Thursday, April 30, 2026

ಜಿಲ್ಲೆ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ- ಕಹಳೆ ನ್ಯೂಸ್ 

ಬಂಟ್ವಾಳ: ನಿನ್ನೆ ಹಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35) ಅವರ ಮೃತದೇಹ ಇಂದು ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಡೇಶಿವಾಲಯ ಸರಕಾರಿ ಪ್ರೌಢಶಾಲಾ ನೇತೃತ್ವದಲ್ಲಿ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟ – 2025 :  ಕ್ರೀಡೆಗಳು ಕಲಿಕೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಗೆ ಸಹಕಾರಿಯಾಗಿದೆ.. ಮಂಜುನಾಥನ್ ಎಂ ಜಿ- ಕಹಳೆ ನ್ಯೂಸ್ 

ಕಲ್ಲಡ್ಕ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ತರಗತಿ ಕೋಣೆಯ ಒಳಗೆ ಮತ್ತು ಹೊರಗೆ ಪಡೆದ ಶಿಕ್ಷಣ ದೊರೆತಾಗ ಮಾತ್ರ ವಿದ್ಯಾರ್ಥಿಗಳ ಜೀವನ ಮಟ್ಟದಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಕ್ರೀಡೆಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸುದರ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಉಂಟುಮಾಡುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು. ಅವರು ಅಕ್ಟೋಬರ್ 30 ಗೂರುವಾರದಂದು ಕರ್ನಾಟಕ ಸರಕಾರ ಶಾಲಾ ಶಿಕ್ಷಣ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಮದುವೆಗೆ ಹೋಗುತ್ತಿದ್ದಾಗ ಭೀಕರ ಅಪಘಾತ; ಪ್ರಯಾಣಿಕರಿಗೆ ಗಂಭೀರ ಗಾಯ

ಸುಬ್ರಹ್ಮಣ್ಯ: ಬಿಸಿಲೆಯಿಂದ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಬಿಸ್ಲೆ ಸುಬ್ರಹ್ಮಣ್ಯ ರಸ್ತೆಯ ಮಧ್ಯೆ ಮಗುಚಿ ಬಿದ್ದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ವ್ಯಾನ್ ಮಗುಚಿ ಬಿದ್ದ ರಭಸಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವ್ಯಾನ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ....
ಚಿಕ್ಕಮಂಗಳೂರುಸುದ್ದಿ

20 ಅಡಿ ಆಳದಲ್ಲಿದ್ದ ಚಿನ್ನದ ಚೀಲವನ್ನು ನಿಮಿಷದಲ್ಲಿ ಹುಡುಕಿ ತಂದ ಈಶ್ವರ್ ಮಲ್ಪೆ- ಕಹಳೆ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯ ಮಾಗಡಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿತು. ಅದೃಷ್ಟವಶಾತ್, ಕಾರಿನಲ್ಲಿದ್ದವರು ಈಜಿ ದಡ ಸೇರಿದರು. ಆದರೆ ಕಾರಿನಲ್ಲಿದ್ದ ಸುಮಾರು ₹50 ಲಕ್ಷ ಮೌಲ್ಯದ ಚಿನ್ನಾಭರಣಗಳು ನೀರಿನಲ್ಲಿ ಮುಳುಗಿದವು. ಇದೀಗ ಈಶ್ವರ್ ಮಲ್ಪೆ ಅವರು ಆ ಚಿನ್ನವನ್ನು ಹುಡುಕಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಾಗಡಿ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಬಿದ್ದಿತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿನ್ನದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನ.01ರಂದು ಬೆಳ್ತಂಗಡಿಯಲ್ಲಿ ಮೆತ್ತೊಮ್ಮೆ ಪ್ರದರ್ಶನಗೊಳ್ಳಲಿರುವ ಜೈ ಭಜರಂಗ ಬಲಿ ನಾಟಕ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ದೋಸೆ ಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರಕಾರವು ತಡೆಗೊಳಿಸಿದ ಜೈ ಭಜರಂಗ ಬಲಿ ನಾಟಕ ಮೆತ್ತೊಮ್ಮೆ ಪ್ರದರ್ಶನಗೊಳ್ಳಲಿದೆ. ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುತ್ತಿರುವ ಜೈ ಭಜರಂಗ ಬಲಿ ನಾಟಕ ನ.01ರಂದು ಬೆಳ್ತಂಗಡಿ ಜೈನ್ ಪೇಟೆಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಸಂಜೆ 6 ಗಂಟೆಗೆ ಮೆತ್ತೊಮ್ಮೆ ಪ್ರದರ್ಶನಗೊಳ್ಳಲಿದೆ. ನಿಪ್ಪು...
ಉಡುಪಿಸುದ್ದಿ

ನ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ- ಕಹಳೆ ನ್ಯೂಸ್

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ''ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ'' ಸಮಾರಂಭದಲ್ಲಿ...
ಅಂಕಣದಕ್ಷಿಣ ಕನ್ನಡಸುದ್ದಿ

ಬೆಳ್ತಂಗಡಿ ಠಾಣೆಯಲ್ಲಿ ; ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್-ಕಹಳೆ ನ್ಯೂಸ್

ಮಂಗಳೂರು: ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ...
1 96 97 98 99 100 959
Page 98 of 959