Recent Posts

Sunday, June 7, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಕಿದಿಯೂರು ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಚಾಲನೆ -ಕಹಳೆ ನ್ಯೂಸ್

ಉಡುಪಿಃ ತುಳುಕೂಟ ಉಡುಪಿ (ರಿ.) ಮತ್ತು ವಿಶ್ವಪ್ರಭ ಪ್ರತಿಷ್ಠಾನ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರು ಇದರ ವತಿಯಿಂದ ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಭಾನುವಾರ ಸಂಜೆ ಉಡುಪಿ ಕಿದಿಯೂರು ಹೋಟೇಲಿನ ಅನಂತಶಯನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಸಾಹಿತ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ತುಳುಕೂಟದ ಕಾರ್ಯದರ್ಶಿ, ಸಾಹಿತಿ ಗಂಗಾಧರ್ ಕಿದಿಯೂರು ಅವರು ೪೦ ವರ್ಷಗಳಲ್ಲಿ...
ಉಡುಪಿಸುದ್ದಿ

ಭಟ್ಕಳ ನದಿ ದುರಂತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ -ಕಹಳೆ ನ್ಯೂಸ್

ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ. ನದಿಯ ನೀರಿನಲ್ಲಿ...
ಉಡುಪಿಜಿಲ್ಲೆಸುದ್ದಿ

ಉಡುಪಿ : ಚಿರತೆ ಕೊಂದ ಆರೋಪಿಗಳು ಅರೆಸ್ಟ್ – ಕಹಳೆ ನ್ಯೂಸ್

ಉಡುಪಿ: ಕುಂದಾಪುರ (Kundapura) ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ ಶೆಟ್ಟಿ, ಕಾವ್ರಾಡಿ ಗ್ರಾಮದ ಕಂಡೂರಿನ ನದೀಮ್ ಕರಾಣಿ, ಯಡಮೊಗೆ ಗ್ರಾಮದ ಹನೆಬಚ್ಚಲು ನಿವಾಸಿಗಳಾದ ನಾಗರಾಜ ಭೋವಿ ಹಾಗೂ ವೆಂಕಟರಮಣ ಭೋವಿ ಬಂಧಿತ ಆರೋಪಿಗಳು. ಬಂಧಿತರಿಂದ ಚಿರತೆಯ 4 ಕಾಲಿನ ಉಗುರು ಹಾಗೂ ಮೂಳೆಯ ಬಿಡಿ ಭಾಗಗಳು, ಬಂದೂಕು,...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾಂಗ್ರೆಸ್ ಭವನ ನಿರ್ಮಾಣ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ  -ಕಹಳೆ ನ್ಯೂಸ್

ಕುಂದಾಪುರ  : ಕಾಂಗ್ರೆಸ್ ಭವನ ನಿರ್ಮಾಣ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಕುಂದಾಪುರ ಕೇಂದ್ರ ಭಾಗದಲ್ಲಿರುವ ಮೌಲ್ಯಯುತ ಜಾಗವನ್ನು ಅತಿ ಕಡಿಮೆ ದರಕ್ಕೆ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಬದ್ಧ ಹೋರಾಟ ನಡೆಸುವೆ ಎಂದು ಶಾಸಕ ಕಿರಣ್‌ ಕುಮಾರ ಕೊಡ್ಡಿ ಗುಡುಗಿದ್ದಾರೆ. ಇಲ್ಲಿನ ಶಾಸ್ತ್ರೀವೃತ್ತದಲ್ಲಿ ಸರಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟ ಕ್ರಮ ಖಂಡಿಸಿ ಕುಂದಾಪುರ ಬಿಜೆಪಿ...
ಉಡುಪಿದಕ್ಷಿಣ ಕನ್ನಡಮಂಗಳೂರುಮುಂಬೈಶುಭಾಶಯಸುದ್ದಿ

ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್

ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ  ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.   ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ಏಸಿ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ: ಕೃಷ್ಣರಾಜ ತಂತ್ರಿ -ಕಹಳೆ ನ್ಯೂಸ್

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯುವುದಿಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಏರ್ ಕಂಡೀಷನರ್ ಕಾರ್ಯನಿರ್ವಹಣೆ: ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಏಸಿಯು ಕೋಣೆಯಲ್ಲಿರುವ ಗಾಳಿಯನ್ನು ಶುದ್ಧಗೊಳಿಸಿ ತಂಪು ಮಾಡುತ್ತದೆ. ಹೊರತು...
1 2 3 121
Page 1 of 121