Thursday, May 14, 2026

ಉಡುಪಿ

ಉಡುಪಿದಕ್ಷಿಣ ಕನ್ನಡಸುದ್ದಿ

ಪಡುಕರೆ ಕಡಲ ಕಿನಾರೆಯಲ್ಲಿ ಭಾರಿ ಗಾತ್ರದ ಕಡಲಾಮೆ ರಕ್ಷಣೆ – ಕಹಳೆ ನ್ಯೂಸ್

ಕೋಟ ಮಣೂರು ಪಡುಕರೆ ಕಡಲ ಕಿನಾರೆಯಲ್ಲಿ, ಶುಕ್ರವಾರ ಹಳೇ ಬಲೆಗೆ ಸಿಕ್ಕಿಹಾಕಿಕೊಂಡು ದಡ ಸೇರಿದ ಎರಡು ಭಾರಿ ಗಾತ್ರದ ಕಡಲಾಮೆಗಳನ್ನು ಮಣೂರು ಪಡುಕರೆ ಶ್ರೀರಾಮ್ ಫ್ರೆಂಡ್ಸ್ ಯುವಕರು ರಕ್ಷಿಸಿ ಮರಳಿ ಕಡಲಿಗೆ ಬಿಟ್ಟಿದ್ದಾರೆ. ಸಮುದ್ರದಲ್ಲಿ ಬೋಟ್‌ಗಳ ಕಡಿದು ಹೋದ ಬಲೆಗಳಿಗೆ ಸಿಲುಕಿ ಈ ಕಡಲಾಮೆಗಳು ಶುಕ್ರವಾರ ದಡ ಸೇರಿದ್ದು, ಸ್ಥಳೀಯರು ಶ್ರೀರಾಮ್ ಫ್ರೆಂಡ್ಸ್ ಸದಸ್ಯರ ಗಮನಕ್ಕೆ ತಂದಿದ್ದರು. ಯುವಕರು ಶೀಘ್ರ ಅದನ್ನು ತೆರವುಗೊಳಿಸಿ ಸಮುದ್ರಕ್ಕೆ ಮರಳಿಸಿದ್ದಾರೆ. ಶ್ರೀರಾಮ್ ಫ್ರೆಂಡ್ಸ್ನ ಕಾರ್ತಿಕ್...
ಉಡುಪಿದಕ್ಷಿಣ ಕನ್ನಡಸಿನಿಮಾಸುದ್ದಿ

ತೆರೆ ಕಾಣಲು ಸಜ್ಜಾಗಿದೆ ‘ಕಲ್ಜಿಗಡೊಂಜಿ ಬಿನ್ನಯ’ – ಸತ್ಯದ ತುಳುವೆರ್(ರಿ.) ಉಡುಪಿ ಮಂಗಳೂರು ಅರ್ಪಿಸುವ ತುಳು ಗೀತೆ – ಕಹಳೆ ನ್ಯೂಸ್

ಸತ್ಯದ ತುಳುವೆರ್(ರಿ.) ಉಡುಪಿ ಮಂಗಳೂರು ಅರ್ಪಿಸುವ, ‘ಕಲ್ಜಿಗಡೊಂಜಿ ಬಿನ್ನಯ’ ತುಳು ಗೀತೆ ವಿಕ್ಷಕರ ಮುಂದೆ ಬರಲು ಸಜ್ಜಾಗಿದೆ. ಕೊರೋನಾ ಕಷ್ಟದ ಸಮಯದಲ್ಲಿ ಕಾಲದ ಜೊತೆ ಮಾಡುವ ವಿನಂತಿ ಎಂಬ, ‘ಕಲ್ಜಿಗಡೊಂಜಿ ಬಿನ್ನಯ’ ತುಳು ಗೀತೆ ಇದೆ ಬರುವ ತಾರೀಕು ೦೫-೦೭-೨೦೨೧ಕ್ಕೆ ಸತ್ಯದ ತುಳುವೆರ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಳ್ಳಲಿದೆ. ಶಿವಪ್ರಕಾಶ್.ಎಸ್, ಪ್ರವೀಣ್ ಕುರ್ಕಾಲ್, ಜಗನ್ ಕೋಟ್ಯಾನ್, ಪ್ರಸಾದ್ ಪೂಜಾರಿ ಬಂಟ್ವಾಳ ನಿರ್ಮಾಣದಲ್ಲಿ ಮೂಡಿ ಬರಲಿರುವ ಈ ಗೀತೆಗೆ ಅಮರ್‌ನಾಥ್ ಪೂಪಾಡಿಕಲ್ಲು ಇವರ...
ಉಡುಪಿರಾಜ್ಯಸುದ್ದಿ

ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ; ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ – ಕಹಳೆ ನ್ಯೂಸ್

ಉಡುಪಿ, ಜೂ 24 : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮದ ಅನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಉಡುಪಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

“ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ” ; ದಿಗ್ವಿಜಯ್ ಸಿಂಗ್ ಹೇಳಿಕೆ ದೇಶ ವಿರೋಧಿ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ – ಕಹಳೆ ನ್ಯೂಸ್

ಉಡುಪಿ, ಜೂ. 13 : "ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ" ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.   ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ನಾನು ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಗಮನ ಹರಿಸುವುತ್ತೇನೆ ಎಂದು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಶೋಭಾ, "ಕಾಂಗ್ರೆಸ್ ಪಕ್ಷವು ತನ್ನ ಮಾನಸಿಕ...
ಉಡುಪಿಕ್ರೈಮ್ಸುದ್ದಿ

Breaking News : ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ ; ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ. ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ...
ಉಡುಪಿದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಛಾಯಾಗ್ರಾಹಕ ಡೆನಿಸ್ ರೆಗೊ ನಿಧನ – ಕಹಳೆ ನ್ಯೂಸ್

ಮಂಗಳೂರು, ಮೇ.22 : ಖ್ಯಾತ ಛಾಯಾಗ್ರಾಹಕ ಡೆನಿಸ್ ಸ್ಟುಡಿಯೋದ ಡೆನಿಸ್ ರೆಗೊ ಶನಿವಾರ ನಿಧನರಾಗಿದ್ದಾರೆ.   ಡೆನಿಸ್ ಅವರು ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಮಂಗಳೂರು ಮತ್ತು ಉಡುಪಿಯಲ್ಲಿ ಛಾಯಾಗ್ರಹಣ ಜಗತ್ತಿನಲ್ಲಿ ಡೆನಿಸ್ ಅವರು ಪರಿಚಿತ ಮುಖ. ಅವರ ಫೋಟೋ ಸ್ಟುಡಿಯೋ ಬಲ್ಮಠದಲ್ಲಿದೆ. ಇನ್ನು 50 ವರ್ಷಗಳಿಂದ ಛಾಯಾಗ್ರಾಹಣ ಕ್ಷೇತ್ರದಲ್ಲಿದ್ದು, ಜಿಲ್ಲೆಯ ಅನೇಕ ಹವ್ಯಾಸಿ ಛಾಯಾಗ್ರಾಹಕರಿಗೆ ಸ್ಫೂರ್ತಿ ನೀಡಿದರು. ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿನ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಕಾಟ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉಡುಪಿಯಲ್ಲಿ 9 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢ – ಇಬ್ಬರ ಸಾವು – ಕಹಳೆ ನ್ಯೂಸ್

ಮಂಗಳೂರು, ಮೇ 22 : ಕೋವಿಡ್ 19 ಮಾರಣಾಂತಿಕ ಸೋಂಕು ಹರಡುವಿಕೆ ನಡುವೆ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಬಹುದೊಡ್ಡ ಆತಂಕಕ್ಕೆ ಕಾರಣವಾಗಿದ್ದು ಕರಾವಳಿ ಜಿಲ್ಲೆಯಲ್ಲೂ ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ 7 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢವಾಗಿದ್ದು, ಇನ್ನು ಉಡುಪಿಯಲ್ಲಿ 9 ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಏಳು ಮಂದಿ ಹೊರಜಿಲ್ಲೆಯ ರೋಗಿಗಳಾಗಿದ್ದು ಅನ್ಯ ಚಿಕಿತ್ಸೆಗೆ ಬಂದಾಗ ರೋಗ ಪತ್ತೆಯಾಗಿದ್ದು ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ...
1 107 108 109 110 111 121
Page 109 of 121