Saturday, March 14, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಸೋಂಕು ; 10 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಆ. 5 : ದ.ಕ. ಜಿಲ್ಲೆಯಲ್ಲಿ 149 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ.   ಇನ್ನು 82 ಮಂದಿ ಬುಧವಾರದಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 3009 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇನ್ನು ಬುಧವಾರದಂದು ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 190ಕ್ಕೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Breaking News : ಗಾಳಿ ಮಳೆಯ ಆರ್ಭಟ ಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲು, ಮಣ್ಣು ಕುಸಿತ – ಘಾಟ್ ಬಂದ್ ; ಚಿಕ್ಕಮಗಳೂರು , ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಸಂಪೂರ್ಣ ಸ್ಥಗಿತ – ಕಹಳೆ ನ್ಯೂಸ್

ಉಜಿರೆ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜೆಲ್ಲೆಯ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ಯಲ್ಲಿ ಗಾಳಿ ಮಳೆಯ ಆರ್ಭಟ ಕ್ಕೆ ಬಂಡೆ ಕಲ್ಲು, ಮಣ್ಣು ಕುಸಿತವಾಗಿದೆ. ಧರ್ಮಸ್ಥಳ, ದಕ್ಷಿಣ ಕನ್ನಡ ಜಿಲ್ಲೆಗೆ ಹೋಗುವ ವಾಹನಗಳು ಸಂಪೂರ್ಣ ಸ್ಥಗಿತವಾಗಿದ್ದು, ಕೊಟ್ಟಿಗೆಹಾರದಲ್ಲಿ ಸಿಲುಕಿಹಾಕಿಕೊಂಡಿದೆ. ಚಾರ್ಮಾಡಿ ಘಾಟ್ ನಾ 4ನೇ ತಿರುವುನಲ್ಲಿ ಬಿದ್ದ ಬೃಹತ್ ಗಾತ್ರದ ಬಂಡೆ ಕಲ್ಲು ಸಂಪರ್ಕವನ್ನು ತುಂಡರಿಸಿದೆ....
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ – ಕಹಳೆ ನ್ಯೂಸ್

ಮಂಗಳೂರು, ಆ. 04  : ''ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.   ''ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದಕ್ಷಿಣ ಕನ್ನಡ ಜಿಲ್ಲೆ : ನಿಬಂಧನೆಗಳೊಂದಿಗೆ ಸಂಚಾರ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಕಾಸರಗೋಡು, ಆ. 03 : ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಗಡಿ ತೆರವಿಗೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಡಳಿತ ಹಾಗೂ ಕಾಸರಗೋಡು ಉಸ್ತುವಾರಿ ಸಚಿವರ ಸಭೆ ಇಂದು ನಡೆದಿದ್ದು ಈ ಹಿಂದೆ ಇದ್ದ ದೈನಂದಿನ ಪಾಸ್‌ನ್ನು ಕೆಲವೊಂದು ನಿಬಂಧನೆಗಳೊಂದಿಗೆ ಪುನರ್‌ ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.   ಗಡಿ ಜಿಲ್ಲೆಗಳ ನಡುವೆ ಸಂಚಾರ ಮಾಡುವವರು ಏಳು ದಿನಕ್ಕೊಮ್ಮೆ ಕೋವಿಡ್ ತಪಾಸಣೆಗೆ ಒಳಗಾಗಬೇಕಾಗಿದ್ದು ವಿವಾಹ, ಮರಣ ಮೊದಲಾದ ಕಾರ್ಯಕ್ರಮಗಳಿಗೆ ಅಂತಾರಾಜ್ಯ ಸಂಚಾರಕ್ಕೆ ನಿಬಂಧನೆಗಳೊಂದಿಗೆ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದ.ಕ. ಜಿಲ್ಲೆ ಗಡಿ ತೆರವಿಗೆ ದ.ಕ. ಜಿಲ್ಲಾಡಳಿತದ ಅಭ್ಯಂತರವಿಲ್ಲ ; ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ಆ. 03: ಅಂತರ ರಾಜ್ಯ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರತಿಕ್ರಿಯೆ ನೀಡಿದ್ದು, ಸರಕಾರ ಆದೇಶ ನೀಡಿದ್ದಲ್ಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.   ಆಗಸ್ಟ್ 5ರಿಂದ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕರ್ನಾಟಕ ಹಾಗೂ ಕೇರಳ ಸರಕಾರದ ಆದೇಶದಂತೆ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಕಾಸರಗೋಡಿನಿಂದ ಹೆಚ್ಚಿನ...
ಉಡುಪಿರಾಜ್ಯಸುದ್ದಿ

ಶ್ರೀಕೃಷ್ಣನ ಅನುಗ್ರಹದಿಂದ ಕೊರೊನಾ ಗೆದ್ದುಬಂದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ; ಶ್ರೀಗಳು ಫೀಟ್ ಆಂಡ್ ಫೈನ್ – ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ, ಆ. 02 : ಕೊರೊನಾ ಸೋಂಕು ದೃಢಪಟ್ಟಿದ್ದ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು 12 ದಿನಗಳ ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 1 ರ ಶನಿವಾರ ಇಲ್ಲಿನ ಕೆಎಂಸಿ ಮಣಿಪಾಲದಿಂದ ಬಿಡುಗಡೆ ಆಗಿದ್ದಾರೆ. ಕೊರೊನಾ ಸೋಂಕು ಲಕ್ಷಣ ಕಾರಣ ಜುಲೈ 21 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿಯೂ ಅವರು ತಮ್ಮ ನಿತ್ಯ ಪೂಜೆಗಳನ್ನು ಮಾಡುತ್ತಿದ್ದರು. ತಮ್ಮ ವಾರ್ಷಿಕ ಚಾರ್ತುಮಾಸ ವ್ರತವನ್ನು ಆಸ್ಪತ್ರೆಯಲ್ಲಿಯೂ ಮಾಡುತ್ತಿದ್ದರು. ಈಗ ಅವರು...
ಉಡುಪಿರಾಷ್ಟ್ರೀಯ

‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್

ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ.       "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...
ದಕ್ಷಿಣ ಕನ್ನಡ

ನಾಳೆ ದ.ಕ.ಜಿಲ್ಲೆಯಲ್ಲಿ ‘ಸಂಡೇ ಲಾಕ್‌ಡೌನ್ ಇಲ್ಲ-ಕಹಳೆ ನ್ಯೂಸ್

ಮಂಗಳೂರು, ಆ.1: ರಾಜ್ಯದಲ್ಲಿ ಆ.1ರಿಂದ 31ರವರೆಗೆ ಮೂರನೇ ಹಂತದ ಲಾಕ್‌ಡೌನ್ (3.0)ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಅದರಂತೆ ಆ.2ರ ರವಿವಾರ ದ.ಕ.ಜಿಲ್ಲೆಯಲ್ಲಿ 'ಸಂಡೇ ಲಾಕ್‌ಡೌನ್' ಇಲ್ಲ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ಜು.31ಕ್ಕೆ ರಾತ್ರಿ ಕರ್ಫ್ಯೂ ಕೂಡ ಮುಕ್ತಾಯಗೊಂಡಿದೆ. ಆದರೆ, ಕಂಟೈನ್ಮೆಂಟ್ ವಲಯದಲ್ಲಿ ಆ.31ರವರೆಗೆ ಲಾಕ್‌ಡೌನ್ ಮುಂದುವರಿಯಲಿದೆ. ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಜಿಮ್ ಮತ್ತು ಯೋಗ ಕೇಂದ್ರಗಳು ಆ.5ರಿಂದ ತೆರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
1 918 919 920 921 922 940
Page 920 of 940