ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ -ಕಹಳೆ ನ್ಯೂಸ್
ಬೆಳಾಲು: ಜ 28 ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ರಿ. ಬೆಳಾಲು ಇದರ ಅಧ್ಯಕ್ಷರು...







