Friday, March 13, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 149 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು 21 : ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮತ್ತೆ ಐವರು ಕೊರೋನಾ‌ದಿಂದ ಸಾವು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...
ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿಂದು 84 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಉಡುಪಿ, ಜು 21 : ಜಿಲ್ಲೆಯಲ್ಲಿ ಮತ್ತೆ 84 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 2405 ಕ್ಕೆ ಏರಿಕೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಮಂಗಳವಾರದಂದು 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ 1752 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಸದ್ಯ ಜಿಲ್ಲೆಯಲ್ಲಿ 653 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಇನ್ನೂ 481 ಮಂದಿಯ ವರದಿ ಲಭ್ಯವಾಗಲು ಬಾಕಿ ಇದೆ....
ರಾಜ್ಯಸುದ್ದಿಹಾಸನ

ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ; ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ – ಕಹಳೆ ನ್ಯೂಸ್

ಹಾಸನ: ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಕೊರೊನಾ ಹೆಚ್ಚಾಗಲಿದ್ದು ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ಮಾತನಾಡಿದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ, ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು. ಜನರು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು. ಸ್ವಚ್ಛತೆ, ಸಾಮಾಜಿಕ ಅಂತರದ ಕಡೆ ಗಮನ ಕೊಡಬೇಕು. ಇನ್ನೂ ಕೆಲ ತಿಂಗಳು ಕೊರೊನಾ...
ಬಳ್ಳಾರಿರಾಜ್ಯಸುದ್ದಿ

ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಜೈ ಭಜರಂಗಿ ” – ಪುತ್ತೂರಿನ ಆಸ್ಪತ್ರೆಯಿಂದ ಪರಾರಿಯಾದ ಕೊರೊನಾ ಶಂಕಿತ ವ್ಯಕ್ತಿಯನ್ನು ಹಿಡಿದು ಆಸ್ಪತ್ರೆಗೆ ಮರು ದಾಖಲಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋರೋನಾ ಶಂಕಿತ ವ್ಯಕ್ತಿಯನ್ನು ಹಿಡಿದು ಬಜರಂಗದಳ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಿಸಿದ್ದಾರೆ. ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋರೋನಾ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪುತ್ತೂರು ನಗರದ ತಾಲೂಕು ಆಫೀಸ್ ರಸ್ತೆ ಬದಿ ತಿರುಗಾಡಿಕೊಂಡು ಬಿದ್ದಿದ್ದ ಇದರ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತರಾದ ಪುತ್ತೂರು ಬಜರಂಗದಳ ಕಾರ್ಯಕರ್ತರು ಪಿಪಿಟಿ ಕಿಟ್ ಧರಿಸಿ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ವ್ಯಕ್ತಿಯನ್ನು...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
ಉಡುಪಿರಾಜ್ಯಸುದ್ದಿ

ಉಡುಪಿ ಅಷ್ಟಮಠಕ್ಕೂ ಕಾಲಿಟ್ಟ ಕೊರೊನಾ – ಪುತ್ತಿಗೆ ಶ್ರೀಗಳಿಗೆ ಕೊರೊನಾ ಪಾಸಿಟಿವ್..! ; ಶ್ರೀಗಳ ಆರೋಗ್ಯ ವೃದ್ಧಿಗೆ ಭಕ್ತರ ಹಾರೈಕೆ – ಕಹಳೆ ನ್ಯೂಸ್

ಉಡುಪಿ : ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳಲ್ಲಿ ಕೊರೊನ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳು ಕೆಲದಿನಗಳಿಂದ ಜ್ವರ, ಗಂಟಲುನೋವಿನಿಂದ ಬಳಲುತ್ತಿದ್ದು ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವ್ರತವನ್ನು ಅರಂಭಿಸಬೇಕಾಗಿತ್ತು. ಸದ್ಯ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಅವರು...
1 922 923 924 925 926 940
Page 924 of 940