ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ, ವಧೆ ವಿರುದ್ದ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್
ಮಂಗಳೂರು, ಜು 28 : ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪಶುಪಾಲನಾ ಇಲಾಖೆಯವರಿಗೆ ಸೂಚಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ...