Recent Posts

Saturday, April 25, 2026

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

ದ.ಕ ಜಿಲ್ಲೆ ಇಂದು ರಾತ್ರಿ 8 ರಿಂದ ಲಾಕ್ ಡೌನ್ – ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು- ಕಹಳೆ ನ್ಯೂಸ್

 ದಕ್ಷಿಣ ಕನ್ನಡ ಜಿಲ್ಲೆ ಇಂದು ರಾತ್ರಿ 8 ರಿಂದ ಲಾಕ್ ಡೌನ್ ಆಗಲಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದಾರೆ.ಮಂಗಳೂರಿನ ಕದ್ರಿ ಮಾರುಕಟ್ಟೆಯಲ್ಲಿ ಜನರು ಸಾಮಾಜಿಕ ಅಂತರವನ್ನು ಮರೆತು ದಿನಸಿ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.ಲಾಕ್‌ಡೌನ್‌‌ ವೇಳೆ ದಿನಸಿ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ನೀಡಿದ್ದರೂ ಕೂಡಾ ಜನರು ಇಂದೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಮುಗಿಬಿದ್ದಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು...
ದಕ್ಷಿಣ ಕನ್ನಡಸುದ್ದಿ

ದ.ಕ.: ‘ಲಾಕ್‌ಡೌನ್‌ ಮಾರ್ಗಸೂಚಿ ಬಿಡುಗಡೆ’ -ಜು.15ರ ರಾತ್ರಿಯಿಂದ ಜು. 23ರ ಬೆಳಿಗ್ಗೆವರೆಗೆ ಏನಿದೆ ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ನೀಡಲಾಗಿರುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು , ಸಹಾಯಕ ಆಯುಕ್ತರು, ತಹಶೀಲ್ದಾರ್...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕ ; ಪೈ ಟ್ರೇಡರ್ಸ್ ನ ಮಾಲಕ ಹರೀಶ್ ಪೈ ನಿಧನ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರ ಪ್ರಮುಖ್ ಆಗಿ ಚಿರಪರಿಚಿತಗೊಂಡಿರುವ ಇಲ್ಲಿನ ಸಿಪಿಸಿ ಪ್ಲಾಝಾದಲ್ಲಿರುವ ಪೈ ಟ್ರೇಡರ್‍ಸ್‌ನ ಮಾಲಕ ಹರೀಶ್ ಪೈ(52ವ)ರವರು ಜು.14ರ ನಸುಕಿನ ಜಾವ ಮೃತಪಟ್ಟಿದ್ದಾರೆ. ಜು.೧೨ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಕರಸೇವಕರೊಂದಿಗೆ ಆದಿತ್ಯವಾರದ ಸ್ವಚ್ಛತಾ ಕಾರ್ಯವನ್ನು ಮುಗಿಸಿ ಮಧ್ಯಾಹ್ನ ದೇವಳದ ಹೊರಾಂಗಣದ ಗೋಪುರದಲ್ಲಿ ಕುಳಿತಿದ್ದ ವೇಳೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ತಕ್ಷಣ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ; ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಜಿಲ್ಲೆಯನ್ನು ಲಾಕ್ ಡೌನ್ ಮಾಡುಲು ನಿರ್ಧಾರ ಕೈಗೊಳಲಾಗಿದೆ. ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ಆರಂಭವಾಗಲಿದ್ದು, ಗುರುವಾರ ದಿಂದ ಒಂದು ವಾರಗಳ ಕಾಲ ಲಾಲ್ ಡೌನ್ ಇವರಲಿದೆ. ಗುರುವಾರ 16 ರಿಂದ 22 ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಇರಲಿದೆ. ಬುಧವಾರ ತನಕ ಜನರು ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಜ್ಯದ ನ್ಯೂಸ್ ವಾಹಿನಿಯ ಪತ್ರಕರ್ತರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ರಾಜ್ಯದ ಪ್ರಮುಖ ನ್ಯೂಸ್ ವಾಹಿನಿಗಳ ಮಂಗಳೂರಿನ ಕ್ಯಾಮರಾ ಮ್ಯಾನ್ ಗಳಿಗೆ ಕೊರೊನಾ ಸೋಂಕು‌ ದೃಢ ಪಟ್ಟಿದೆ. ಖಾಸಗೀ ವಾಹಿನಿಗೆ ಸೇರಿದ ಇಬ್ಬರಿಗೆ ಮಂದಿ ಪತ್ರಕರ್ತರಿಗೆ ಸೋಂಕು ತಗುಲಿದ ಬಗ್ಗೆ ಮಾಹಿತಿ ಲಭಿಸಿದೆ....
ದಕ್ಷಿಣ ಕನ್ನಡಪುತ್ತೂರು

Breaking News : ಶಾಂತಿಗೋಡಿನ 15 ವರ್ಷದ ಬಾಲಕಿ, ಬಲ್ಯದ ನರ್ಸ್‌ ಸಹಿತ ಪುತ್ತೂರು ತಾಲೂಕಿನಲ್ಲಿ 4 ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಇಂದು ಪುತ್ತೂರು ತಾಲೂಕಿನಲ್ಲಿ 4 ಕೊರೋನಾ ದೃಢಪಟ್ಟ ಕುರಿತು ವರದಿಯಾಗಿದೆ. ವಿದೇಶದಿಂದ ಬಂದು ಮಂಗಳೂರು ಖಾಸಗಿ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್ ಆಗಿರುವ ಇಚಿಲಂಪಾಡಿಯ ಸುಮಾರು 27 ವರ್ಷದ ಯುವಕ, ಮರೀಲ್ ಕ್ಯಾಂಪ್ಕೋ ವಸತಿ ಗೃಹದ ನಿವಾಸಿ 35 ವರ್ಷದ ಗೃಹಿಣಿ, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿರುವ ಬಲ್ಯ ಹೊಸ್ಮಠದ 22 ವರ್ಷದ ಯುವತಿ ಮತ್ತು ಶಾಂತಿಗೋಡು ನಿವಾಸಿ 15...
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿಯಲ್ಲಿ ಕೊರೊನಾಗೆ ಇಂದು ವೃದ್ಧ ಬಲಿ ; ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಕೊರೊನ ಸೋಂಕಿತ ವೃದ್ಧ ಮನೆಯಲ್ಲೇ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಸದ್ಯಕ್ಕಂತೂ ಹೆಮ್ಮಾರಿ ಕೊರೊನ ತನ್ನ ರುದ್ರನರ್ತನವನ್ನು ನಿಲ್ಲಿಸುವಂತೆ ಕಾಣುತ್ತಿಲ್ಲ. ಕೊರೊನ ಸೋಂಕಿನ ಕಾರಣದಿಂದ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60 ವರ್ಷ ಪ್ರಾಯದ ವೃಧ್ದ ಇಂದು ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ,ಅದರ ವರದಿ ಇದೀಗ ಕೈ ಸೇರಿದ್ದು ಸೋಂಕು ದೃಢ ಪಟ್ಟಿದೆ. ಮೃತ ದೇಹ ಮನೆಯಲಿದ್ದು...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಾಡ್ನೂರು ಗ್ರಾಮದ 50 ವರ್ಷದ ಸೋಂಕಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು : ನ್ಯುಮೋನಿಯಾದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಡ್ನೂರು ಗ್ರಾಮದ ಮೂಲಡ್ಕ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಜು.12ರಂದು ಅವರು ಮೃತಪಟ್ಟಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು...
1 944 945 946 947 948 956
Page 946 of 956