Monday, April 27, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ದಕ್ಷಿಣ ಕನ್ನಡ : ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾದ ಬೆಳೆಗಾರರು-ಕಹಳೆ ನ್ಯೂಸ್

ಕರಾವಳಿಯ ಅಡಿಕೆ ಬೆಳೆಗಾರರಿಗೆ ಎದುರಾಗುವ ಸಮಸ್ಯೆಗಳಿಗೆ ಕೊನೆ ಇಲ್ಲವಾಗಿದೆ. ಪ್ರಸ್ತುತ ತೋಟಗಳಲ್ಲಿ ಎಲೆಚುಕ್ಕೆ ರೋಗ ಕಾಣಿಸಿದ್ದು, ಅವುಗಳ ನಿಯಂತ್ರಣವೇ ಸವಾಲಾಗಿದೆ. ಎಲೆ ಚುಕ್ಕೆ ರೋಗ ಫಸಲಿನ ಮೇಲೆ ಪರಿಣಾಮ ಬೀರುತ್ತಿದ್ದು, ಇಳುವರಿ ಕುಸಿತದ ಭೀತಿ ಎದುರಾಗಿದೆ. ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ಬೇಸಗೆಯಲ್ಲಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಮಳೆ ಅಧಿಕವಾಗಿರುವ ಕಾರಣ ಎಲೆಚುಕ್ಕೆ ರೋಗ ತೋಟಗಳಲ್ಲಿ ವ್ಯಾಪಕವಾಗಿ ಹರಡಿದೆ. ರೋಗ ಬಾಧೆಗೆ ಒಳಗಾದ ಅಡಿಕೆ ಮರಗಳ ಸೋಗೆಗಳು ಒಣಗಿವೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ಶಿವಮೊಗ್ಗ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಹಾಗೂ ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೇಮಾನಂದ ಶೆಟ್ಟಿಯವರು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಮಂಡಲ ಅಧ್ಯಕ್ಷರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ : ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ, ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ ಹಾಗೂ ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆಯಾಗಿದ್ದಾರೆ. ಇನ್ನು ಸದಸ್ಯರಾಗಿ ಭವ್ಯ ದೇವಸ್ಯ, ಯಶೋಧ ಕಾಂತಿಲ, ದೂಜೆಪಿನಾ ಡಿಸೋಜ ಪಂಜಳ, ಸುನಂತಿ ಮಾದ್ಯರು ಕಟ್ಟೆಮನೆ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ದಾಜಮ್ಮ ಪಂಜಳ, ಯಕ್ಷತಾ, ಪ್ರೇಮಲತಾ ಮಾಧವ ಬಂಗೇರ ವಳಗುಡ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆಯಿತು. ಜ.18ರಂದು ಪುತ್ತೂರು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಶ್ರೀ ಅಯ್ಯಪ್ಪ ಭಕ್ತವೃಂದ ಗಣೇಶನಗರ ನೇರಳಕಟ್ಟೆಯಲ್ಲಿ ಡಿ.29ರಂದು ಶ್ರೀ ಹನುಮಗಿರಿ ಮೇಳದವರಿಂದ “ಸಾಕೇತ ಸಾಮ್ರಾಜ್ಞ ” ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಶ್ರೀ ಅಯ್ಯಪ್ಪ ಭಕ್ತವೃಂದ ಗಣೇಶನಗರ ನೇರಳಕಟ್ಟೆಯಲ್ಲಿ ಡಿ.29ರಂದು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದವರಿಂದ "ಸಾಕೇತ ಸಾಮ್ರಾಜ್ಞ "ಯಕ್ಷಗಾನ ಬಯಲಾಟ ನಡೆಯಲಿದೆ. ಹೊಟೇಲ್ ಸದ್ಗುರು ಇದರ ಮಾಲಕರಾದ ಶ್ರೀ ಅನಂತಪ್ರಭು ಇವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೆನ್ನೈ ನ ಉದ್ಯಮಿ ಶ್ರೀ ಉಮೇಶ್ ಕುಮಾರ್, ಶ್ರೀ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಪಾಂಡೇಶ್ವರ ಠಾಣೆಯ ಎಎಸ್‌ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಭೂರು ಶಾಲೆಯಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ, ಶಿಲನ್ಯಾಸ ಮತ್ತು ಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ: ಗ್ರಾಮಕ್ಕೊಂದು ಮಾದರಿ ಶಾಲೆಯನ್ನಾಗಿ ಮಾಡಿ ಆ ಗ್ರಾಮದಲ್ಲಿರುವ ಬೆರಳೆಣಿಕೆಯ ಮಕ್ಕಳನ್ನು ಹೊಂದಿದ ಶಾಲೆಗಳ ಮಕ್ಕಳನ್ನು ಒಂದೇ ಕಡೆ ಸೇರಿಸಿ ಅವರಿಗೆ ಬೇಕಾದ ವಾಹನ ಶಿಕ್ಷಕರ ಸೌಲಭ್ಯವು ಒದಗಿಸಿ ಎಲ್ಲರಿಗೂ ಉತ್ತಮ ಶಿಕ್ಷಣ ದೊರಕುವಂತೆ ಮಾಡಬೇಕು, ಸರಕಾರಿ ಶಾಲೆಗಳು ಪ್ರಗತಿ ಹೊಂದಿದಾಗ ಪ್ರತಿಯೊಬ್ಬ ನಾಗರಿಕನು ಶಿಕ್ಷಿತನಾಗಲು ಸಾಧ್ಯ,ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಯು ಹೇಳಿದರು. ಅವರು ಡಿಸೆಂಬರ್ 27 ನೇ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್,...
1 50 51 52 53 54 957
Page 52 of 957