ನ.28ಕ್ಕೆ ಉಡುಪಿಯ “ಗೀತಾ ಮಾಸೋತ್ಸವ” ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಆಗಮನ – ಕಹಳೆ ನ್ಯೂಸ್
ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನ. 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವುದು ನಮಗೆ ಗೊತ್ತೇ ಇದೆ. ಈಗ ಆ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ, ನ. 28ರಂದು ಶ್ರೀಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಮೋದಿಯವರು ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಡಿ, ಶ್ರೀಮಠದಲ್ಲಿ ನ. 30ರಂದು ನಡೆಯುವ ಸಂತ ಸಂಗಮ ಎಂಬ ಭಜನೋತ್ಸವದಲ್ಲಿ ಉತ್ತರ ಪ್ರದೇಶದ ಸಿಎಂ...







