ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಲಾಕ್ಡೌನ್ ಇಲ್ಲ ; ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ – ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಪಷ್ಟನೆ – ಕಹಳೆ ನ್ಯೂಸ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸುಗಳು ಮಿತಿಮೀರುತ್ತಲೇ ಇವೆ. ಕಳೆದ ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಎರಡಂಕಿಯನ್ನು ದಾಟದ ಮಹಾಮಾರಿ, 7 ದಿನ ಎನ್ನುವಷ್ಟರಲ್ಲೇ 200ರ ಗಡಿಯನ್ನು ದಾಟಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಬೇಕು ಅನ್ನೋ ಕೂಗು ಕೇಳಿಬಂದಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಜಿಲ್ಲೆಯ ಶಾಸಕರು ಪರಿಷತ್ ಸದಸ್ಯರು ಲಾಕ್ಡೌನ್ ಮಾಡಿದ್ರೆ ಉತ್ತಮ ಎಂದು ಉಸ್ತುವಾರಿ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಜಿಲ್ಲಾಧಿಕಾರಿ...







