Recent Posts

Sunday, April 26, 2026

ಜಿಲ್ಲೆ

ಉಡುಪಿಜಿಲ್ಲೆಸುದ್ದಿ

ಕಟಪಾಡಿ ಎಸ್‌ವಿಎಸ್ ಕ್ರೀಡಾಂಗಣದಲ್ಲಿ ಭಕ್ತ ಸಾಗರ ಸಾಕ್ಷಾತ್ ಅನುಭವಿಸಿದ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ -ಕಹಳೆ ನ್ಯೂಸ್

ಉಡುಪಿ : ವಿಜಯದ ಧನ್ಯತೆ ಪುರುಷೋತ್ತಮನ ಸಾಧನೆ ಮತ್ತು ಮಾರ್ಗದರ್ಶನ ಸತ್ಯದಿಂದಲೇ ರಾಜನಾಗುವ ಧೇಯ ಎಲ್ಲರೂ ಸೇರಿ ಪ್ರೀತಿಯಿಂದ ಸಮಾಧಾನದಿಂದ ಬದುಕಬೇಕೆಂಬ ಕೃಷ್ಣನ ಮೋಹನ ಗುಣ ಇವೆಲ್ಲದರ ಪ್ರತ್ಯಕ್ಷ ಸಾಕ್ಷಿಯೇ ಕಟಪಾಡಿ ಎಸ್‌ವಿಎಸ್ ಕ್ರೀಡಾಂಗಣದಲ್ಲಿ ಭಕ್ತ ಸಾಗರ ಸಾಕ್ಷಾತ್ ಅನುಭವಿಸಿದ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ತ್ರೇತಾ ಯುಗದಲ್ಲಿ ಶ್ರೀರಾಮನು ವೇದವಲ್ಲಿಗೆ ನೀಡಿದ ವಚನದಂತೆ ದ್ವಾಪರದಲ್ಲಿ ಯಶೋದ ಮಾತೆಯ ಇಚ್ಛೆಯಂತೆ ಕಲಿಯುಗದಲ್ಲಿ ಭೂಮಿಯ ಮೇಲೆ ಸಂಸಾರದ ಸಾರ್ಥಕ್ಯದ ಸಮಾಧಾನದ ಬದುಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ದಲ್ಲಿ ಮೆಟ್ರಿಕ್ ಮೇಳ, ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ ಏಪ್ರಿಲ್ 10 ರಂದು ಜರಗಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವ್ಯವಹಾರದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ಮಕ್ಕಳ ಪೋಷಕರು, ಉತ್ಸಾಹದಿಂದ ಭಾಗವಹಿಸಿ ಮಕ್ಕಳು ವ್ಯಾಪಾರಕ್ಕೆ ಇಟ್ಟ ತಿಂಡಿ ತಿನಿಸು, ತರಕಾರಿ ಗಳನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಯಾಗುತ್ತದೆ : ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ -ಕಹಳೆ ನ್ಯೂಸ್

ಪುತ್ತೂರು :ವೇದಮಂತ್ರಗಳು, ಯೋಗ ಇತ್ಯಾದಿಗಳು ನಮ್ಮ ಪೂರ್ವಜರು ನಮಗೆ ಕೊಟ್ಟ ಆಸ್ತಿಗಳಾಗಿವೆ. ಇವುಗಳ ಸತ್ಪರಿಣಾಮವು ವೈಜ್ಞಾನಿಕವಾಗಿ ಧೃಢಪಟ್ಟಿದೆ. ಭಾರತೀಯ ಸಂಸ್ಕೃತಿಯ ಆಚಾರ-ವಿಚಾರಗಳನ್ನು ಪಾಲಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗದ ಅಭ್ಯಾಸಗಳನ್ನು ರೂಢಿಸಿಕೊಂಡು ನಮ್ಮ ಸಂಸ್ಕೃತಿಯನ್ನು ನಾವು ಸಂರಕ್ಷಿಸಬೇಕು. ಜೊತೆಗೆ ಸದಭಿರುಚಿಯ ಹವ್ಯಾಸಗಳನ್ನೂ ನಮ್ಮ ಜೀವನದಲ್ಲಿ ರೂಢಿಸಿಕೊಳ್ಳುವುದು ಅತ್ಯವಶ್ಯ. ದ್ವಾರಕಾ ಪ್ರತಿಷ್ಠಾನದಂತಹಾ ಸಂಸ್ಥೆಗಳು ವೇದ ಶಿಬಿರಗಳನ್ನು ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿವೆ. ಇಂತಹಾ ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯಾಗಲಿ ಎಂದು ಜಿಲ್ಲಾ ರಾಜ್ಯೋತ್ಸವ...
ಜಿಲ್ಲೆಬೆಳಗಾವಿಸುದ್ದಿ

ಬಾಣಂತಿ, ಮಗು ಸಾವು : ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್

ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ...
ಜಿಲ್ಲೆಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಮತ್ತೆ ಬಂದಿದೆ ವರುಷದ ಹರುಷ – ಕಹಳೆ ನ್ಯೂಸ್

ಪುತ್ತೂರು : ಏ 11 ರಿಂದ 20 ರ ವರೆಗೆ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರುಷದ ಹರುಷ ನಡೆಯಲಿದೆ. ಈ ಯೋಜನೆಯಡಿ ಗ್ರಾಹಕರು ಮುಂಗಡವಾಗಿ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಆಯ್ಕೆಮಾಡಿ ಅದರ ಕನಿಷ್ಠ 50% ಪಾವತಿಸಿ ಬುಕ್ಕಿಂಗ್ ದರ ಅಥವಾ ಕೊಂಡು ಹೋಗುವ ದಿನದ ದರದಲ್ಲಿ ಯಾವುದು ಕಡಿಮೆಯೋ ಅದರ ಆಧಾರದ ಮೇಲೆ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಪಡೆಯುತ್ತಾರೆ. ಈ ವರ್ಷ ಚಿನ್ನದ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಹೊಸ ಮಳಿಗೆ ಉದ್ಘಾಟನೆ -ಕಹಳೆ ನ್ಯೂಸ್

ಮೂಡುಬಿದಿರೆಯ ಬಸ್‌ಸ್ಟ್ಯಾಂಡ್ ಸಮೀ ಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ...
ಕೊಡಗುಜಿಲ್ಲೆಸುದ್ದಿ

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡಲ್ಲಿ ಸಿಎಂ ಸಿದ್ದರಾಮಯ್ಯ  ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಇತ್ತ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಟೆಂಪಲ್ ರನ್ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರದಲ್ಲಿ  ಸಿಎಂ ಹಾಗೂ ಸಿಎಂ ಪತ್ನಿ ವಾಸ್ತವ್ಯ ಹೂಡಿದ್ದಾರೆ. ನಿನ್ನೆ (ಏ.12) ಮಧ್ಯಾಹ್ನ 3 ಗಂಟೆಗೆ ಪಾರ್ವತಿ ಅವರು ಹೊರನಾಡು ಅನ್ನಪೂರ್ಣೇಶ್ವರಿ  ದರ್ಶನ ಪಡೆದಿದ್ದು, ಬಳಿಕ ಶೃಂಗೇರಿಗೆ  ತೆರಳಿ ಶಾರದಾಂಭೆಗೆ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಶಾರದಾಂಬೆ ದೇಗುಲದ ಮಠದಲ್ಲೇ ವಾಸ್ತವ್ಯ ಹೂಡಿದ್ದರು....
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ : ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) (Actor Harish) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು....
1 5 6 7 8 9 956
Page 7 of 956