ಹಾಡಹಗಲೇ ಕಾಡಾನೆ ದಾಳಿ :ಮಹಿಳೆ ಸಾವು -ಕಹಳೆ ನ್ಯೂಸ್
ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ಘಟಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಹಾಡಿಯ ವಾಸಿ ಜಲಜಾಕ್ಷಿ ಮೃತ ದುರ್ದೈವಿ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಕುಲಕಸುಬು ಅರಣ್ಯ ಉತ್ಪನ್ನಗಳ ಸಂಗ್ರಹಕ್ಕೆಂದು ತಮ್ಮ ಮನೆಯಂಗಳದ ಆಸುಪಾಸಿನ ಅರಣ್ಯಕ್ಕೆ ತೆರಳಿ ಸೀಗೆ ಹೆರಕುತ್ತಿದ್ದಾಗ ಏಕಾಏಕಿ ಧಾವಿಸಿದ...






