಗಿ ತನಿಖೆ ಪೂರ್ಣಗೊಳಿಸಲಿ: ಬಿ.ವೈ.ವಿಜಯೇಂದ್ರ ಆಗ್ರಹ -ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ವಿನಾಕಾರಣ ವಿಳಂಬಗೊಳಿಸುವಂತಿಲ್ಲ. ಆದಷ್ಟು ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಬೇಕು ಎಂದು ಹೇಳಿದರು. ಬಿಜೆಪಿಯ ಹಿರಿಯ ಶಾಸಕರು, ವಿಧಾನಪರಿಷತ್ ಸದಸ್ಯರನ್ನೊಳಗೊಂಡ ಒಂದು ತಂಡ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿ...
ಜಿಲ್ಲೆಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಭಕ್ತರ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ, ಅಪಪ್ರಚಾರ ಮಾಡುತ್ತಿರುವುದಲ್ಲದೇ ಧರ್ಮದ ಸನ್ನಿಧಿಗೆ ಅವಹೇಳನ ಮಾಡಲಾಗುತ್ತಿದೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಯಚೂರು, ಬಾಗಲಕೋಟೆ, ಚಾಮರಾಜನಗರ, ಗದಗ, ಮೈಸೂರು, ಕಲಬುರಗಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ರಾಮನಗರ ಸೇರಿದಂತೆ ವಿವಿಧೆಡೆ ಬಹತ್‌ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳ ಪರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ -ಕಹಳೆ ನ್ಯೂಸ್

ಬೆಳಗಾವಿ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ SITಅಧಿಕಾರಿಗಳು 13ನೇ ಸ್ಥಳದಲ್ಲಿ ಅಸ್ತಿಪಂಜರ ಶೋಧ ಕಾರ್ಯ ನಡೆಸುತ್ತಿದೆ. ಧರ್ಮಸ್ಥಳ ಶ್ರದ್ಧಾ ಕೇಂದ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಆರೋಪದ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಈ 'ನಾಟಕ'ವನ್ನು ನಿಲ್ಲಿಸುವಂತೆ ಅವರು ಎಸ್‌ಐಟಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಹಲವು ದಿನಗಳಿಂದ ಧರ್ಮಸ್ಥಳದ ಕುರಿತು ನಡೆಯುತ್ತಿರುವ ತನಿಖೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಒಂದು ವಾರ ಮುಂದುವರೆಯಲಿದೆ ಮಳೆ -ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ರಾಯಚೂರು, ಧಾರವಾಡ, ಹುಬ್ಬಳ್ಳಿ, ಹಾಸನ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಒಂದು ವಾರ ಇದೇ ರೀತಿ ಮಳೆ ಚುರುಕು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹೊರತುಪಡಿಸಿ ಎಲ್ಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಸಮೀಪದ ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆ ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ; ರಕ್ಷಾ ಬಂಧನ ಭಾವನೆಯನ್ನು ಬೆಸೆಯುವ ಹಬ್ಬ : ಗಣರಾಜ್ ಭಟ್ ಕೆದಿಲ -ಕಹಳೆ ನ್ಯೂಸ್

ಪುತ್ತೂರು : ನಮ್ಮದು ಸನಾತನ ಹಿಂದೂ ಧರ್ಮ. ಭಾರತೀಯರಾದ ನಾವು ಪ್ರತಿಯೊಂದರಲ್ಲಿಯೂ ದೇವರಿದ್ದಾರೆ ಎಂಬ ನಂಬಿಕೆಯುಳ್ಳವರು. ಆಚಾರ, ವಿಚಾರ ಸಂಸ್ಕೃತಿ, ಸಂಸ್ಕಾರದ ಮೇಲೆ ನಂಬಿಕೆಯಿರಿಸಿ ಆರಾಧಿಸುತ್ತಾ ಬಂದವರು. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ಹಿನ್ನೆಲೆಯಿದೆ. ರಕ್ಷಾ ಬಂಧನ ಎನ್ನುವುದು ಪವಿತ್ರವಾದ ಅಣ್ಣ ತಂಗಿಯರ ಸಂಬAಧದ ಭಾವನೆಯನ್ನು ಬೆಸೆಯುತ್ತದೆ ಎಂದು ವಾಗ್ಮಿ ಗಣರಾಜ ಭಟ್ ಕೆದಿಲ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ -ಕಹಳೆ ನ್ಯೂಸ್

ಬೆಳ್ತಂಗಡಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿ ಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ...
ಉಡುಪಿಜಿಲ್ಲೆಸುದ್ದಿ

10 ಸಾವಿರ ಗೌರವಧನ ನೀಡಿ: ಆಶಾ ಕಾರ್ಯಕರ್ತೆಯರ ಧರಣಿ -ಕಹಳೆ ನ್ಯೂಸ್

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಯಿತು. ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ. ಭಟ್‌ ಮಾತನಾಡಿ, ಮುಖ್ಯಮಂತ್ರಿ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹10 ಸಾವಿರ ಗೌರವನಿಧಿಯನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಬೇಕು ಎಂದು ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರ ಅವೈಜ್ಞಾನಿಕ...
1 159 160 161 162 163 967
Page 161 of 967