Thursday, April 23, 2026

ಜಿಲ್ಲೆ

ಜಿಲ್ಲೆಸುದ್ದಿ

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ ಪೇದೆ ಬಂಧನ -ಕಹಳೆ ನ್ಯೂಸ್

ಬಾಗಲಕೋಟೆ: ಬಾದಾಮಿ  ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಹಾಗೂ ಪೇದೆ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್‌ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಎರಡು ಲಕ್ಷ ಡಿ.ಡಿ.ವಿತರಣೆ – ಕಹಳೆ ನ್ಯೂಸ್

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ವಿತರಣೆ ಮಾಡಿದರು. ಈ‌ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ಕುಮಾರ್,ಮರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ, ಉಪಾಧ್ಯಕ್ಷರಾದ ರಾಘವ ನಾಯ್ಕ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಡೆನ್ನಾನ-ಡೆನ್ನನ 2026 : ಯುವವಾಹಿನಿ ಕೂಳೂರು ಘಟಕ ಚಾಂಪಿಯನ್ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’**ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ,...
ಕೊಡಗುಜಿಲ್ಲೆಸುದ್ದಿ

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌,-ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ   ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು  ಬಂಧಿಸಿದ್ದಾರೆ. ವಾಷಿಂಗ್ಟನ್‌ ಮೂಲದ ಮಹಿಳೆ ಮೇಲೆ ಜಾರ್ಖಂಡ್‌ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್ ಕುಮಾರ್, ಹೋಂಸ್ಟೇ  ಮಾಲೀಕ ವಿಶಾಲ್ ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಏನಿದು ಪ್ರಕರಣ? ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ...
ಜಿಲ್ಲೆಬೆಳಗಾವಿಸುದ್ದಿ

ಸೀರೆ ಬಿಟ್ಟು ನೈಟಿ ಹಾಕ್ತೀಯಾ ಅಂತ ಹೆಂಡ್ತಿಗೆ ಬೆಂಕಿ ಹಚ್ಚಿದ ಭೂಪ -ಕಹಳೆ ನ್ಯೂಸ್

ಬೆಳಗಾವಿ: ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 80% ಸುಟ್ಟ ಗಾಯಗಳಾದ ಹಿನ್ನೆಲೆ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಯಿಂದ ಗೋವಾಗೆ ಶಿಫ್ಟ್ ಮಾಡಿದ್ದಾರೆ. ಮಂಜುಳಾ ಹಾಗೂ ಕೃಷ್ಣಾಜಿ ಕಳೆದ ಎಂಟು ವರ್ಷಗಳ ಹಿಂದೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ -ಕಹಳೆ ನ್ಯೂಸ್

ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು...
ಉಡುಪಿಜಿಲ್ಲೆಸುದ್ದಿ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ ಪತ್ರಕರ್ತರಿಗೆ ಮಾದರಿಯಾಗಿದೆ. ಪತ್ರಿಕಾಗೋಷ್ಠಿಗಳಲ್ಲಿ ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಹಳ ಕಷ್ಟವಾಗುತ್ತಿತ್ತು ಹಾಗೂ ಕೆಲವೊಮ್ಮೆ...
ಉಡುಪಿಜಿಲ್ಲೆಬೈಂದೂರುಸುದ್ದಿ

ಬೈಂದೂರಿನಲ್ಲಿ ಆಧ್ಯಾತ್ಮದ ಅಲೆ ಗೋಳಿಹೊಳೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ಮಹೋತ್ಸವಕ್ಕೆ ಸಿದ್ಧತೆ -ಕಹಳೆ ನ್ಯೂಸ್

​ಬೈಂದೂರು: ಆಧ್ಯಾತ್ಮಿಕ ಲೋಕದಲ್ಲಿ ಕುಂಭಮೇಳಕ್ಕೆ ಎಷ್ಟು ಮಹತ್ವವಿದೆಯೋ, ಅಷ್ಟೇ ಪಾವಿತ್ರ್ಯತೆಯೊಂದಿಗೆ ಬೈಂದೂರು ಕ್ಷೇತ್ರದ ಗೋಳಿಹೊಳೆಯಲ್ಲಿ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 48 ದಿನಗಳ ಚಾತುರ್ಮಾಸ್ಯ ವ್ರತಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜುಲೈ 28 ರಿಂದ ಆರಂಭವಾಗಲಿರುವ ಈ ಅನುಷ್ಠಾನವು ಬೈಂದೂರಿನ ಪಾಲಿಗೆ ಆಧ್ಯಾತ್ಮಿಕ ಕುಂಭಮೇಳದಂತಹ ಭವ್ಯ ಅನುಭವವನ್ನು ನೀಡಲಿದೆ. ​ಈ ಮಹೋನ್ನತ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗೋಳಿಹೊಳೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಚಿವರಾದ ಮಾಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ...
1 2 3 4 955
Page 2 of 955