Saturday, March 14, 2026

ಜಿಲ್ಲೆ

ದಕ್ಷಿಣ ಕನ್ನಡ

ಕರ್ನಾಟಕ ಬಂದ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ -ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆ ಎಸ್ ಆರ್ ಟಿ ಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿದ್ದು, ಬಂದರು ಪ್ರದೇಶದಲ್ಲಿ ವ್ಯಾಪಾರ ವಹಿವಾಟುಗಳು ಆರಂಭವಾಗಿದೆ. ಇನ್ನು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 6 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳು ಮತ್ತು 50 ಹೋಂ ಗಾರ್ಡ್...
ದಕ್ಷಿಣ ಕನ್ನಡ

ಪಣೋಲಿಬೈಲು ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ರಶ್ಮಿ ಎಸ್. ಆರ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬಂಟ್ವಾಳ : ಕಾರಣಿಕ ಕ್ಷೇತ್ರ ಪಣೋಲಿಬೈಲಿನ ಶ್ರೀ ಕಲ್ಲುರ್ಟಿ ದೈವಸ್ಥಾನದ ಆಡಳಿತ ಅಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿನ್ನಲೆ ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅರ್ಚಕ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡ

ದ.ಕ: 20 ಸಾವಿರದತ್ತ ಸೋಂಕಿನ ಸಂಖ್ಯೆ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ 456 ಜನರಿಗೆ ಕೋವಿಡ್-19 ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20 ಸಾವಿರ ಗಡಿಯತ್ತ ಸಾಗಿದೆ. ಶುಕ್ರವಾರ 340 ಮಂದಿ ಗುಣಮುಖರಾಗಿದ್ದು, ಮೃತಪಟ್ಟಿರುವ 11 ಜನರಿಗೆ ಕೋವಿಡ್-19 ಇರುವುದು ಖಚಿತವಾಗಿದೆ. ಜಿಲ್ಲೆಯ ದೃಢವಾಗಿರುವ ಪ್ರಕರಣಗಳ ಪೈಕಿ 131 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. 236 ಮಂದಿಗೆ ಶೀತ ಜ್ವರ ಲಕ್ಷಣದಿಂದ, 14 ಮಂದಿಗೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್-19 ಪತ್ತೆಯಾಗಿದ್ದು, 75 ಮಂದಿಯ ಸೋಂಕಿನ ಮೂಲವನ್ನು...
ಜಿಲ್ಲೆ

ಆಯಂಟಿ ಡ್ರಗ್ ಸೆಲ್‌ ಸಕ್ರಿಯಗೊಳಿಸಿ: ಪ್ರೊ.ಪಿ.ಎಸ್. ಯಡಪಡಿತ್ತಾಯ – ಕಹಳೆ ನ್ಯೂಸ್

ಮಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿರುವ ಆಯಂಟಿ ಡ್ರಗ್ ಸೆಲ್‌ಗಳು ಕಾರ್ಯರೂಪಕ್ಕೆ ಬಂದು ಸಂಚಲನ ಮೂಡಿಸಬೇಕು. ಯಾವುದೇ ಕಾರಣಕ್ಕೂ ಕಾಲೇಜು ಆವರಣದಲ್ಲಿ ಡ್ರಗ್ಸ್ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಸೂಚನೆ ನೀಡಿದರು. ಶುಕ್ರವಾರ ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ 'ಫಿಟ್ ಇಂಡಿಯಾ' ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದ್ದು, ಅವರು ಆರೋಗ್ಯಪೂರ್ಣವಾಗಿದ್ದಲ್ಲಿ ದೇಶದ ಸುಧಾರಣೆಯಲ್ಲಿ ಬದಲಾವಣೆ ಮಾಡುವ ಶಕ್ತಿ ಹೊಂದಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡ

ವಿಶ್ವ ದಾಖಲೆ ಬರೆದ ಆದಿ ಸ್ವರೂಪಾ – ಕಹಳೆ ನ್ಯೂಸ್

ಮಂಗಳೂರು: ಏಕಕಾಲದಲ್ಲಿ ಎರಡು ಕೈಗಳಿಂದ ಒಂದು ನಿಮಿಷಕ್ಕೆ 45 ಪದಗಳಂತೆ ಯುನಿಡೈರೆಕ್ಷನಲ್ ವಿಭಾಗದ ಶೈಲಿಯಲ್ಲಿ ಇಂಗ್ಲಿಷ್ ಪದಗಳನ್ನು ಬರೆಯುವ ವಿದ್ಯಾರ್ಥಿನಿ ಆದಿ ಸ್ವರೂಪಾಳ ಪ್ರತಿಭೆಗೆ ಉತ್ತರ ಪ್ರದೇಶದ ಬರೇಲಿಯಾ ಲಾಟಾ ಫೌಂಡೇಷನ್, ಎಕ್ಸ್‌ಕ್ಲೂಸಿವ್ ವರ್ಡ್ ರೆಕಾರ್ಡ್ ದಾಖಲೆಯನ್ನು ಘೋಷಿಸಿದೆ. ಇಲ್ಲಿನ ಕೊಡಿಯಾಲ್‌ಬೈಲ್ ಸ್ವರೂಪ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯಾಗಿರುವ ಆದಿ ಸ್ವರೂಪಾ, ಎರಡೂ ಕೈಯಲ್ಲಿ ಸರಾಗವಾಗಿ ಬರೆಯುತ್ತಾಳೆ. ಎರಡು ವರ್ಷಗಳಲ್ಲಿ ಈಕೆ ಹತ್ತು ವಿಭಿನ್ನ ರೀತಿಯಲ್ಲಿ ಬರೆಯುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾಳೆ....
ಕಾಸರಗೋಡುಸುದ್ದಿ

