ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ -ಕಹಳೆ ನ್ಯೂಸ್
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ ಪತ್ರಕರ್ತರಿಗೆ ಮಾದರಿಯಾಗಿದೆ. ಪತ್ರಿಕಾಗೋಷ್ಠಿಗಳಲ್ಲಿ ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಹಳ ಕಷ್ಟವಾಗುತ್ತಿತ್ತು ಹಾಗೂ ಕೆಲವೊಮ್ಮೆ...







