Tuesday, March 10, 2026

ಜಿಲ್ಲೆ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ಉಪ್ಪಿನಂಗಡಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ ; ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ರಿಂದ ಪದಪ್ರಧಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 10ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಜರಗಲಿದೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರವೀಂದ್ರ ದರ್ಭೆ ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿ, ರೋಟರಿ ವಲಯ-4ರ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ  ಪ್ರತಾಪಸಿಂಹ ನಾಯಕ್ ಪದಪ್ರಧಾನ ಮಾಡಲಿದ್ದಾರೆ. ರೋಟರಿ ವಲಯ ಸೇನಾನಿ ಜೆರೋಮಿಯಸ್ ಪಾಯಸ್, ಮಾತೃ ಘಟಕವಾದ ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಮಂದಿ ಬಲಿ ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ...
ದಕ್ಷಿಣ ಕನ್ನಡ

ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಜು 08 : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲೇ ಜನಪ್ರತಿನಿಧಿಗಳಿಗೂ ಸೋಂಕು ತಗುಲುತ್ತಿರುವುದು ದೃಢವಾಗುತ್ತಿದೆ. ಈಗಾಗಲೇ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಾಜಿ ಎಂಎಲ್ ಸಿ ಪುಟ್ಟಣ್ಣ, ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್, ಎಂ.ಕೆ ಪ್ರಾಣೇಶ್, ಜನಾರ್ದನ ಪೂಜಾರಿ , ಸಂಸದೆ ಸುಮಲತಾ ಹೀಗೆ ಹಲವು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ಕಾರ್ಪೋರೇಟರ್ ಗೂ ಕೊರೊನಾ ಸೋಂಕು ತಗುಲಿದ್ದು , ಈ...
ದಕ್ಷಿಣ ಕನ್ನಡಮೂಡಬಿದಿರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಸಾವು – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು. 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ...
ಕಾಸರಗೋಡುದಕ್ಷಿಣ ಕನ್ನಡಸುದ್ದಿ

ಅಡಿಕೆ ನಳ್ಳಿ ಬೀಳುವ ಸಮಸ್ಯೆ : ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಅಡಿಕೆ ತೋಟಗಳಿಗೆ ಭೇಟಿ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಾಸರಗೋಡು ಜಿಲ್ಲೆಯ ಅಡಿಕೆ ತೋಟಗಳಲ್ಲಿ ಎಳೆ ಅಡಿಕೆ ಬೀಳುವುದು ಹಾಗೂ ಸಿಂಗಾರ ಒಣಗುವ ಸಮಸ್ಯೆ ಈ ಬಾರಿ ವಿಪರೀತವಾಗಿ ಕಂಡುಬಂದಿತ್ತು. ಕಳೆದ 2 ವರ್ಷಗಳಿಂದ ಈ ಸಮಸ್ಯೆ ಇದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ವಿಟ್ಲದ ಸಿಪಿಸಿಆರ್ ಐ ವಿಜ್ಞಾನಿಗಳ ಗಮನಕ್ಕೆ ತಂದು, ಈ ಬಗ್ಗೆ ಸೂಕ್ತವಾದ ಅದ್ಯಯನ ಹಾಗೂ ಪರಿಹಾರ ಮಾರ್ಗ ಅಗತ್ಯವಾಗಿದೆ...
ಕಾಸರಗೋಡುರಾಜಕೀಯಸುದ್ದಿ

ರಾತ್ರೋರಾತ್ರಿ ಕೇರಳ ರಾಜಕೀಯದಲ್ಲಿ ಭಾರಿ ತಲ್ಲಣ ; ಪಿನರಾಯಿ ಬುಡ ಅಲುಗಾಡಿಸಿದ ಈ ಚೆಲುವೆ..! ಉರುಳುತ್ತಾ ಕೇರಳ ಸರ್ಕಾರ..? – ಕಹಳೆ ನ್ಯೂಸ್

ತಿರುವನಂತಪುರದಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ 30 ಕೆ.ಜಿ. ಚಿನ್ನ ನಿನ್ನೆ ಪತ್ತೆಯಾಗಿತ್ತು. ಇದರ ಹಿಂದೆ ಒಬ್ಬ ಪ್ರಭಾವಿ ಮಹಿಳೆಯ ಕೈವಾಡ ಇರುವುದು ಇದೀಗ ಬೆಳಕಿಗೆ ಬಂದಿದೆ. ರಾಜತಾಂತ್ರಿಕ ರಕ್ಷಣೆ ಹೊಂದಿದ್ದ ‘ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಯಾವುದೇ ಲಾಕ್ ಡೌನ್ ಇಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ – ಕಹಳೆ‌ ನ್ಯೂಸ್

ಮಂಗಳೂರು, ಜು 07 : ದಕ್ಷಿಣ ಕನ್ನಡದಲ್ಲಿ ಮತ್ತೆ ಮಧ್ಯಾಹ್ನದ ಬಳಿಕ ಲಾಕ್‌ಡೌನ್ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಫೇಸ್ ಬುಕ್ ಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟಪಡಿಸಿದ್ದಾರೆ.   ಸಾಮಾಜಿಕ ಜಾಲತಾಣದಲ್ಲಿ ಜುಲೈ 6ರ ಸೋಮವಾರ ಬೆಳಗ್ಗಿನಿಂದ ಇಂತಹ ಸಂದೇಶವೊಂದು ಹರಿದಾಡುತ್ತಿದೆ. ಇದರಿಂದಾಗಿ ಜಿಲ್ಲೆಯ ಜನತೆ ಗೊಂದಲಕ್ಕಿಡಾಗಿದ್ದರು. ಕಚೇರಿಗಳು, ಮಾಧ್ಯಮಗಳನ್ನು ಸಂಪರ್ಕಿಸಿ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಈ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಜು 7ರಿಂದ 11ರವರೆಗೆ ಭಾರಿ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಜು 07 : ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ. ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು,...
1 929 930 931 932 933 938
Page 931 of 938