Friday, March 13, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

Breaking News : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನ ಆರ್ಭಟ ಮುಂದುವರಿದಿದೆ. ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ. ಮನಪಾ ಆಯುಕ್ತರಿಗೆ ಎರಡು ದಿನಗಳ ಹಿಂದೆ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ. ಸದ್ಯ ಮನಪಾ ಆಯುಕ್ತರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,...
ಉಡುಪಿಸುದ್ದಿ

ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ ; 70 ವರ್ಷದ ವೃದ್ಧ ಸಾವು – ಕಹಳೆ ನ್ಯೂಸ್

ಉಡುಪಿ: ಕೋವಿಡ್-19 ಸೋಂಕಿನ ಕಾರಣದಿಂದ ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಇವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು. ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬ್ಯೂಟಿ ಪಾರ್ಲರ್ ಬಂದ್ – ಅಸೋಸಿಯೇಷನ್ ನ ಅಧ್ಯಕ್ಷೆ ಬಬಿತಾ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯೂಟಿಪಾರ್ಲರ್ ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ. ದ.ಕ ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಸಭೆ ನಡೆಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲಾದ್ಯಂತ ದಿನೇ ದಿನೇ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿದ್ದು, ಗ್ರಾಹಕರು ಹಾಗೂ ಸೌಂದರ್ಯ ತಜ್ಞೆಯರ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಬ್ಯೂಟಿ ಪಾರ್ಲರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿ ಬ್ಯೂಟಿ ಪಾರ್ಲರ್...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ' Jio Mart ' ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! ನಲ್ಲಿ ನಡೆಯುತ್ತಿದೆ. ಕೇವಲ 9 ರೂಪಾಯಿಗೆ ಈರುಳ್ಳಿ, ಇನ್ನೂ ಅನೇಕ ವಸ್ತುಗಳು ಅತೀ ಕಡಿಮೆ ಬೆಲೆಯಲ್ಲಿ...! ⚡July 12, ಭಾನುವಾರ ಮಾತ್ರ ಸ್ಪೆಷಲ್ ಆಫರ್ ಅವಕಾಶ https://youtu.be/JxHNZuDmrk8   ನಿಮ್ಮ?ಮೊಬೈಲ್‌ ನಲ್ಲಿ ಬುಕ್...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಸೋಮವಾರ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಲಾಕ್ ಡೌನ್ ಶಾಕ್..? ; ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ. ಬಿ.ಎಸ್. ವೈ. ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್...
ದಕ್ಷಿಣ ಕನ್ನಡಸುದ್ದಿ

ತಿಬಾರ್ ಕೊಡಮಂದಾಯನಿಗೆ ಕಟೀಲು ಕ್ಷೇತ್ರದಲ್ಲಿ ಅವಮಾನ ; ಶಿಬರೂರು ಗ್ರಾಮಸ್ಥರು ಆಕ್ರೋಶ – ಕಟೀಲು ದೇಗುಲದಲ್ಲಿ ನಡೆದ ಅವಮಾನದ ಹಿಂದೆ ಯಾವುದೋ ಕುತಂತ್ರ ಇದೆ ಎಂದ ಆಡಳಿತ ಮೊಕ್ತೇಸರ ವಾಸುದೇವ ಶಿಬರಾಯ – ಕಹಳೆ ನ್ಯೂಸ್

ಸುರತ್ಕಲ್ : ತಿಬಾರ್ ಕೊಡಮಂದಾಯನಿಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಕೊಡಮಂದಾಯನ ಅನಾದಿ ಕಟ್ಟು ಕಟ್ಟಲೆಗೆ ಧಕ್ಕೆ ಉಂಟಾಗಿದೆ ಎಂಬ ಅರೋಪ ಶಿಬರೂರು ಗ್ರಾಮಸ್ಥರಿಂದ ಕೇಳಿಬಂದಿದೆ. ಶಿಬರೂರು ದೈವಸ್ಥಾನದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ತಿಬಾರ್ ಗುತ್ತಿನಾರ್ ಮತ್ತು ಗ್ರಾಮಸ್ಥರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕಟೀಲು ದೇವಾಲಯಕ್ಕೆ ಕೊಡಮಂದಾಯ ದೈವದ ಭೇಟಿಯ ಸಂದರ್ಭದಲ್ಲಿ ದೈವಕ್ಕೆ ಛತ್ರ ಹಿಡಿದು ದೇಗುಲ ಪ್ರವೇಶ ಮಾಡಲು ಅಡ್ಡಿಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಗುತ್ತಿನಾರ್...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರ್ಡರ್..! ; ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ, ಬಿ.ಜೆ.ಪಿ ಕಾರ್ಯಕರ್ತ ಯಾಕೂಬ್ ನನ್ನು ಬರ್ಬರವಾಗಿ ಹತ್ಯೆಗೈದ ಕಾಂಗ್ರೆಸ್ ಮುಖಂಡನ ಮಗ..! – ಕಹಳೆ ನ್ಯೂಸ್

ಮಂಗಳೂರು : ನಗರದ ಅಡ್ಯಾರ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಬೆಚ್ಚಿಬೀಳಿಸುವ ಘಟನೆಯೊಂದು ವರದಿಯಾಗಿದೆ. ಬಿ.ಜೆ.ಪಿ ಕಾರ್ಯಕರ್ತ, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಯಾಕೂಬ್ ನನ್ನು ವಯಕ್ತಿಕ ವೈಷಮ್ಯದ ಕಾರಣದಿಂದ ನಿನ್ನೆ ತಡರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಮಗ ಶಾಕೀರ್ ಹಾಗೂ ಅತನ ನಾಲ್ಕು - ಐದು ಸಹಚರರು ಈ ಕುಕೃತ್ಯ ನಡೆಸಿದ್ದಾರೆ ಎಂದು ಬಲ್ಲಮೂಲಗಳು ಮಾಹಿತಿ ನೀಡಿದ್ದು, ಮಹಿಳೆಯೊಬ್ಬರ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಲ್ಲಿಂದು ಕೋವಿಡ್ ಗೆ ಮತ್ತೊಂದು ಬಲಿ ; ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಸಾವು – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31ಕ್ಕೇರಿದ ಸಾವಿನ ಸಂಖ್ಯೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದು ಕೆಲದಿನಗಳ ಹಿಂದೆ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ....
1 928 929 930 931 932 939
Page 930 of 939