Thursday, May 14, 2026

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ; ರೆಡ್ ಅಲರ್ಟ್ ಮುಂದುವರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 10 : ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಜಾರಿಯಲ್ಲಿತ್ತು. ಜುಲೈ 13ರವರೆಗೆ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 14ರಂದು ಸಾಧಾರಣ ಮಳೆಯಾಗಲಿದ್ದು, ಅಂದು ಆರೆಂಜ್ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಐದು...
ಉಡುಪಿಸುದ್ದಿ

ಉಡುಪಿ: ಹೆದ್ದಾರಿಯಲ್ಲಿ ಅಪಘಾತದಿಂದ ಸಾವು ಸಂಭವಿಸಿದರೆ ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್ – ಕಹಳೆ ನ್ಯೂಸ್

ಉಡುಪಿ: ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ನೋವುಗಳಾದಲ್ಲಿ ಸಂಬಂಧಪಟ್ಟ ಹೆದ್ದಾರಿ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೆÇಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಮೂಲಭೂತ ಸಮಸ್ಯೆಗಳನ್ನು...
ಆರೋಗ್ಯಉಡುಪಿಸುದ್ದಿ

ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ – ಕಹಳೆ ನ್ಯೂಸ್

ಉಡುಪಿ, ಜು 07 : ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಮತ್ತು ಹಾಜಿ ಅಬ್ದುಲ್ಲಾ ‌ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇದೇ ಪ್ರಥಮ ಬಾರಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿಯ ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಗುರುವಾರದಂದು 27 ವರ್ಷ ಪ್ರಾಯದ ಸಿದ್ದಿ ಜನಾಂಗ ಮೂಲದ ಗರ್ಭಿಣಿಗೆ...
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆ ; ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವ – ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 07 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಎಚ್ಚರಿಕೆ ; ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು, ಜು 06 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು...
ಉಡುಪಿಸುದ್ದಿ

ತೀವ್ರ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.5) ರಜೆ – ಕಹಳೆ ನ್ಯೂಸ್

ಉಡುಪಿ, ಜು 05 : ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಜು. 05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ಅವರಿಸಿಕೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ತರಗತಿಗಳಿಗೆ ರಜೆ...
ಉಡುಪಿಸುದ್ದಿ

ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ ವೇಳೆ ಹೃದಯಾಘಾತದಿಂದ ಮಹಿಳೆ ಸಾವು- ಕಹಳೆ ನ್ಯೂಸ್

ಉಡುಪಿ: ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದ ಬ್ಯಾಂಕ್ ಉದ್ಯೋಗಿ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ಪಿದ ಘಟನೆ ಉಡುಪಿಯ ಉದ್ಯಾವರದ ಗುಡ್ಡೆಯಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉದ್ಯಾವರದ ವಸಂತಿ ಸಾವನ್ಪಿದ ಮಹಿಳೆ. ಕಂಟ್ಟಿಂಗೇರಿಯಲ್ಲಿರುವ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿರುವ, ವಸಂತಿ ಬೆಳಗ್ಗೆ ಕಚೇರಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದು ಇದನ್ನು ಗಮನಿಸಿದ ರಿಕ್ಷಾ ಚಾಲಕರು ಮಹಿಳೆಯನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದರು....
ಉಡುಪಿಕ್ರೈಮ್ಸುದ್ದಿ

ಕಿಡ್ನಾಪ್ ಮಾಡಿದ್ದಾರೆ ಎಂದು 5 ಲಕ್ಷ ರು. ಬೇಡಿಕೆ ಇಟ್ಟು, ಗೋವಾದಲ್ಲಿ‌ ಮಜಾ‌ಮಾಡುತ್ತಿದ್ದ ಉಡುಪಿಯ ಯುವಕ…! ; ಪೋಷಕರನ್ನು ವಂಚಿಸಿದ ಮಗ ಅಂದರ್..! – ಕಹಳೆ ನ್ಯೂಸ್

ಉಡುಪಿ (ಜೂ. 29): ಮೋಜು ಮಸ್ತಿಗಾಗಿ ಮಗನೇ ತಂದೆತಾಯಿಯರಲ್ಲಿ ಅಪಹರಣಕ್ಕೊಳಗಾದ ನಾಟಕವಾಡಿ 5 ಲಕ್ಷ ರು. ಬೇಡಿಕೆ ಇಟ್ಟಿದ್ದ ಘಟನೆ ಇಲ್ಲಿನ ಅಂಬಾಗಿಲಿನಲ್ಲಿ ನಡೆದಿದೆ. ಆರೋಪಿ ಮಗ ವರುಣ್‌ ನಾಯಕ್‌ (26) ಸಿಕ್ಕಿಬಿದ್ದು ಈಗ ಜೈಲು ಪಾಲಾಗಿದ್ದಾನೆ. ಏನಾಯ್ತು ಗೊತ್ತಾ?  ಜೂನ್ 26 ರಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ವರುಣ್ ತನ್ನ ತಂದೆ ತಾಯಿಗೆ ತನ್ನದೇ ಮೊಬೈಲ್ ನಂಬರ್ ನಿಂದ ಕರೆ ಮಾಡಿ ಆತಂಕದಿಂದ ಮಾತನಾಡಿದ್ದಾನೆ. ಯಾರೋ ದುಷ್ಕರ್ಮಿಗಳು ನನ್ನನ್ನು...
1 100 101 102 103 104 121
Page 102 of 121