ಕೇಶವಾನಂದಭಾರತೀ ಶ್ರೀಪಾದರ ನಿಧನ ಹಿನ್ನಲೆ ; ಎಡನೀರು ಮಠದ ಉತ್ತರಾಧಿಕಾರಿಯಾಗಿ ಜಯರಾಮ ಮಂಜತ್ತಾಯರು ” ಶ್ರೀ ಶ್ರೀ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ” ಅಧಿಕೃತ ಘೋಷಣೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳು ಶನಿವಾರ ಮಧ್ಯರಾತ್ರಿ 12.30ಕ್ಕೆ ದೈವಾದೀನರಾಗಿದ ಹಿನ್ನಲೆಯಲ್ಲಿ ಶ್ರೀಎಡನೀರು ಮಠಕ್ಕೆ ನೂತನ ಉತ್ತರಾಧಿಕಾರಿಯನ್ನು ನಿಯುಕ್ತಿ ಮಾಡಲಾಗಿದೆ. ಈ ಹಿಂದೆ ಮಠದಲ್ಲಿ ಶ್ರೀಗಳ‌ ಜೊತೆಗಿದ್ದ, ಶ್ರೀ ಜಯರಾಮ ಮಂಜತ್ತಾಯರನ್ನು ಶ್ರೀಗಳ ಆಸೆಯಂತೆ ಇಂದು ಉತ್ತರಾಧಿಕಾರಿ ಎಂದು, ಮಠದ ಪ್ರಮುಖರು ಹಾಗೂ ವಿದ್ವಾಂಸರು, ತಂತ್ರಿಗಳ ಸಭೆಯಲ್ಲಿ ಘೋಷಣೆ ಮಾಡಲಾಗಿದೆ‌. 28/9/2020 ರಂದು ಪೀಠಾರೋಹಣ ನಡೆಯಲಿದೆ. ಸಭೆಯಲ್ಲಿ ಮಠದ ಭಕ್ತರಾದ ಟಿ. ಶ್ಯಾಮ್ ಭಟ್ ,...
ದಕ್ಷಿಣ ಕನ್ನಡಸುದ್ದಿ

Breaking News : ವಿಟ್ಲದಲ್ಲಿ ಕ್ರೈಸ್ತಯುವಕನಿಂದ ಹಿಂದೂ ಯುವತಿಯರ ಮತಾಂತರ ಯತ್ನ..! ; ಪೊಲೀಸ್ ದಾಳಿ, ಹಿಂದೂ ಸಂಘಟನೆಗಳ ಆಕ್ರೋಶ – ಕಹಳೆ ನ್ಯೂಸ್

ವಿಟ್ಲ : ಕ್ರೈಸ್ತ ಸಮುದಾಯಕ್ಕೆ ಸೇರಿದ ಯುವಕನೊಬ್ಬನ ಮನೆಯಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ಯುವತಿಯರಿಬ್ಬರು ಪೊಲೀಸ್ ದಾಳಿಯ ವೇಳೆ ಪತ್ತೆಯಾಗಿದ್ದಾರೆ ಎಂಬ ಆರೋಪ ವಿಟ್ಲ ಸಮೀಪದ ಕನ್ಯಾನ ಎಂಬಲ್ಲಿ ಕೇಳಿ ಬಂದಿದೆ. ದಾಳಿ ನಡೆದಿರುವುದನ್ನು ವಿಟ್ಲ ಪೊಲೀಸರು ಖಚಿತಪಡಿಸಿದ್ದು ಹೆಚ್ಚಿನ ವಿವರ ನೀಡಲು ನಿರಾಕರಿಸಿದ್ದಾರೆ. ಮೂವರನ್ನೂ ಠಾಣೆಗೆ ಕರೆಯಿಸಿ ಪ್ರಕರಣದ ವಿಚಾರಣೆ ನಡೆಯುತ್ತಿದೆ ಬಳಿಕ ವಿವರ ನೀಡಲಾಗುವುದು ಎಂದು ಮಾದ್ಯಮಗಳಿಗೆ ತಿಳಿಸಿದ್ದಾರೆ. ವಿಟ್ಲದ ಕನ್ಯಾನ ಕಾಲೇಜು ಸಮೀಪ ಕ್ರೈಸ್ತ ಸಮುದಾಯದ...
ಕ್ರೈಮ್ದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ ; ಗಾಂಜಾ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಶಾಹ, ಮೊಯಿದ್ದೀನ್‌ ಅನ್ಸಾರ್ ಬಂಧನ – ಕಹಳೆ ನ್ಯೂಸ್

ಮಂಗಳೂರು, ಆ. 30 : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರನ್ನು ಮಂಜೇಶ್ವರದ ವರ್ಕಾಡಿ ಗ್ರಾಮದ ಪಾವೂರಿನ ನಿವಾಸಿ ಕಲಂದರ್‌ ಮೊಹಮ್ಮದ್ ಶಾಹ (35) ಹಾಗೂ ಕಾಸರಗೋಡು ಕುಂಜತ್ತೂರು ಗ್ರಾಮದ ಉದ್ಯಾವರದ ನಿವಾಸಿ ಮೊಯಿದ್ದೀನ್‌ ಅನ್ಸಾರ್‌ (29) ಅವರನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌...
1 915 916 917 918 919 941
Page 917 of 941