Friday, April 24, 2026

ಉಡುಪಿ

ಉಡುಪಿಸುದ್ದಿ

ಲಾರಿ-ಆಟೋ ರಿಕ್ಷಾ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಉಡುಪಿ: ಲಾರಿ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಬೈಪಾಸ್ ಬಳಿ ನಡೆದಿದೆ. ರಫಿಕ್ (37) ಮೃತ ದುರ್ದೈವಿ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ. ಇಂದು ಬೆಳಿಗ್ಗೆ ಮನೆಯಿಂದ ಮಸೀದ್ಗೆ ತೆರಳುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಫೀಕ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ...
ಉಡುಪಿಸುದ್ದಿ

ಹಳ್ಳಿ ಹುಡುಗ ಖ್ಯಾತಿಯ ಮಂಜುನಾಥ್ ಚೇರ್ಕಾಡಿಯವರು ನಾಯಕ ನಟರಾಗಿ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಆಲ್ಬಮ್ ಸಾಂಗ್ ಮುಹೂರ್ತ- ಕಹಳೆ ನ್ಯೂಸ್

ಆರ್ ಎಸ್ ಸಾಂಗ್ಸ್ ಪ್ರೋಡಕ್ಷನ್ಸ್ ಹಾಗೂ ಆರ್ಯ ಪ್ರೋಡಕ್ಷನ್ಸ್ ರವರ ಬಹುನಿರೀಕ್ಷಿತ ಕನ್ನಡ ಆಲ್ಬಂ ಹಾಡು 'ಆರ್ಯ' ಹಾಡಿನ ಚಿತ್ರೀಕರಣ ಉಡುಪಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯಿತು ಹಾಡಿನ ಮುಹೂರ್ತವನ್ನು ಉಡುಪಿಯ ಇತಿಹಾಸ ಪ್ರಸಿದ್ಧ ಕುಕ್ಕೆ ಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಸಿದ ತಂಡವು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ನಮ್ಮ ಮುಹೂರ್ತವನ್ನು ಬಿರುವೆರ್ ಕುಡ್ಲ ರಿ. ಉಡುಪಿ ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಹಾಗೂ ಖ್ಯಾತ ಉದ್ಯಮಿ ಯಾದ ರಾಜೇಶ್ ಪೂಜಾರಿ ಚಾಲನೆ...
ಉಡುಪಿಸುದ್ದಿ

ಉಡುಪಿ ಹಾವಂಜೆ ಯ ಭೋಧಿ ಸತ್ವ ಬುದ್ದ ಫೌಂಡೇಶನ್ ವತಿಯಿಂದ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್  ರವರ ಧಮ್ಮ ದೀಕ್ಷಾ ದಿನಾಚರಣೆ ಕಾರ್ಯಕ್ರಮ

ಉಡುಪಿ ಹಾವಂಜೆ ಯ ಭೋಧಿ ಸತ್ವ ಬುದ್ದ ಫೌಂಡೇಶನ್ ವತಿಯಿಂದ. ಬಾಬಾ ಸಾಹೇಬ್ ಅಂಬೇಡ್ಕರ್  ರವರ ಧಮ್ಮ ದೀಕ್ಷಾ ದಿನಾಚರಣೆ ಕಾರ್ಯಕ್ರಮ ವು  ಹಾವಂಜೆ ಬುದ್ದ ವಿಹಾರದಲ್ಲಿ  ನಡೆಯಿತು . ಈ ಪ್ರಯುಕ್ತ  ವಿಹಾರದಲ್ಲಿ ವಿಶೇಷ ಬುದ್ಧವಂದನೆ,ಧ್ಯಾನ, ಮೈತ್ರಿ ಧ್ಯಾನ ಕಾರ್ಯಕ್ರಮ ಜರಗಿತು.ಈ ಸಂಧರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಂತಹ ಬೌದ್ದ  ಅನುಯಾಯಿಗಳು ಬೌದ್ದ ಧಮ್ಮ ಧೀಕ್ಷೆ ಸ್ವೀಕರಿಸಿದರು. ಬಳಿಕ ನಡೆದ ಸಭಾ ಕಾರ್ಯ ಕ್ರಮದಲ್ಲಿ ಮಾತನಾಡಿದ ಬೋದಿ ಸತ್ವ ಬುದ್ದ...
ಉಡುಪಿಕಾರ್ಕಳಸುದ್ದಿ

ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್

ಮಾರಿಷಸ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಂದನ ಎಸ್. ಭಟ್ ಎಂಬುವವರು ಮೃತಪಟ್ಟಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಳ್ಯಕ್ಕೆ ಅವರ ಮೃತದೇಹ ತರಲು ಸಂಬಂಧಿಕರು ಮತ್ತು ಸಂಸದರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಘಟನೆ ಸೋಮವಾರ ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿನ ಸರಕಾರಿ ವ್ಯವಸ್ಥೆ ಮೂಲಕ ಹಾಗೂ ಇಲ್ಲಿನ ಸರಕಾರದ ಸಹಾಯದಿಂದ...
ಉಡುಪಿಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ 12 ಸರ್ಕಾರಿ ಅಧಿಕಾರಿಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.14ರ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ದಾವಣಗೆರೆ, ಹಾವೇರಿ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ....
ಉಡುಪಿಕಾರ್ಕಳಕ್ರೈಮ್ಸುದ್ದಿ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ-ಕಹಳೆ ನ್ಯೂಸ್

ಬ್ರಹ್ಮಾವರ : ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಪತ್ರಕರ್ತ ಜನಾರ್ದನ್​ ಕೊಡವೂರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್

ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​ ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ​ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್​ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​​...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಗೊಂದಲದ ಗೂಡಾದ ರಾಜ್ಯ ಸರ್ಕಾರದ ಸಮೀಕ್ಷೆ ; ಸಂಬಂಧವೇ ಇಲ್ಲದ ಹಲವು ಪ್ರಶ್ನೆಗಳಿಂದ ಗೊಂದಲ ಸೃಷ್ಟಿ: ಶ್ರೀನಿಧಿ ಹೆಗ್ಡೆ ಅಭಿಪ್ರಾಯ -ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿರುವ ಗಣತಿಯು ಜನತೆಗೆ ಹಾಗೂ ಗಣತಿ ಮಾಡುತ್ತಿರುವ ಸಿಬ್ಬಂದಿಗಳಿಗೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಅರ್ಥವಿಲ್ಲದ, ಗೊಂದಲಮಯವಾಗಿರುವ ಹಾಗೂ ಸಂಬಂಧವೇ ಇಲ್ಲದ ಹಲವು ಪ್ರಶ್ನೆಗಳನ್ನು ಇದರಲ್ಲಿ ತುರುಕಿಸಿರುವುದು ಎಲ್ಲ ಗೊಂದಲಗಳಿಗೂ ಕಾರಣವಾಗಿದೆ ಎಂದು ಬಿಜೆಪಿ ಉಡುಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹೇಳಿದ್ದಾರೆ. ಸ್ವತಃ ರಾಜ್ಯದ ಉಪ ಮುಖ್ಯಮಂತ್ರಿಯವರೇ ತಮ್ಮ ಮನೆಗೆ ಸಮೀಕ್ಷೆಗೆ ಬಂದವರನ್ನು ಇಷ್ಟೊoದು ಪ್ರಶ್ನೆ ಯಾಕಾಗಿ ಕೇಳುತ್ತೀರಿ, ಇಷ್ಟೊಂದು ಗೊಂದಲ ಯಾಕೇ..??...
1 8 9 10 11 12 120
Page 10 of 120